ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಶವಗಳ ರಾಶಿಯಿಂದ ಮಗನನ್ನು ಜೀವಂತವಾಗಿ ಹೊರ ತೆಗೆದ ತಂದೆ

Twitter
Facebook
LinkedIn
WhatsApp
1 4

ಅಲ್ಲಿ ಹೆಣಗಳ ರಾಶಿ, ಎಲ್ಲಾ ಪೋಷಕರು, ಸಂಬಂಧಿಕರು ಮೂಗು ಮುಚ್ಚಿಕೊಂಡು ತಮ್ಮವರ ಹುಡುಕಾಟದಲ್ಲಿ ತೊಡಗಿದ್ದರು. ಆಗಲೇ ಅಪಘಾತ ಸಂಭವಿಸಿ ಹಲವು ಗಂಟೆಗಳು ಕಳೆದೇ ಬಿಟ್ಟಿತ್ತು. ತಮ್ಮವರು ಬದುಕಿರುವುದು ಹಾಗಿರಲಿ ಗುರುತು ಸಿಕ್ಕಿದರೆ ಸಾಕಪ್ಪಾ ಎನ್ನುವಂತಿದ್ದವು ಸಂಬಂಧಿಕರ ಕಣ್ಣುಗಳು. ಒಂದೆಡೆ ತಮ್ಮವರ ಹುಡುಕಾಡಿ ಹುಡುಕಾಡಿ ಕಣ್ಣೀರು ಬತ್ತಿ ಹೋಗಿವೆ, ಕಣ್ಣುಗಳು ಮಂಜಾಗುತ್ತಿವೆ, ಇನ್ನೊಂದೆಡೆ ಶವಗಳಿಂದ ಬರುತ್ತಿದ್ದ ದುರ್ನಾತ, ಎಲ್ಲವನ್ನೂ ಸಹಿಸಿಕೊಂಡು ಜನರು ತಮ್ಮವರ ಹುಡುಕಾಟದಲ್ಲಿ ತೊಡಗಿದ್ದರು.

ಹಾಗೆಯೇ ತಂದೆಯೊಬ್ಬರು ತನ್ನ ಮಗ ಸತ್ತಿದ್ದಾನೆ ಎಂದು ನಂಬಲು ಸಾಧ್ಯವೇ ಇಲ್ಲ ಎಂದು ಹೇಳುತ್ತಿದ್ದರು, ಆದರೆ ಅಲ್ಲಿದ್ದವರು ಆತ ದುಃಖದಲ್ಲಿ ಹಾಗೆ ಹೇಳುತ್ತಿರಬಹುದು ಎಂದುಕೊಂಡಿದ್ದಾರೆ. ಆದರೆ ಅವರ ನಂಬಿಕೆ ನಿಜವಾಯಿತು ಆ ಶವಗಳ ಮಧ್ಯೆ ಮಗನನ್ನು ಜೀವಂತವಾಗಿ ಹೊರತೆಗೆದಿದ್ದಾರೆ.

ಬಾಲಾಸೋರ್​ನ ಶಾಲೆಯೊಂದನ್ನು ತಾತ್ಕಾಲಿಕ ಶವಾಗಾರವನ್ನಾಗಿ ಮಾಡಲಾಗಿದೆ. ಬಿಸ್ವಜಿತ್ ಮಲಿಕ್ ಅವರ ತಂದೆ ತಕ್ಷಣವೇ ಆಂಬ್ಯುಲೆನ್ಸ್‌ನಲ್ಲಿ 230 ಕಿಮೀ ದೂರದಲ್ಲಿರುವ ಮಗನನ್ನು ಹುಡುಕಲು ಬಂದಿದ್ದರು. ಅವರು ತಮ್ಮ ಮಗನನ್ನು ಶವಾಗಾರದಿಂದ ಹೊರತೆಗೆದು ಆಸ್ಪತ್ರೆಗೆ ಸೇರಿಸಿದರು.

ಎಸ್ ಎಸ್ ಕೆಎಂ ಆಸ್ಪತ್ರೆಯ ಟ್ರಾಮಾ ಕೇರ್ ಯೂನಿಟ್ ನಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಬಿಸ್ವಜಿತ್ ಸೋಮವಾರ ಮತ್ತೊಂದು ಸುತ್ತಿನ ಶಸ್ತ್ರಚಿಕಿತ್ಸೆಗೆ ಒಳಗಾಗುವ ನಿರೀಕ್ಷೆಯಿದೆ. ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ, ಆದರೆ ಅವರ ಸ್ಥಿತಿ ಸ್ಥಿರವಾಗಿದೆ. ಹೌರಾದಲ್ಲಿ ಹೆಲ್ಲರಾಮ್ ಅಂಗಡಿ ನಡೆಸುತ್ತಿದ್ದಾರೆ. ಆತ ತನ್ನ ಮಗ ಬಿಸ್ವಜಿತ್ ನನ್ನು ಶಾಲಿಮಾರ್ ಸ್ಟೇಷನ್ ನಲ್ಲಿ ಡ್ರಾಪ್ ಮಾಡಿದ್ದರು.

ಅಪಘಾತದ ನಂತರ ಬಿಸ್ವಜೀತ್ ಜೊತೆ ಮಾತನಾಡಿದ್ದರು ನೋವಿನಿಂದ ನರಳುತ್ತಿದ್ದರು ಎಂದು ಹೇಳಲಾಗಿದೆ, ಮಗನನ್ನು ಹುಡುಕಲು ತಕ್ಷಣವೇ ಅವರು ಊರಿನಿಂದ ಹೊರಟಿದ್ದರು.  ಮಾಧ್ಯಮ ವರದಿಗಳ ಪ್ರಕಾರ ಬಿಸ್ವಜಿತ್ ಕೋಲ್ಕತ್ತಾ ತಲುಪುವವರೆಗೂ ಪ್ರಜ್ಞೆ ಬಂದಿರಲಿಲ್ಲ. ಬೆಳಗ್ಗೆ 8:30ರ ಸುಮಾರಿಗೆ ಅವರನ್ನು ಎಸ್‌ಎಸ್‌ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ಬಿಸ್ವಜೀತ್ ಅವರ ಪಾದದ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ಒಡಿಶಾದಲ್ಲಿ ತ್ರಿವಳಿ ರೈಲು ಅಪಘಾತ ಸಂಭವಿಸಿದೆ, ಅದರಲ್ಲಿ ಇಲ್ಲಿಯವರೆಗೆ 257 ಮಂದಿ ಮೃತಪಟ್ಟಿದ್ದೂ ಸಾವಿರಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ ಎನ್ನುವ ಮಾಹಿತಿ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist