ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಜಪಾನ್ ನಲ್ಲಿ ಭೂಕಂಪದ ಬೆನ್ನಲ್ಲೇ ಸುನಾಮಿ ಆರ್ಭಟ..!

Twitter
Facebook
LinkedIn
WhatsApp
ಜಪಾನ್ ನಲ್ಲಿ ಭೂಕಂಪದ ಬೆನ್ನಲ್ಲೇ ಸುನಾಮಿ ಆರ್ಭಟ..!

ಟೋಕಿಯೊ: ಭಾರೀ ಭೂಕಂಪದ ಬೆನ್ನಲ್ಲೇ ಕೇಂದ್ರ ಜಪಾನ್ (Central Japan) ತೀರಕ್ಕೆ ಸುನಾಮಿ ಸೋಮವಾರ ಅಪ್ಪಳಿಸಿದೆ(Japan Tsunami). 7.5 ತೀವ್ರತೆಯಲ್ಲಿ ಭೂಮಿ ನಡುಗಿದ ಬೆನ್ನಲ್ಲೇ, ಸುನಾಮಿ ಎಚ್ಚರಿಕೆಯನ್ನು ನೀಡಲಾಗಿತ್ತು. ಈಗ ಸುನಾಮಿಯ ಬೃಹತ್ ಅಲೆಗಳು ಕಡಲಿಗೆ ಅಪ್ಪಳಿಸುತ್ತಿವೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಎತ್ತರ ಪ್ರದೇಶಕ್ಕೆ ಹೋಗುವಂತೆ ಜನರಿಗೆ ಅಧಿಕಾರಿಗಳು ಸೂಚನೆಗಳನ್ನು ನೀಡುತ್ತಿದ್ದಾರೆ. ಜಪಾನ್‌ನ ಇಶಿಕಾವಾ(Ishikawa) ಪ್ರಾಂತ್ಯದ ನೋಟೊ ಪ್ರದೇಶದಲ್ಲಿ (Noto region) ಭಾರೀ ಭೂಕಂಪ ಸಂಭವಿಸಿತ್ತು.

ಜಪಾನ್ ಕರಾವಳಿಯಲ್ಲಿ ಭೂಕಂಪದ ಕೇಂದ್ರ ಸ್ಥಾನದ 300 ಕಿಲೋಮೀಟರ್ (190 ಮೈಲುಗಳು) ಒಳಗೆ ಅಪಾಯಕಾರಿ ಸುನಾಮಿ ಅಲೆಗಳು ಸಾಧ್ಯ ಎಂದು ಹವಾಯಿ ಮೂಲದ ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರ ತಿಳಿಸಿತ್ತು. ಅದರಂತೆ ಈಗ ಸುನಾಮಿ ಅಲೆಗಳು ಎದ್ದಿವೆ. ಇಶಿಕಾವಾ ಪ್ರಾಂತ್ಯದ ವಾಜಿಮಾ ನಗರಕ್ಕೆ 1.2 ಮೀಟರ್‌ಗಳಷ್ಟು ದೊಡ್ಡ ಸುನಾಮಿ ಅಲೆಗಳು ಅಪ್ಪಳಿಸಿರುವುದನ್ನು ಖಚಿತಪಡಿಸಲಾಗಿದೆ. ಆದರೆ, ಅದೇ ಪ್ರದೇಶದಲ್ಲಿ ನೊಟೊದಲ್ಲಿ ಐದು ಮೀಟರ್‌ಗಳಷ್ಟು ಹೆಚ್ಚಿನ ಸುನಾಮಿ ಅಪ್ಪಳಿಸುವ ನಿರೀಕ್ಷೆಯಿದೆ ಎಂದು ಜಪಾನ್ ಹವಾಮಾನ ಸಂಸ್ಥೆ (ಜೆಎಂಎ) ತಿಳಿಸಿದೆ.

ಜಪಾನ್‌ನ ಪ್ರಮುಖ ದ್ವೀಪವಾದ ಹೊನ್‌ಶುವಿನ ಜಪಾನ್ ಸಮುದ್ರದ ಭಾಗದಲ್ಲಿ ನೊಟೊ ಪ್ರದೇಶವು ಭಾರೀ ಭೂಕಂಪಕ್ಕೆ ಸಾಕ್ಷಿಯಾಯಿತು. ಸ್ಥಳೀಯ ಕಾಲಮಾನ ಸಂಜೆ 4:06 ಕ್ಕೆ 5.7 ತೀವ್ರತೆಯ ಕಂಪನದೊಂದಿಗೆ ಪ್ರಾರಂಭವಾಯಿತು ಎಂದು ಜಪಾನ್ ಹವಾಮಾನ ಸಂಸ್ಥೆ ಹೇಳಿದೆ.

ಜಪಾನ್‌ನಲ್ಲಿ 7.5 ತೀವ್ರತೆಯ ಭೂಕಂಪ

ಜಪಾನ್‌ನಲ್ಲಿ 7.6 ತೀವ್ರತೆಯ ಪ್ರಬಲ ಭೂಕಂಪ (Japan Earthquake) ಸಂಭವಿಸಿದ್ದು, ಸುನಾಮಿ ಅಲರ್ಟ್‌ (Tsunami Alert) ನೀಡಲಾಗಿದೆ. ಸೋಮವಾರ ಉತ್ತರ ಮಧ್ಯ ಜಪಾನ್‌ನಲ್ಲಿ 7.6 ರಿಕ್ಟರ್‌ ಪ್ರಾಥಮಿಕ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ. ಇಶಿಕಾವಾ, ನಿಗಾಟಾ ಮತ್ತು ಟೊಯಾಮಾ ಪ್ರಾಂತ್ಯಗಳ ಕರಾವಳಿ ಪ್ರದೇಶಗಳಲ್ಲಿ ಪ್ರಬಲ ಭೂಕಂಪಗಳು ಸಂಭವಿಸಿದ ನಂತರ ಜಪಾನ್ ಹವಾಮಾನ ಸಂಸ್ಥೆ ಸುನಾಮಿ ಎಚ್ಚರಿಕೆಯನ್ನು ನೀಡಿದೆ ಎಂದು ವರದಿಗಳು ಹೇಳಿವೆ.

ಹೊಕುರಿಕು ಎಲೆಕ್ಟ್ರಿಕ್ ಪವರ್ ಸಂಸ್ಥೆಯ ಪರಮಾಣು ವಿದ್ಯುತ್ ಸ್ಥಾವರಗಳಲ್ಲಿ ಏನಾದರೂ ಹಾನಿಯಾಗಿದೆಯೇ ಎಂದು ಪರಿಶೀಲಿಸುತ್ತಿದೆ. ಜಪಾನ್ ಹವಾಮಾನ ಏಜೆನ್ಸಿಯು ಇಶಿಕಾವಾ ಮತ್ತು ಹತ್ತಿರದ ಪ್ರಾಂತಗಳಲ್ಲಿ ಭೂಕಂಪನವನ್ನು ವರದಿ ಮಾಡಿದೆ. ಅವುಗಳಲ್ಲಿ ಒಂದು 7.4ರ ಪ್ರಾಥಮಿಕ ತೀವ್ರತೆಯನ್ನು ದಾಖಲಿಸಿದೆ. ಸಮುದ್ರ ತೀರದಲ್ಲಿ ಅಲೆಗಳು 5 ಮೀಟರ್ (16.5 ಅಡಿ) ಎತ್ತರ ತಲುಪಬಹುದು ಎಂದು ಹವಾಮಾನ ಸಂಸ್ಥೆ ಎಚ್ಚರಿಸಿದೆ. ಸಾಧ್ಯವಾದಷ್ಟು ಬೇಗ ಎತ್ತರದ ಪ್ರದೇಶಗಳು ಅಥವಾ ಹತ್ತಿರದ ಕಟ್ಟಡದ ಮೇಲ್ಭಾಗಕ್ಕೆ ಹೋಗಲು ಜನತೆಗೆ ತಿಳಿಸಿದೆ. ಇಶಿಕಾವಾ ಪ್ರಿಫೆಕ್ಚರ್‌ನ ವಾಜಿಮಾ ನಗರದ ತೀರಕ್ಕೆ 1 ಮೀಟರ್‌ಗಿಂತಲೂ ಹೆಚ್ಚು ಎತ್ತರದ ಅಲೆಗಳು ಅಪ್ಪಳಿಸಿದವು. “ಎಲ್ಲಾ ನಿವಾಸಿಗಳು ತಕ್ಷಣವೇ ಎತ್ತರದ ಪ್ರದೇಶಕ್ಕೆ ಸ್ಥಳಾಂತರಿಸಬೇಕು” ಎಂದು ರಾಷ್ಟ್ರೀಯ ಬ್ರಾಡ್‌ಕಾಸ್ಟರ್ NHKಯು ಸೂಚನೆ ನೀಡಿದೆ.

ಏತನ್ಮಧ್ಯೆ ಜಪಾನ್‌ನಲ್ಲಿ 7.6 ತೀವ್ರತೆಯ ಭೂಕಂಪದ ನಂತರ ಪೂರ್ವ ಕರಾವಳಿಯ ಕೆಲವು ಭಾಗಗಳಲ್ಲಿ ಸಮುದ್ರ ಮಟ್ಟವು ಹೆಚ್ಚಾಗಬಹುದು ಎಂದು ದಕ್ಷಿಣ ಕೊರಿಯಾದ ಹವಾಮಾನ ಸಂಸ್ಥೆ ಹೇಳಿದೆ. ಕನ್ಸಾಯ್ ಎಲೆಕ್ಟ್ರಿಕ್ ಪವರ್‌ ಸಂಸ್ಥೆಯ ವಕ್ತಾರರು, ಪ್ರಸ್ತುತ ಅದರ ಪರಮಾಣು ವಿದ್ಯುತ್ ಸ್ಥಾವರಗಳಲ್ಲಿ ಯಾವುದೇ ಹಾನಿಯಾಗಿಲ್ಲ ಎಂದು ತಿಳಿಸಿದ್ದಾರೆ. ಪಶ್ಚಿಮ ಜಪಾನ್‌ನಲ್ಲಿ ಪ್ರಬಲ ಭೂಕಂಪಗಳು ಸಂಭವಿಸಿದ ನಂತರ ಎಲ್ಲಾ ಹೈಸ್ಪೀಡ್ ರೈಲುಗಳು ಇಶಿಕಾವಾ ಪ್ರಿಫೆಕ್ಚರ್‌ನಲ್ಲಿ ನಿಂತಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ದೊಡ್ಡ ಭೂಕಂಪಗಳು ಇಲ್ಲಿ ಆಗಾಗ ಸಂಭವಿಸುವ ಪರಿಣಾಮ ನಿವಾಸಿಗಳು ಅದಕ್ಕೆ ಇಲ್ಲಿ ಸದಾ ಸಿದ್ಧರಿರುತ್ತಾರೆ. “ನಿಮ್ಮ ಮನೆ, ನಿಮ್ಮ ವಸ್ತುಗಳು ನಿಮಗೆ ಅಮೂಲ್ಯವೆಂದು ನಾವು ಅರಿತುಕೊಂಡಿದ್ದೇವೆ, ಆದರೆ ನಿಮ್ಮ ಜೀವನವು ಎಲ್ಲಕ್ಕಿಂತ ಮುಖ್ಯವಾಗಿದೆ. ಸಾಧ್ಯವಾದಷ್ಟು ಎತ್ತರದ ಜಾಗ ಹೋಗಿ” ಎಂದು ಟಿವಿ ನಿರೂಪಕರು ಹೇಳಿದರು. ಇಲ್ಲಿನ ಕಟ್ಟಡಗಳು ಪ್ರಬಲವಾದ ಭೂಕಂಪಗಳನ್ನು ತಡೆದುಕೊಳ್ಳಬಲ್ಲಂತೆ ಜಪಾನ್ ಕಟ್ಟುನಿಟ್ಟಾದ ನಿರ್ಮಾಣ ನಿಯಮಗಳನ್ನು ಹೊಂದಿದೆ. ದೊಡ್ಡ ಭೂಕಂಪನಕ್ಕೆ ತಯಾರಾಗುವ ತುರ್ತು ಅಭ್ಯಾಸಗಳನ್ನು ಹೊಂದಿದೆ.

ಮಾರ್ಚ್ 11, 2011ರಂದು ಈಶಾನ್ಯ ಜಪಾನ್‌ನಲ್ಲಿ 9.0 ರಿಕ್ಟರ್‌ ವ್ರತೆಯ ಭಾರಿ ಭೂಕಂಪ ಸಂಭವಿಸಿದ ಬಳಿಕ ಸುನಾಮಿ ಅಪ್ಪಳಿಸಿತ್ತು. ಇದು ಹಲವು ಪಟ್ಟಣಗಳನ್ನು ವಿಧ್ವಂಸಗೊಳಿಸಿತು ಮತ್ತು ಫುಕುಶಿಮಾ ಪರಮಾಣು ಸ್ಥಾವರಕ್ಕೆ ದೊಡ್ಡ ಹಾನಿ ಎಸಗಿತ್ತು. ಅದು ಸುಮಾರು 18,500 ಜನರನ್ನು ಕೊಂದಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist