ಭಾನುವಾರ, ಅಕ್ಟೋಬರ್ 6, 2024
ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.-Hathras: ಶಾಲೆಯ ಏಳಿಗೆಗಾಗಿ ಬಾಲಕನ ಬಲಿ, ಐವರ ಬಂಧನ-ಮುಡಾ ಕೇಸ್ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಡಿ.ಕೆ ಶಿವಕುಮಾರ್ ಭೇಟಿಯಾದ ಸಂಸದ ತೇಜಸ್ವಿ ಸೂರ್ಯ; ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಚರ್ಚೆ!

Twitter
Facebook
LinkedIn
WhatsApp
ಡಿ.ಕೆ ಶಿವಕುಮಾರ್ ಭೇಟಿಯಾದ ಸಂಸದ ತೇಜಸ್ವಿ ಸೂರ್ಯ; ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಚರ್ಚೆ!

ಬೆಂಗಳೂರು: ಬಿಜೆಪಿ ಸಂಸದ ಹಾಗೂ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಡಿಕೆಶಿ ಗೃಹ ಕಚೇರಿಗೆ ತೆರಳಿ ಖುದ್ದು ಅವರನ್ನು ಭೇಟಿಯಾಗಿ, ಕೆಲಕಾಲ ಚರ್ಚೆ ನಡೆಸಿದ್ದಾರೆ. ಈ ವಿಚಾರವನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದು, ಲೋಕಸಭಾ ಸದಸ್ಯರಾದ ತೇಜಸ್ವಿ ಸೂರ್ಯ ಅವರು ಇಂದು ನನ್ನನ್ನು ಗೃಹ ಕಚೇರಿಯಲ್ಲಿ ಭೇಟಿಯಾಗಿ ಹಲವು ವಿಷಯಗಳ‌ ಕುರಿತು ಚರ್ಚಿಸಿದರು ಎಂದು ಬರೆದುಕೊಂಡಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಅವರೂ ಟ್ವೀಟ್‌ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ನಗರದ ಮೂಲಸೌಕರ್ಯಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಲಾಗಿದೆ.

K-RIDE ಮತ್ತು BMRCL ಎರಡರ MDಗಳ ಪ್ರಮುಖ ಹುದ್ದೆಗಳು ಕಳೆದ 5-6 ತಿಂಗಳುಗಳಿಂದ ಖಾಲಿ ಉಳಿದಿದ್ದು, ಇದಕ್ಕೆ ಪೂರ್ಣಾವಧಿ ಎಂಡಿಗಳನ್ನು ನೇಮಕ ಮಾಡುವಂತೆ ಮನವಿ ಮಾಡಿದ್ದೇನೆ. ಎರಡೂ ಮನವಿಗಳಿಗೆ ತಕ್ಷಣ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

2019ರಲ್ಲಿ ನಾನು ಬನಶಂಕರಿ ಮೆಟ್ರೋ ಸ್ಟೇಷನ್ ಮತ್ತು ಬನಶಂಕರಿ BMTC ಬಸ್ ಟರ್ಮಿನಲ್ ನಡುವೆ ಸ್ಕೈವಾಕ್ ಅನ್ನು ಪ್ರಸ್ತಾಪಿಸಿದ್ದೆ. ಈ ಯೋಜನೆಯನ್ನು ತ್ವರಿತಗೊಳಿಸುವಂತೆ ಮನವಿ ಮಾಡಿದ್ದೇನೆ. ನಮ್ಮ ಮೆಟ್ರೋ ಮೂರನೇ ಹಂತವನ್ನು ಈ ಹಿಂದೆ ರಾಜ್ಯ ಸರ್ಕಾರವು ಅನುಮೋದಿಸಿದೆ. ಆದರೆ, ಪರಿಷ್ಕೃತ ಡಿಪಿಆರ್ ಈಗ ಸಲ್ಲಿಕೆಗೆ ಬಾಕಿ ಇದ್ದು, ಇದರ ಬಗ್ಗೆಯೂ ಚರ್ಚಿಸಿದ್ದಾರೆ.

ಬೆಂಗಳೂರಿನಲ್ಲಿ ಸುರಂಗ ರಸ್ತೆಗಳನ್ನು ನಿರ್ಮಿಸುವ ಪ್ರಸ್ತಾಪವನ್ನು ನಾವು ಚರ್ಚಿಸಿದೆವು. ಹೆಚ್ಚಿನ ರಸ್ತೆಗಳನ್ನು ನಿರ್ಮಿಸುವ ಮೂಲಕ ಸಂಚಾರ ದಟ್ಟಣೆಯನ್ನು ಎಂದಿಗೂ ಪರಿಹರಿಸಲಾಗುವುದಿಲ್ಲ. ಆದ್ದರಿಂದ ಸುರಂಗ ರಸ್ತೆಗಳ ಬದಲಿಗೆ ಸಾಮೂಹಿಕ ಕ್ಷಿಪ್ರ ಸಾರಿಗೆ ರೈಲು ವ್ಯವಸ್ಥೆಗಳ ಕಲ್ಪನೆಯನ್ನು ಪ್ರೋತ್ಸಾಹಿಸಬೇಕು ಎಂದು ಡಿಕೆಶಿಗೆ ತೇಜಸ್ವಿ ಸಲಹೆ ನೀಡಿದ್ದಾರೆ.

ಸಂಚಾರ ದಟ್ಟಣೆ ನಿವಾರಣೆಗೆ ಹೆಚ್ಚಿನ ರಸ್ತೆಗಳು ಪರಿಹಾರವಲ್ಲ. ಬೆಂಗಳೂರಿನ ಹೆಚ್ಚಿನ ಜನಸಂಖ್ಯೆಗೆ ಅನುಕೂಲವಾಗುವಂತೆ ಸುರಂಗ ರಸ್ತೆಗಳ ಬದಲಿಗೆ ಸಮೂಹ ಕ್ಷಿಪ್ರ ಸಾರಿಗೆ ವ್ಯವಸ್ಥೆಗಳಲ್ಲಿ ಸಾರ್ವಜನಿಕ ಹಣವನ್ನು ಹೂಡಿಕೆ ಮಾಡುವಂತೆ ಒತ್ತಾಯಿಸಿದ್ದಾರೆ.

ಡಿಸಿಎಂ ನನ್ನ ಸಲಹೆಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಿ ಕ್ರಮದ ಭರವಸೆ ನೀಡಿರುವುದು ಸಂತಸ ತಂದಿದೆ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ