
ಲೀಸ್ ಆದ ಚಿತ್ರಮಂದಿರಗಳಲ್ಲಿ ಹೌಸ್ಫುಲ್ (Houseful) ಪ್ರದರ್ಶನ ಕಾಣುತ್ತಿದೆ.ಚಿತ್ರ ಮೂರು ದಿನಗಳಲ್ಲಿ ಒಟ್ಟಾರೆಯಾಗಿ ₹31.06 ಕೋಟಿ ಗಳಿಕೆ ದಾಖಲಿಸಿದೆ ಎಂದು ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹೇಳಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ದೇಶದಾದ್ಯಂತ ಸಂಚಲನ ಸೃಷ್ಟಿಸಿರುವ, ವಿವೇಕ್ ಅಗ್ನಿಹೋತ್ರಿ (Vivek Agnihotri) ಅವರ ‘ದಿ ಕಾಶ್ಮೀರ್ ಫೈಲ್ಸ್’ (The Kashmir Files) ಸಿನಿಮಾ ಬಾಕ್ಸ್ ಆಫೀಸ್(Box Office)ನಲ್ಲಿ ಉತ್ತಮ ಗಳಿಕೆ ದಾಖಲಿಸಿದೆ. ಮಾರ್ಚ್ 11ರಂದು ದೇಶದಾದ್ಯಂತ 630 ಪರದೆಗಳಲ್ಲಿ ತೆರೆಕಂಡಿದ್ದ ‘ದಿ ಕಾಶ್ಮೀರ್ ಫೈಲ್ಸ್’, ಉತ್ತಮ ಪ್ರತಿಕ್ರಿಯೆ ಪಡೆದುಕೊಂಡು ಎರಡೇ ದಿನದಲ್ಲಿ 2000ಕ್ಕೂ ಅಧಿಕ ಪರದೆಗಳಲ್ಲಿ ಪ್ರದರ್ಶನ ಕಾಣುತ್ತಿದೆ. ರಿಲೀಸ್ ಆದ ಮೊದಲ ದಿನ ಸಿನಿಮಾ ಫ್ಲಾಪ್ ಈ ರೀತಿಯ ಸಿನಿಮಾಗಳು ಇಲ್ಲಿ ವರ್ಕೌಟ್ ಆಗಲ್ಲ ಎಂದು ಮಾತನಾಡಿಕೊಳ್ಳುತ್ತಿದ್ದರು. ಕೇವಲ ಒಂದೇ ದಿನದಲ್ಲಿ ಮೌತ್ ಪಬ್ಲಿಸಿಟಿ(Mouth Publicity)ಯಿಂದ ಸಿನಿಮಾ ಸಖತ್ ಹಿಟ್ ಆಗಿದೆ. ರಿಲೀಸ್ ಆದ ಚಿತ್ರಮಂದಿರಗಳಲ್ಲಿ ಹೌಸ್ಫುಲ್ (Houseful) ಪ್ರದರ್ಶನ ಕಾಣುತ್ತಿದೆ.ಚಿತ್ರ ಮೂರು ದಿನಗಳಲ್ಲಿ ಒಟ್ಟಾರೆಯಾಗಿ ₹31.06 ಕೋಟಿ ಗಳಿಕೆ ದಾಖಲಿಸಿದೆ ಎಂದು ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹೇಳಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಸಿನಿಮಾ ನೋಡಲು ಪೊಲೀಸರಿಗೆ ರಜೆ ಘೋಷಣೆ!
‘ದಿ ಕಾಶ್ಮೀರ್ ಫೈಲ್ಸ್‘ ಸಿನಿಮಾ ವೀಕ್ಷಿಸಲು ಅನುಕೂಲವಾಗುವಂತೆ ಮಧ್ಯ ಪ್ರದೇಶ ಪೊಲೀಸರಿಗೆ ರಜೆ ಘೋಷಿಸಲಾಗುತ್ತದೆ ಎಂದು ಅಲ್ಲಿನ ಸರ್ಕಾರ ಹೇಳಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಭಾನುವಾರ ‘ದಿ ಕಾಶ್ಮೀರ್ ಫೈಲ್ಸ್‘ ಸಿನಿಮಾಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡಿದ್ದಾರೆ. ಜತೆಗೆ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು, ಪೊಲೀಸರಿಗೆ ‘ದಿ ಕಾಶ್ಮೀರ್ ಫೈಲ್ಸ್‘ ಸಿನಿಮಾ ವೀಕ್ಷಿಸಲು ರಜೆ ನೀಡುತ್ತಿದ್ದೇವೆ. ಈ ಕುರಿತು ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.ಝೀ ಸ್ಟುಡಿಯೊ ನಿರ್ಮಾಣದ ‘ದಿ ಕಾಶ್ಮೀರ್ ಫೈಲ್ಸ್‘ ಚಿತ್ರವನ್ನು ವಿವೇಕ್ ಅಗ್ನಿಹೋತ್ರಿ ನಿರ್ದೇಶಿಸಿದ್ದು, ಕಾಶ್ಮೀರದಲ್ಲಿ ಪಂಡಿತರ ಮೇಲೆ ನಡೆದಿರುವ ದೌರ್ಜನ್ಯವನ್ನು ಸಿನಿಮಾ ತೆರೆಯ ಮೇಲೆ ಪ್ರದರ್ಶಿಸಲಾಗಿದೆ.
ಹಲವು ರಾಜ್ಯಗಳಲ್ಲಿ ಚಿತ್ರಕ್ಕೆ ತೆರಿಗೆ ವಿನಾಯಿತಿ!
‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದ ಬಗ್ಗೆ ಚರ್ಚೆ ನಿಧಾನಕ್ಕೆ ಕಾವೇರುತ್ತಿರುವ ಹೊತ್ತಿನಲ್ಲಿಯೇ ಕರ್ನಾಟಕದಲ್ಲಿ ಸಿನಿಮಾಕ್ಕೆ ಸಂಪೂರ್ಣ ತೆರಿಗೆ ವಿನಾಯಿತಿ ದೊರೆತಿದೆ. ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಅವರು ಬಂಡವಾಳ ಹೂಡಿದ್ದಾರೆ. ಕರ್ನಾಟಕ ಸೇರಿ ಅನೇಕ ರಾಜ್ಯಗಳಲ್ಲಿ ಈ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ. ಮಾರ್ಚ್ 13 ರಂದು ಸಿನಿಮಾ ವೀಕ್ಷಿಸಿದ ಸಿಎಂ ಬಸವರಾಜ ಬೊಮ್ಮಾಯಿ ಸಿನಿಮಾಕ್ಕೆ ರಾಜ್ಯದ ಸಿನಿಮಾ ಮಂದಿರಗಳಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ.
‘ದಿ ಕಾಶ್ಮೀರ್ ಫೈಲ್ಸ್‘ ಸಿನಿಮಾವು 1990 ರಲ್ಲಿ ಜಮ್ಮು ಕಾಶ್ಮೀರದಲ್ಲಿ ನಡೆದ ಕಾಶ್ಮೀರಿ ಪಂಡಿತರ ಹತ್ಯೆಯ ಕುರಿತಾದ ಕತೆಯನ್ನು ಒಳಗೊಂಡಿದೆ. ಕಾಶ್ಮೀರಿ ಪಂಡಿತರು ಏಕೆ ಮತ್ತು ಹೇಗೆ ಜಮ್ಮು ಕಾಶ್ಮೀರ ಬಿಟ್ಟು ತೆರಳಿದರು ಎಂಬುದನ್ನು ಸಿನಿಮಾದಲ್ಲಿ ತೋರಿಸಲಾಗಿದೆ. ಈ ಹಿಂದೆಯೂ ಇದೆ ರೀತಿಯ ಕಥೆಗಳನ್ನು ಹೊಂದಿರುವ ಸಿನಿಮಾಗಳು ಬಂದಿವೆ. ಆದರೂ, ದಿ ಕಾಶ್ಮೀರಿ ಫೈಲ್ಸ್ ಜನರ ಗಮನ ಸೆಳೆದಿದೆ. ಈ ಸಿನಿಮಾವನ್ನು ‘ಪ್ರೊಪಾಗಾಂಡ’ ಎಂದೂ ಸಹ ಕರೆಯಲಾಗುತ್ತಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist