ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹೆಂಡತಿಯನ್ನು ಜೊತೆಗೆ ಕಳಿಸ್ತಿಲ್ಲ ಎಂದು ಕೋಪಗೊಂಡು ಮಗಳನ್ನು ಕೊಟ್ಟ ಮಾವನನ್ನೇ ಹತ್ಯೆಗೈದ ಅಳಿಯ

Twitter
Facebook
LinkedIn
WhatsApp
ಹೆಂಡತಿಯನ್ನು ಜೊತೆಗೆ ಕಳಿಸ್ತಿಲ್ಲ ಎಂದು ಕೋಪಗೊಂಡು ಮಗಳನ್ನು ಕೊಟ್ಟ ಮಾವನನ್ನೇ ಹತ್ಯೆಗೈದ ಅಳಿಯ

ಹಾಸನ, ಜ.26: ಹೆಂಡತಿಯನ್ನು ತನ್ನೊಟ್ಟಿಗೆ ಕಳಿಸ್ತಿಲ್ಲ ಎಂದು ಕೋಪಗೊಂಡ ಅಳಿಯ, ಮಗಳನ್ನು ಕೊಟ್ಟ ಮಾವನನ್ನೇ ಹತ್ಯೆಗೈದ ಘಟನೆ ಹಾಸನದಲ್ಲಿ (Hassan) ನಡೆದಿದೆ. ಕುಡಿದ‌ ಮತ್ತಿನಲ್ಲಿ ಮಾವನ ಮೇಲೆ ಹಲ್ಲೆ (Assault) ಮಾಡಿ ಕೊಲೆ ಮಾಡಿದ್ದಾನೆ. ಬೇಲೂರು (Belur) ತಾಲೂಕಿನ ರಾಮೇನಹಳ್ಳಿಯ ತಮ್ಮಯ್ಯ (64) ಮೃತ ವ್ಯಕ್ತಿ. ಬಲ್ಲೇನಹಳ್ಳಿ ಗ್ರಾಮದ ಅಳಿಯ ಜಗದೀಶ್ (45) ವಿರುದ್ಧ ಕೊಲೆ ಆರೋಪ ಕೇಳಿ ಬಂದಿದೆ.

20 ವರ್ಷಗಳ ಹಿಂದೆ ತಮ್ಮಯ್ಯ ಪುತ್ರಿಯನ್ನು ಜಗದೀಶ್ ಮದುವೆಯಾಗಿದ್ದ. ತಮ್ಮಯ್ಯಗೆ ಗಂಡು ಮಕ್ಕಳಿಲ್ಲದ ಕಾರಣ ತನ್ನನ್ನು ನೋಡಿಕೊಳ್ಳಲೆಂದು ಮಗಳನ್ನು ಮನೆಯಲ್ಲೇ ಇರಿಸಿಕೊಂಡಿದ್ದ. ಮತ್ತೊಂದೆಡೆ ಪತಿ ಜಗದೀಶ್, ತನಗೆ ಮನೆಯ ಜವಾಬ್ದಾರಿ ನೀಡುತ್ತಿಲ್ಲ ಎಂದು ಪತ್ನಿಯನ್ನ ತನ್ನ ಮನೆಗೆ ವಾಪಸ್ ಕಳಿಸುವಂತೆ ಪದೇ ಪದೆ ಜಗಳ ಮಾಡುತ್ತಿದ್ದ.

ನಿನ್ನೆ ಮನೆ ಬಳಿಯೇ ಬಂದು ಮಾವನ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ ಹಲ್ಲೆಯಿಂದ ಅಸ್ವಸ್ಥಗೊಂಡಿದ್ದ ತಮ್ಮಯ್ಯನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವು ಸಂಭವಿಸಿದೆ. ಸಾರ್ವಜನಿಕರು ಜಗದೀಶ್‌ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕುಡಿತದ ದಾಸನಾಗಿದ್ದ ಆರೋಪಿ ಪೊಲೀಸರ ವಶದಲ್ಲಿದ್ದಾನೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹೊತ್ತಿ ಉರಿದ ಕಾರು; ಪ್ರಾಣಾಪಾಯದಿಂದ ಪಾರು

ಹೆದ್ದಾರಿಯಲ್ಲೇ ಕಾರೊಂದು ಹೊತ್ತಿ ಉರಿದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಎನ್​​.ವಡ್ಡಹಳ್ಳಿಯಲ್ಲಿ ಘಟನೆ ನಡೆದಿದ್ದು, ಕಾರ್​​ನಲ್ಲಿದ್ದ ಒಂದು ಮಗು ಸೇರಿ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನ ಮಹೇಶ್ ಎಂಬುವರಿಗೆ ಸೇರಿದ ಕಾರು, ತಾಂತ್ರಿಕ ದೋಷದಿಂದ ಹೊತ್ತಿ ಉರಿದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ನಂಗಲಿ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ರು. ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist