ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಡಿಕೆ ಶಿವಕುಮಾರ್ ತಿಹಾರ್ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ ; ಸ್ಫೋಟಕ ಹೇಳಿಕೆ ನೀಡಿದ ಹೆಚ್.ಡಿ ಕುಮಾರಸ್ವಾಮಿ !

Twitter
Facebook
LinkedIn
WhatsApp
ಡಿಕೆ ಶಿವಕುಮಾರ್ ತಿಹಾರ್ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ ; ಸ್ಫೋಟಕ ಹೇಳಿಕೆ ನೀಡಿದ ಹೆಚ್.ಡಿ ಕುಮಾರಸ್ವಾಮಿ !

ಲೋಕಸಭಾ ಚುನಾವಣೆ ಬಳಿಕ ಸಿದ್ದರಾಂಯ್ಯನವರ  ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ(BJP) ನಾಯಕರು ಭವಿಷ್ಯ ನುಡಿಯುತ್ತಿದ್ದರೆ, ಇತ್ತ ಜೆಡಿಎಸ್​ ನಾಯಕ ಹೆಚ್​ಡಿ ಕುಮಾರಸ್ವಾಮಿ)(HD Kumaraswamy) ಮಾತ್ರ 2024ರಲ್ಲಿ ಮತ್ತೆ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಅಲ್ಲದೇ ಡಿಕೆ ಶಿವಕುಮಾರ್  ಮತ್ತೆ ತಿಹಾರ್ ಜೈಲಿಗೆ ಹೋಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದು, ಇದು ರಾಜ್ಯ ರಾಜಕಾರಣದಲ್ಲಿ (Karnataka Politics) ಸಂಚಲನ ಮೂಡಿಸಿದೆ

ನಿನ್ನೆ(ಅ,08) ತಮ್ಮ ಬಿಡದಿಯ ತೋಟದ ಮನೆಯಲ್ಲಿ ರಾಮನಗರ ಜಿಲ್ಲಾ ಮುಖಂಡರ ಸಭೆಯಲ್ಲಿ ಮಾತನಾಡಿರುವ ಕುಮಾರಸ್ವಾಮಿ, ಈ ಸರ್ಕಾರದ ಪಾಪದ ಕೊಡ ತುಂಬುತ್ತಿದೆ. ಇಷ್ಟು ಕೆಟ್ಟ ಸರ್ಕಾರವನ್ನು ನಾನು ನೋಡಿಯೇ ಇಲ್ಲ. ಆಂತರಿಕ ಕಚ್ಚಾಟದಿಂದ ಈ ಸರ್ಕಾರ ಹೋಗುತ್ತದೆ. 2024ರಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವುದು ಖಚಿತ. ಆ ಚುನಾವಣೆಗೆ ಆ ವ್ಯಕ್ತಿ (ಡಿಕೆ ಶಿವಕುಮಾರ್) ಅಭ್ಯರ್ಥಿ ಆಗುವುದೇ ಅನುಮಾನ. ಅವರು ತಿಹಾರ್ ಗೆ ಓಡುವ ಕಾಲ ಹತ್ತಿರದಲ್ಲಿ ಇದೆ ಎಂದು ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದರು.

ಜೋಡೆತ್ತು ಎಂದವರು ನಡುರಸ್ತೆಯಲ್ಲಿ ಕೈ ಬಿಟ್ಟರು. ಮೈತ್ರಿ ಸರ್ಕಾರ ಹೋಗಿದ್ದು ಡಿಕೆ ಶಿವಕುಮಾನಿಂದಲೇ. ಸರ್ಕಾರದ ಪತನ ಗ್ಯಾರಂಟಿ, ಅವರು ತಿಹಾರ್ ಗೆ ಓಡುವುದು ಖಚಿತ. ನಮ್ಮನ್ನು ಹಾಸನಕ್ಕೆ ಓಡಿಸಬಹುದು, ಅವರು ತಿಹಾರ್ ಗೆ ಓಡುವ ಕಾಲ ಹತ್ತಿರದಲ್ಲಿ ಇದೆ. ಒಮ್ಮೆ ತಿಹಾರ್ ನೋಡಿಕೊಂಡು ಬಂದಿದ್ದಾರೆ. ಅವರು ಮತ್ತೆ ಅಲ್ಲಿಗೆ  ಪರಮನೆಂಟಾಗಿ ಹೋದರೂ ಅಚ್ಚರಿ ಅಲ್ಲ ಎಂದು ಹೊಸ ಬಾಂಬ್ ಸಿಡಿಸಿದರು.

ಡಿಕೆ ಬ್ರದರ್ಸ್​ ವಿರುದ್ಧ ವಾಗ್ದಾಳಿ

ಕೋಟೆ ಕಟ್ಟಿ ಮೆರೆದವರೆಲ್ಲ ಏನೇನೋ ಆಗಿ ಹೋದರು. ಅದು ಇವರಿಗೂ ಅನ್ವಯ ಆಗುತ್ತದೆ. ಮಂಡ್ಯ ಚುನಾವಣೆಯಲ್ಲಿ ನಿಖಿಲ್ ಅವರಿಗೆ ಮೋಸ ಮಾಡಿದ ಹಾಗೆ ಇಲ್ಲಿಯೂ ನಾವು ಮಾಡಿದ್ದರೆ ಆ ವ್ಯಕ್ತಿ (ಡಿ.ಕೆ.ಸುರೇಶ್) ಯ ಕಥೆ ಅಂದೇ ಮುಗಿದು ಹೋಗುತ್ತಿತ್ತು. ಆದರೆ, ನಾವು ಮೈತ್ರಿ ಧರ್ಮ ಪಾಲಿಸಿದೆವು. ಅವರು ನಮಗೆ ಕೇಡು ಬಗೆದರು ಎಂದು ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್​ ವಿರುದ್ಧ ವಾಗ್ದಾಳಿ ನಡೆಸಿದರು.

ಜೀವನದಲ್ಲಿ ಅವರ (ಡಿಕೆ ಶಿವಕುಮಾರ್) ಜತೆ ಎಂದೂ ರಾಜಿ ಆಗಿಲ್ಲ. ಒಮ್ಮೆ ಅವರ ಜತೆ ಸರ್ಕಾರ ಮಾಡಿದ್ದರಿಂದ ನಾನು ಈಗಲೂ ನೋವು ಅನುಭವಿಸುತ್ತಿದ್ದೇನೆ. ನಮ್ಮನ್ನು ಹಾಸನಕ್ಕೆ ಓಡಿಸಬಹುದು, ಅವರು ತಿಹಾರ್ ಗೆ ಓಡುವ ಕಾಲ ಹತ್ತಿರದಲ್ಲಿ ಇದೆ ಎಂದು ಭವಿಷ್ಯ ನುಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist