ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಓವೈಸಿ ವಿರುದ್ದ ಸಾನಿಯಾ ಮಿರ್ಜಾಗೆ ಟಿಕೆಟ್? ಏನಿದು ಕಾಂಗ್ರೆಸ್ ಪ್ಲ್ಯಾನ್.!

Twitter
Facebook
LinkedIn
WhatsApp
ಓವೈಸಿ ವಿರುದ್ದ ಸಾನಿಯಾ ಮಿರ್ಜಾಗೆ ಟಿಕೆಟ್? ಏನಿದು ಕಾಂಗ್ರೆಸ್ ಪ್ಲ್ಯಾನ್.!
ಹೈದರಾಬಾದ್ : ಲೋಕಸಭಾ ಚುನಾವಣೆಯ ರಂಗು ಕಾವೇರಿದೆ. ಎತ್ತ ನೋಡಿದರತ್ತ ಎಲ್ಲಾ ಪಕ್ಷಗಳ ಪ್ರಚಾರದ ಕಾರ್ಯ ಭರದಿಂದ ನಡೆಯುತ್ತಿದೆ. ಒಂದೊಂದು ಲೋಕಸಭಾ ಕ್ಷೇತ್ರವೂ ಒಂದಿಲ್ಲೊಂದು ಕಾರಣಕ್ಕೆ ಮಹತ್ವ ಪಡೆದುಕೊಳ್ಳುತ್ತಿದೆ. ಏತನ್ಮಧ್ಯೆ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಸ್ರ್ಪಧಿಸುವ ಕ್ಷೇತ್ರ ಭಾರೀ ರಂಗು ಪಡೆಯುವ ಸಾಧ್ಯತೆ ಇದೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಿರಿಯ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಅವರನ್ನು ಮಣಿಸಲು ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳು ಪ್ರಯತ್ನ ಪಡುತ್ತಿವೆ. ಹೀಗಾಗಿ ಓವೈಸಿಯನ್ನು ಸೋಲಿಸಲು ದೇಶದ ಹಿರಿಯ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರನ್ನು ಕಣಕ್ಕಿಳಿಸಿ ಹೈದರಾಬಾದ್‍ನಲ್ಲಿ ನೇರಾನೇರಾ ಫೈಟ್‍ಗೆ ದಾರಿ ಮಾಡಿಕೊಡಲು ರಾಜಕೀಯ ಪಕ್ಷವೊಂದು ಪ್ಲಾನ್ ಮಾಡಿದೆ.
ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರ ಜನಪ್ರಿಯತೆಯ ಲಾಭ ಪಡೆದು ಓವೈಸಿಗೆ ಟಕ್ಕರ್ ನೀಡಲು ಪಕ್ಷವೊಂದು ಮುಂದಾಗಿದ್ದು, ಹೀಗಾಗಿ ಹೈದರಾಬಾದ್‍ನಲ್ಲಿ ಈ ಬಾರಿ ಕದನ ಕುತೂಹಲ ಸೃಷ್ಟಿಸುವ ಸಾಧ್ಯತೆ ಇದೆ. ಸಾನಿಯಾ ಮಿರ್ಜಾ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅಸಾದುದ್ದೀನ್ ಓವೈಸಿಗೆ ನೇರ ಸ್ಪರ್ಧೆ ನೀಡುವ ಸಾಧ್ಯತೆ ಇದ್ದು, ಮೂಲಗಳ ಪ್ರಕಾರ ಕಾಂಗ್ರೆಸ್ ಪಕ್ಷವು ಸಾನಿಯಾ ಮಿರ್ಜಾ ಅವರ ಜನಪ್ರಿಯತೆಯ ಲಾಭವನ್ನು ಪಡೆಯಲು ಬಯಸಿದೆ.
ಸಾನಿಯಾ ಮಿರ್ಜಾ ಅವರನ್ನು ಹೈದರಾಬಾದ್‍ನಿಂದ ಅಸಾದುದ್ದೀನ್ ಓವೈಸಿ ವಿರುದ್ಧ ಕಣಕ್ಕಿಳಿಸಲು ಪ್ಲಾನ್ ಮಾಡಿದ್ದು, ಇದಕ್ಕಾಗಿ ಸಾನಿಯಾ ಮಿರ್ಜಾ ಅವರನ್ನು ಒಪ್ಪಿಸಲು ಕಾಂಗ್ರೆಸ್ ನಾಯಕರು ಮನೆ ಬಾಗಿಲ ಕದ ತಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅಸಾದುದ್ದೀನ್ ಓವೈಸಿ ಕಳೆದ ನಾಲ್ಕು ಚುನಾವಣೆಗಳಲ್ಲಿ ನಿರಂತರವಾಗಿ ಗೆಲುವು ಸಾಧಿಸುತ್ತಿರುವ ಕಾರಣ ಹೈದರಾಬಾದ್‍ನಿಂದ ಸ್ಪರ್ಧೆ ಕುತೂಹಲ ಮೂಡಿಸಲಿದೆ.

ಇತ್ತೀಚೆಗಷ್ಟೇ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆದಿದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ. ಇದರಲ್ಲಿ ಲೋಕಸಭಾ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ. ಈ ಸಭೆಯಲ್ಲಿ ಮೊಹಮ್ಮದ್ ಅಜರುದ್ದೀನ್ ಅವರು ಹೈದರಾಬಾದ್‍ನಿಂದ ಸಾನಿಯಾ ಮಿರ್ಜಾಗೆ ಟಿಕೆಟ್ ನೀಡಲು ಮುಂದಾಗಿದ್ದರು.

ಮೊಹಮ್ಮದ್ ಅಜರುದ್ದೀನ್ ಅವರು ಸಾನಿಯಾ ಮಿರ್ಜಾ ಅವರೊಂದಿಗೆ ಕೌಟುಂಬಿಕ ಸಂಬಂಧ ಹೊಂದಿದ್ದಾರೆ. ಅಜರುದ್ದೀನ್ ಅವರ ಪುತ್ರ ಅಸಾದುದ್ದೀನ್ ಅವರು ಸಾನಿಯಾ ಮಿರ್ಜಾ ಅವರ ತಂಗಿ ಅನಮ್ ಮಿರ್ಜಾ ಅವರನ್ನು ವಿವಾಹವಾಗಿದ್ದಾರೆ. ಹೈದರಾಬಾದ್‍ನ ಲೋಕಸಭಾ ಸ್ಥಾನವು ವಿಶೇಷ ಪ್ರಾಮುಖ್ಯತೆ ಹೊಂದಿದೆ. ಈ ಕ್ಷೇತ್ರ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ವೈವಿಧ್ಯಮಯ ಜನಸಂಖ್ಯಾ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ.

ಈ ಸ್ಥಾನವು ಅನೇಕ ವರ್ಷಗಳಿಂದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದ್-ಉಲ-ಮುಸ್ಲಿಮೀನ್ (ಎಐಎಂಐಎಂ) ನ ಭದ್ರಕೋಟೆಯಾಗಿದೆ. ಆದಾಗ್ಯೂ, ಇತ್ತೀಚೆಗೆ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಅಲೆಯೂ ಉಂಟಾಗಿದೆ ಎಂದು ಸಾಬೀತಾಗಿದೆ, ಇಲ್ಲಿ ಕಾಂಗ್ರೆಸ್ ಮತ್ತು ಎಐಎಂಐಎಂ ಮಧ್ಯೆ ಪ್ರಬಲ ಸವಾಲು ಎಲ್ಲಾ ಚುನಾವಣೆಗಳಲ್ಲಿ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಹೈದರಾಬಾದ್ ಮೈದಾನ ಈ ಬಾರಿ ವಿಶೇಷ ಎನಿಸಿಕೊಂಡಿದೆ.

ಕಾಂಗ್ರೆಸ್ ಪಕ್ಷ ಸಾನಿಯಾ ಮಿರ್ಜಾ ಜನಪ್ರಿಯತೆಯ ಲಾಭ ಪಡೆಯಲು ಬಯಸಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಸಾನಿಯಾ ಮಿರ್ಜಾ ಅವರು ಭಾರತ್ ರಾಷ್ಟ್ರ ಸಮಿತಿ ಅಡಿಯಲ್ಲಿ ಹೈದರಾಬಾದ್ ನಗರದ ಬ್ರಾಂಡ್ ಅಂಬಾಸಿಡರ್ ಕೂಡ ಆಗಿದ್ದಾರೆ. ಅವರು ಮಹಿಳೆ ಮತ್ತು ಅಲ್ಪಸಂಖ್ಯಾತ ಸಮುದಾಯದ ಹಿನ್ನೆಲೆ ಇರುವ ಕಾರಣ, ಈ ವಿಷಯದಲ್ಲಿ ಅವರು ಕಾಂಗ್ರೆಸ್ ಆಹ್ವಾನವನ್ನು ಒಪ್ಪಿಕೊಳ್ಳುವ ಸಾಧ್ಯತೆ ಇದೆ. ಆದರೆ, ಸಾನಿಯಾ ಮಿರ್ಜಾ ಕುರಿತ ಚರ್ಚೆಯ ನಂತರ ಎಐಎಂಐಎಂ ನಾಯಕರು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಸಾನಿಯಾ ಮಿರ್ಜಾ ಹೆಸರು ಕೇಳಿ ಬಂದ ಮೇಲೆ ನಗರದ ಜನರಲ್ಲಿ ಕುತೂಹಲ ಮೂಡಿದೆ. ನಿಸ್ಸಂಶಯವಾಗಿ, ಅವರು ಸಾಕಷ್ಟು ಜನಪ್ರಿಯರಾಗಿದ್ದಾರೆ. ಆದರೆ ಅವರು ರಾಜಕೀಯ ಕ್ಷೇತ್ರಕ್ಕೆ ಬಂದರೆ ಅದು ಅವರಿಗೆ ಹೊಸದು ಮತ್ತು ಅವರು ಅನುಭವಿಯೊಬ್ಬರನ್ನು ಎದುರಿಸಲಿದ್ದಾರೆ. ಆದ್ದರಿಂದ ಇದು ಸಾಕಷ್ಟು ಸವಾಲಾಗಬಹುದು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ