ಶುಕ್ರವಾರ, ಮೇ 24, 2024
ಪ್ರಜ್ವಲ್ ರೇವಣ್ಣ ನೀನು ಎಲ್ಲೇ ಇದ್ದರೂ ಬಂದು ಪೊಲೀಸರ ಮುಂದೆ ಶರಣಾಗು; ಹೆಚ್ ಡಿ ದೇವೇಗೌಡ-ನನಗೆ 10 ವರ್ಷ ಇದ್ದಾಗಲೇ ನಮ್ಮ ತಂದೆ ನಮ್ಮನ್ನು ಬಿಟ್ಟು ಹೋದರು; ತಂದೆ ಯೋಗೇಶ್ವರ್ ವಿರುದ್ಧ ನಿಶಾ ಯೋಗೇಶ್ವರ್ ಆಕ್ರೋಶ: ವಿಡಿಯೋ ವೈರಲ್-RCB ಟ್ರೋಫಿ ಗೆಲ್ಲುವ ಕನಸು ಭಗ್ನ; ಸಾಮಾಜಿಕ ಜಾಲತಾಣದಲ್ಲಿ ಸಖತ್ ಟ್ರೋಲ್ ಆದ ಆರ್ಸಿಬಿ..!-ಚುನಾವಣೆಯಲ್ಲಿ ಪದೇಪದೇ ಸೋಲುತ್ತಿರುವ ಕರಾವಳಿ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಅಸಮಾಧಾನ; ಯಾರಿಗೂ‌ ಎಂಎಲ್ಸಿ ನೀಡದಿರುವ ಬಗ್ಗೆ ನಿರ್ಧಾರ?-HSRP ನಂಬರ್ ಪ್ಲೇಟ್ ಇನ್ನೂ ಅಳವಡಿಸಿಕೊಳ್ಳದ ವಾಹನ ಸವಾರರಿಗೆ ಮಹತ್ವದ ಅಪ್ಡೇಟ್..!-ಒಡಿಶಾ ಮತ್ತು ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಲಿದೆ ಚಂಡಮಾರುತ; ಕರ್ನಾಟಕದಲ್ಲೂ ಮಳೆ ಮುನ್ಸೂಚನೆ..!-RCB ಸೋಲಿನ ಬಳಿಕ ಮೈದಾನದಲ್ಲೇ ಕಣ್ಣೀರು ಸುರಿಸಿ ನಿವೃತ್ತಿ ಘೋಷಿಸಿದ ಆಪತ್ಭಾಂದವ ದಿನೇಶ್ ಕಾರ್ತಿಕ್ ; ಇಲ್ಲಿದೆ ವಿಡಿಯೋ-ಬೆಳ್ತಂಗಡಿ ಹೈಡ್ರಾಮ: ರಾಜಕೀಯವಾಗಿ ಕೈ ಸುಟ್ಟುಕೊಂಡ ಬಿಜೆಪಿ ಹಾಗೂ ಕಾಂಗ್ರೆಸ್!-ಜಾತಿ, ಸಮುದಾಯ, ಭಾಷೆ ಮತ್ತು ಧಾರ್ಮಿಕ ಮಾರ್ಗಗಳಲ್ಲಿ ಪ್ರಚಾರ ಮಾಡುವುದನ್ನು ನಿಲ್ಲಿಸಿ; ಬಿಜೆಪಿ, ಕಾಂಗ್ರೆಸ್ ಗೆ ಚುನಾವಣಾ ಆಯೋಗ ತಾಕೀತು..!-ಕೊಹ್ಲಿಯನ್ನು ಹೊಗಳಿ ಆರ್ಸಿಬಿ ಪರ ಟ್ವೀಟ್ ಮಾಡಿದ ವಿಜಯ ಮಲ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತೆಲಂಗಾಣ ಶಾಸಕ ರಾಜಾ ಸಿಂಗ್‌ ಠಾಕೂರ್‌ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು!

Twitter
Facebook
LinkedIn
WhatsApp
ತೆಲಂಗಾಣ ಶಾಸಕ ರಾಜಾ ಸಿಂಗ್‌ ಠಾಕೂರ್‌ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು!

ಬೆಂಗಳೂರು, ಅ 21: 2017ರಲ್ಲಿ ಯಾದಗಿರಿಯಲ್ಲಿ ಪ್ರಚೋದನಕಾರಿ ಭಾಷಣ ಆರೋಪದಡಿ ತೆಲಂಗಾಣ ಶಾಸಕ ರಾಜಾ ಸಿಂಗ್‌ ಠಾಕೂರ್‌ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್‌ ರದ್ದು ಗೊಳಿಸಿದೆ. ನಿಯಮದಂತೆ ವಿಚಾರಣೆಗೆ ಪೂರ್ವಾನುಮತಿ ಪಡೆದಿಲ್ಲಎಂಬ ಕಾರಣಕ್ಕೆ ಪ್ರಕರಣ ರದ್ದುಗೊಳಿಸುತ್ತಿರುವುದಾಗಿ ನ್ಯಾಯಾಲಯ ಹೇಳಿದೆ.

ಇದರಿಂದಾಗಿ ಶಾಸಕ ರಾಜಾಸಿಂಗ್ ನಿಟ್ಟುಸಿರು ಬಿಡುವಂತಾಗಿದೆ. ರಾಜಾ ಸಿಂಗ್‌ ಠಾಕೂರ್‌ ಸಲ್ಲಿಸಿದ್ದ ಪ್ರಕರಣವನ್ನು ಆಲಿಸಿದ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.

ಪ್ರಕರಣದ ವಿವರ: ಯಾದಗಿರಿ ಜಿಲ್ಲೆಯಲ್ಲಿ2017ರ ಡಿ.12ರಂದು ನಡೆದ ಹಿಂದೂ ವಿರಾಟ ಸಮಾವೇಶದಲ್ಲಿಅರ್ಜಿದಾರರು ಭಾಗವಹಿಸಿದ್ದರು. ಅವರಿಗೆ ಶಸ್ತ್ರಾಸ್ತ್ರಗಳನ್ನು ಬಳಕೆ ಮಾಡುವಂತಿಲ್ಲ ಹಾಗೂ ಯಾವುದೇ ವಿವಾದಾತ್ಮಕ ಹೇಳಿಕೆ ನೀಡುವಂತಿಲ್ಲಎಂದು ಮೊದಲನೇ ಷರತ್ತು ವಿಧಿಸಿ ಸಭೆ ನಡೆಸಲು ಅನುಮತಿ ನೀಡಲಾಗಿತ್ತು.

ಆದರೂ, ಸಹ ಅವರು ವೇದಿಕೆಯಲ್ಲಿಕತ್ತಿಯನ್ನು ಝಳಪಿಸಿ ಜನರನ್ನು ಪ್ರಚೋದಿಸುವಂತಹ ಭಾಷಣವನ್ನು ಮಾಡಿದ್ದರು. ಹಾಗಾಗಿ ಅವರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿತ್ತು. ಪೊಲೀಸರು ತನಿಖೆಯನ್ನು ಪೂರ್ಣಗೊಳಿಸಿ 2019ರಲ್ಲಿ ಯಾದಗಿರಿ ಜಿಲ್ಲಾ ಮ್ಯಾಜಿಸ್ಪ್ರೇಟ್‌ ಕೋರ್ಟ್‌ನಲ್ಲಿಐಪಿಸಿ ಸೆಕ್ಷನ್‌ 153ಎ ಮತ್ತು ಶಸ್ತ್ರಾಸ್ತ್ರ ಕಾಯಿದೆ ಸೆಕ್ಷನ್‌ 25(1ಎಎ) ಅಡಿಯಲ್ಲಿಆರೋಪ ಹೊರಿಸಿ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು.

ಈ ಪ್ರಕರಣದಲ್ಲಿಒರ್ವ ಜನಪ್ರತಿನಿಧಿ ಇದ್ದ ಕಾರಣ ಪ್ರಕರಣವನ್ನು ಸಂಸದರು/ಶಾಸಕರ ವಿರುದ್ಧದ ಪ್ರಕರಣಗಳನ್ನು ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿತ್ತು. ವಿಶೇಷ ನ್ಯಾಯಾಲಯ ಆರೋಪದ ಕಾಗ್ನಿಜೆನ್ಸ್‌ ತೆಗೆದುಕೊಂಡು ಆರೋಪ ನಿಗದಿಗೆ ವಿಚಾರಣೆ ನಡೆಸುತ್ತಿತ್ತು.

ಕೋರ್ಟ್ ಆದೇಶವೇನು?

ಅರ್ಜಿದಾರರ ವಿರುದ್ಧ ಆರೋಪಗಳನ್ನು ಹೊರಿಸಲಾಗಿದೆ. ಆದರೆ ವಿಚಾರಣೆಗೆ ಪೂರ್ವಾನುಮತಿ ಪಡೆದಿಲ್ಲ. ಹಾಗಾಗಿ ಐಪಿಸಿ ಸೆಕ್ಷನ್‌ 153ಎ ಅವರಿಗೆ ಅನ್ವಯಿಸುವುದಿಲ್ಲ. ಜತೆಗೆ ಮೇಲ್ನೋಟಕ್ಕೆ ಸಾಕ್ಷ್ಯಗಳೂ ಸಹ ಇಲ್ಲ. ಹಾಗಾಗಿ ಪ್ರಕರಣ ರದ್ದುಗೊಳಿಸಲಾಗುತ್ತಿದೆ” ಎಂದು ನ್ಯಾಯಾಲಯ ಆದೇಶಿಸಿದೆ.

ಅರ್ಜಿದಾರರ ಪರ ವಕೀಲರು, ಅಪರಾಧ ದಂಡ ಸಂಹಿತೆ ಸೆಕ್ಷನ್‌ 193 ಅಡಿಯಲ್ಲಿ ಕೇಂದ್ರ ಅಥವಾ ರಾಜ್ಯ ಸರಕಾರದಿಂದ ಅಗತ್ಯ ಪೂರ್ವಾನುಮತಿ ಪಡೆಯದೆ ವಿಚಾರಣೆ ನಡೆಸಲಾಗುತ್ತಿದೆ. ಇದು ಅಕ್ರಮ ಹಾಗೂ ಕಾನೂನು ಬಾಹಿರ ಎಂದು ವಾದಿಸಿದ್ದರು.

ಅಲ್ಲದೆ, ಶಸ್ತ್ರಾಸ್ತ್ರ ಕಾಯಿದೆಯಡಿ ಆರೋಪ ಹೊರಿಸಲಾಗಿದೆ. ಆದರೆ ಅದಕ್ಕೆ ಯಾವುದೇ ಪ್ರತ್ಯಕ್ಷದರ್ಶಿಗಳ ಸಾಕ್ಷಿಗಳಿಲ್ಲ. ಯಾವುದೇ ಸಾಕ್ಷಿಗಳಿಲ್ಲದೆ ಅಕ್ರಮವಾಗಿ ಹೂಡಿರುವ ಆರೋಪಗಳು ಕಾನೂನಿನಡಿ ಊರ್ಜಿತವಲ್ಲಎಂದು ಹೇಳಿದ್ದರು.

ಆದರೆ ಪ್ರಾಸಿಕ್ಯೂಷನ್‌ ಅರ್ಜಿದಾರರ ವಾದವನ್ನು ವಿರೋಧಿಸಿ, ಅರ್ಜಿದಾರರು ಕತ್ತಿ ಪ್ರದರ್ಶಿಸಿದ್ದಾರೆ ಮತ್ತು ಪ್ರಚೋದನಾತ್ಮಕ ಭಾಷಣ ಮಾಡಿದ್ದಾರೆ. ಅದು ಐಪಿಸಿ ಸೆಕ್ಷನ್‌ 153ಎ ಅಡಿ ಅಪರಾಧವಾಗಿದೆ. ಪೂರ್ವಾನುಮತಿಯನ್ನು ಐದು ವರ್ಷದೊಳಗೆ ಯಾವಾಗ ಬೇಕಾದರೂ ಪಡೆದುಕೊಳ್ಳಬಹುದು ಎಂದು ವಾದ ಮಂಡಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ