ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರಾವಳಿಯಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆ ಸಾಧ್ಯತೆ!

Twitter
Facebook
LinkedIn
WhatsApp
ಕರಾವಳಿಯಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆ ಸಾಧ್ಯತೆ!

ಕೊಡಗು, ಹಾಸನ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡದಲ್ಲೂ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಧರ್ಮಸ್ಥಳ, ಸಕಲೇಶಪುರ, ಭಾಗಮಂಡಲ,ಶ್ರೀರಂಗಪಟ್ಟಣ, ಕಡೂರು, ಕಳಸ, ಸೋಮವಾರಪೇಟೆ, ಸರಗೂರು,ಕೊಳ್ಳೇಗಾಲ, ಕುಂದಾಪುರ, ಅಜ್ಜಂಪುರ, ಟಿ ನರಸೀಪುರ, ಕೃಷ್ಣರಾಜಪೇಟೆ, ಚಿಕ್ಕಮಗಳೂರು, ಬಾಳೆಹೊನ್ನೂರು, ಯುಗಟಿ, ನಾಪೊಕ್ಲು, ಹಾರಂಗಿ, ಅರಕಲಗೂಡು, ನಾಯಕನಹಟ್ಟಿ, ಮೈಸೂರು,ಚನ್ನಗಿರಿ, ಹೊಸದುರ್ಗ, ಪುತ್ತೂರು, ಬೆಳ್ತಂಗಡಿ, ಉಪ್ಪಿನಂಗಡಿ, ಸುಳ್ಯ, ಕಿರವತ್ತಿ, ಗೋಕರ್ಣ, ಜೋಯಿಡಾ, ಗುಬ್ಬಿ,ಎಲೆಕ್ಟ್ರಾನಿಕ್​ಸಿಟಿ, ಬೆಂಗಳೂರು ಎಚ್​ಎಎಲ್ ವಿಮಾನ ನಿಲ್ದಾಣ,ಜಯಪುರ,ದಾವಣಗೆರೆ, ಬೇಲೂರು, ಶ್ರವಣಬೆಳಗೊಳ, ಹುಣಸೂರು, ಜಯಪುರ, ಮಂಡ್ಯದಲ್ಲಿ ಮಳೆಯಾಗಿದೆ.

ನೈಋತ್ಯ ಮುಂಗಾರು ದಕ್ಷಿಣ ಒಳನಾಡಿನಲ್ಲಿ ಚುರುಕಾಗಿತ್ತು, ಕರಾವಳಿಯಲ್ಲಿ ಸಾಮಾನ್ಯವಾಗಿತ್ತು, ಶಿರಾಲಿಯಲ್ಲಿ 35.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಬೆಳಗ್ಗೆ ಶುಭ್ರ ಆಕಾಶವಿರಲಿದ್ದು, ಬಿಸಿಲಿರಲಿದೆ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಎಚ್​ಎಎಲ್​ನಲ್ಲಿ 28.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ