ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಹೋದರನ ಹಣದಾಸೆಗೆ ಇಬ್ಬರು ತಂಗಿಯಂದಿರು ಬಲಿ, ತಾಯಿ ಎಸ್ಕೇಪ್..!

Twitter
Facebook
LinkedIn
WhatsApp
ಸಹೋದರನ ಹಣದಾಸೆಗೆ ಇಬ್ಬರು ತಂಗಿಯಂದಿರು ಬಲಿ, ತಾಯಿ ಎಸ್ಕೇಪ್..!

ಮುಂಬೈ : ಹಣ ಹಾಗೂ ಆಸ್ತಿ ಕುಟುಂಬ ಸದಸ್ಯರನ್ನೇ ಶತ್ರುಗಳನ್ನಾಗಿ ಮಾಡುತ್ತದೆ ಎಂಬ ಮಾತು ಅಕ್ಷರಶ ಸತ್ಯವಾಗಿದೆ ಮಹಾರಾಷ್ಟ್ರದ ನವಿ ಮುಂಬೈಯಲ್ಲಿ. ಗಣೇಶ್ ಮೋಹಿತೆ ಎಂಬಾತನೇ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು ಬಂಧನದಲ್ಲಿದ್ದಾರೆ.

ಈತನ ತಂದೆ 2009ರಲ್ಲಿ ನಿಧನ ಹೊಂದಿದ್ದರು. ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಹಾಗೂ ಓರ್ವ ಗಂಡು ಮಗ. ಅರಣ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಗಣೇಶ್ ಮೋಹಿತೆ ಅವರ ತಂದೆ ನಿಧನ ಹೊಂದಿದ ಬಳಿಕ ಆ ಕೆಲಸ ಗಣೇಶ್ ಮೋಹಿತೆಗೆ ಸಿಕ್ಕಿತ್ತು. ಸರ್ಕಾರಿ ಕೆಲಸ ಪಡೆಯುವ ವೇಳೆ ಗಣೇಶ್ ಮೋಹಿತೆ ತನ್ನ ಇಬ್ಬರು ಸಹೋದರಿಯನ್ನು ಹಾಗೂ ತಾಯಿಯನ್ನು ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ದ. ಆದರೆ 2021ರಲ್ಲಿ ತಂದೆಯ ಸರ್ಕಾರಿ ಕೆಲಸ ಸಿಕ್ಕ ಬಳಿಕ ಗಣೇಶ್ ಮೋಹಿತೆ ಬದಲಾಗಿದ್ದ. ತಂದೆ ಮೃತಪಟ್ಟ ಬಳಿಕ ಸಿಕ್ಕ ಪಿಎಫ್‌ ಹಣ ಗಣೇಶ್ ಮೋಹಿತೆಯ ತಾಯಿ ಜಯಮಾಲಾ ಅವರ ಖಾತೆಯಲ್ಲಿ ಇತ್ತು. ತಾಯಿಯ ಸಹಿಯನ್ನು ನಕಲು ಮಾಡಿದ್ದ ಗಣೇಶ್ ಮೋಹಿತೆ, ಆಕೆಯ ಖಾತೆಯಲ್ಲಿ ಇದ್ದ ಹಣವನ್ನೆಲ್ಲಾ ಲಪಟಾಯಿಸಿದ್ದ. ಆದರೆ, ತಂದೆಯ ಕೆಲಸವನ್ನು ತಾನು ಗಿಟ್ಟಿಸಿಕೊಳ್ಳುವ ವೇಳೆ ನೀಡಿದ್ದ ಭರವಸೆಯಂತೆ ಸ್ವಂತ ಮನೆಯನ್ನು ಸಹೋದರಿಯರ ಹೆಸರಿಗೆ ಬರೆದಿದ್ದ. ಆದರೆ, ಆ ಮನೆಯನ್ನೂ ತನ್ನ ಹೆಸರಿಗೇ ಮಾಡಿಕೊಳ್ಳಬೇಕು ಎಂದು ಹವಣಿಸುತ್ತಿದ್ದ ಗಣೇಶ್ ಮೋಹಿತೆ ಇದಕ್ಕಾಗಿ ದೊಡ್ಡ ಷಡ್ಯಂತ್ರವನ್ನೇ ಮಾಡಿದ.!

ಸಹೋದರಿಯರ ಕೊಲೆಗೆ ಇಂಟರ್‌ನೆಟ್‌ನಲ್ಲಿ ಹುಡುಕಾಟ.!
ತನ್ನ ಸಹೋದರಿಯನ್ನು ಹೇಗಾದರೂ ಮುಗಿಸಬೇಕು, ತನ್ನ ತಾಯಿಯನ್ನೂ ಕೊಲೆ ಮಾಡಬೇಕು ಎಂದು ನಿರ್ಧರಿಸಿದ್ದ ಗಣೇಶ್ ಮೋಹಿತೆ ಇದಕ್ಕಾಗಿ ಇಂಟರ್‌ನೆಟ್‌ನಲ್ಲಿ ಸಾಕಷ್ಟು ಹುಡುಕಾಟ ನಡೆಸಿದ್ದ. ವಿಷಕಾರಿ ವಸ್ತುಗಳ ಕುರಿತಾಗಿ ಸುಮಾರು 53 ಬಾರಿ ಗಣೇಶ್ ಮೋಹಿತೆ ಹುಡುಕಾಟ ನಡೆಸಿದ್ದ.ಅಕ್ಟೋಬರ್ 15 ರಂದು ಗಣೇಶ್ ಮೋಹಿತೆಯ ಸಹೋದರಿ ಸೋನಾಲಿ ಮೋಹಿತೆ ಹಾಗೂ ಸ್ನೇಹಾ ಮೋಹಿತೆ ಅಸ್ವಸ್ಥರಾದರು. ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಕೂಡಾ ಬದುಕುಳಿಯಲಿಲ್ಲ. ಅಕ್ಟೋಬರ್ 16 ರಂದು ಮೃತಪಟ್ಟ ಇಬ್ಬರೂ ಸಹೋದರಿಯರು ಸೇವಿಸಿದ್ದ ಆಹಾರದಲ್ಲಿ ವಿಷ ಬೆರೆಸಲಾಗಿತ್ತು ಅನ್ನೋ ವಿಚಾರ ಮರಣೋತ್ತರ ಪರೀಕ್ಷೆ ವೇಳೆ ಬಯಲಾಯ್ತು.

ಕೂಡಲೇ ತಡ ಮಾಡದ ಪೊಲೀಸರು ಗಣೇಶ್ ಮೋಹಿತೆ ಹಾಗೂ ತಾಯಿ ಜಯಮಾಲಾರನ್ನು ವಿಚಾರಣೆಗೆ ಒಳಪಡಿಸಿದರು. ಆಗ ಪೊಲೀಸರಿಗೆ ಸತ್ಯಾಂಶ ಗೊತ್ತಾಯ್ತು. ಆರೋಪಿ ಗಣೇಶ್ ಮೋಹಿತೆ ತನ್ನ ತಾಯಿಯನ್ನೂ ಹತ್ಯೆ ಮಾಡಲು ಬಯಸಿದ್ದ. ಆದರೆ, ವಿಷ ಬೆರೆಸಿದ್ದ ಆಹಾರವನ್ನು ಆಕೆ ಸೇವನೆ ಮಾಡಿರಲಿಲ್ಲ. ಆರಂಭದಲ್ಲಿ ಪೊಲೀಸರಿಗೆ ಸತ್ಯ ಬಾಯ್ಬಿಡದ ಗಣೇಶ್ ಮೋಹಿತೆ ನಂತರ ವಿಚಾರಣೆ ತೀವ್ರಗೊಳಿಸಿದಾಗ ಬಾಯಿ ಬಿಟ್ಟ.ತನ್ನ ತಾಯಿಯ ಖಾತೆಯಿಂದ ಹಣವನ್ನು ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ ತಾಯಿ ಕೋಪಗೊಂಡಿದ್ದಳು. ಸರ್ಕಾರಿ ಕೆಲಸವನ್ನು ಸಹೋದರಿಗೆ ಕೊಡುವಂತೆ ಅರಣ್ಯ ಇಲಾಖೆಗೆ ಮನವಿ ಮಾಡೋದಾಗಿ ಬೆದರಿಕೆ ಒಡ್ಡಿದ್ದಳು. ಜೊತೆಗೆ ಸ್ವಂತ ಮನೆ ಕೂಡಾ ಸಹೋದರಿಯರ ಹೆಸರಿನಲ್ಲಿತ್ತು. ಹೀಗಾಗಿ, ಕೊಲೆಗೆ ಸಂಚು ರೂಪಿಸಿದೆ ಎಂದು ಬಾಯ್ಬಿಟ್ಟಿದ್ದಾನೆ.

ಇನ್ನು ಗಣೇಶ್‌ ಮೋಹಿತೆಯ ಕಾರನ್ನು ಪರಿಶೀಲನೆ ನಡೆಸಿದ ವೇಳೆ ಇಲಿ ಪಾಷಾಣದ ಕವರ್‌ಗಳು ಕೂಡಾ ಪೊಲೀಸರಿಗೆ ಸಿಕ್ಕಿದೆ. ಆರೋಪಿ ಗಣೇಶ್ ಮೋಹಿತೆ ಸೂಪ್‌ನಲ್ಲಿ ಇಲಿ ಪಾಷಾಣ ಬೆರೆಸಿ ಎಲ್ಲರಿಗೂ ಕೊಟ್ಟಿದ್ದ ಅನ್ನೋ ಸಂಗತಿ ಬಯಲಾಗಿದೆ. ಒಟ್ಟಿನಲ್ಲಿ ಸಹೋದರನ ಧನದಾಹಕ್ಕೆ ಆತನ ಇಬ್ಬರು ತಂಗಿಯರು ಜೀವ ಬಿಟ್ಟಿದ್ಧಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist