ಮಂಗಳವಾರ, ಮಾರ್ಚ್ 11, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಭೀಕರ ಕಾರು ಅಪಘಾತ ಇಬ್ಬರು ಯುವಕರು ಸಾವು

Twitter
Facebook
LinkedIn
WhatsApp
ಭೀಕರ ಕಾರು ಅಪಘಾತ ಇಬ್ಬರು ಯುವಕರು ಸಾವು

ಹಾಸನ, ಜನವರಿ 12: ಕಲಬುರಗಿ (Kalaburagi) ಮತ್ತು ಹಾಸನ (Hassan) ಜಿಲ್ಲೆಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ನಾಲ್ವರು ಮೃತಪಟ್ಟಿದ್ದಾರೆ. ಹುಟ್ಟು ಹಬ್ಬ ಸಂಭ್ರಮಾಚರಣೆ ಬಳಿಕ ಹಾಸನ ತಾಲೂಕಿನ ಮಡೆನೂರು ಫ್ಲೈಓವರ್ ಬಳಿ ಕಾರಿನಲ್ಲಿ ಜಾಲಿ ರೈಡ್​​ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಕಲಬುರಗಿಯಲ್ಲಿ ಕೆಎಸ್​ಆರ್​ಟಿಸಿ ಬಸ್​ ಮತ್ತು ಬೈಕ್​ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ.

ಗುರುವಾರ ರಾತ್ರಿ ಹುಟ್ಟು ಹಬ್ಬ ಸಂಭ್ರಮಾಚರಣೆ ಬಳಿಕ ಜಾಲಿ ರೈಡ್​​ ಹೋಗುತ್ತಿದ್ದಾಗ ಕಾರು ಎಲೆಕ್ಟ್ರಿಕ್ ಪೋಲ್‌ಗೆ ಡಿಕ್ಕಿ ಹೊಡೆದು ಜಮೀನಿನಲ್ಲಿ ಉರುಳಿಬಿದ್ದ ಘಟನೆ ಹಾಸನ ತಾಲೂಕಿನ ಮಡೆನೂರು ಫ್ಲೈಓವರ್ ಬಳಿ ನಡೆದಿದೆ. ಕಾರಿನಲ್ಲಿದ್ದ ರಕ್ಷಿತ್(22), ಕುಶಾಲ್(24) ಮೃತ ದುರ್ದೈವಿಗಳು.

ರಕ್ಷಿತ್ ಸ್ಥಳದಲ್ಲೇ ಮೃತಪಟ್ಟಿದ್ದು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕುಶಾಲ್ ಸಾವಿಗೀಡಾಗಿದ್ದಾನೆ. ಇನ್ನು ಕಾರಿನಲ್ಲಿದ್ದ ಅಭಿಷೇಕ್, ನಿಶಾಂತ್, ಮಂಜುನಾಥ್ ಎಂಬುವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚನ್ನರಾಯಪಟ್ಟಣದ ಯುವಕರು ಹುಟ್ಟುಹಬ್ಬದ ಆಚರಣೆಗೆ ಗಿರೀಶ್ ಎಂಬುವರಿಂದ ಕಾರು ಪಡೆದುಕೊಂಡು ಹಾಸನಕ್ಕೆ ಬಂದಿದ್ದರು ಎಂಬುವುದು ತಿಳಿದುಬಂದಿದೆ. ಶಾಂತಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Namma Metro: ಬೆಂಗಳೂರು ಮೆಟ್ರೋದಿಂದ ಮಹಿಳಾ ಪ್ರಯಾಣಿಕರಿಗೆ ಗುಡ್​​ನ್ಯೂಸ್: ಒಂದಲ್ಲ ಎರಡು ಬೋಗಿ ಮೀಸಲು

ಬೆಂಗಳೂರು, ಜ.12: ನಮ್ಮ ಮೆಟ್ರೋದಲ್ಲಿ (Bengaluru Metro) ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುವ ಹಾಗೂ ಲೈಂಗಿಕ ಕಿರುಕುಳದಂತಹ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರೈಲಿನಲ್ಲಿ ಎರಡು ಕೋಚ್​ಗಳನ್ನು ಮಹಿಳಾ ಪ್ರಯಾಣಿಕರಿಗೆ ಮೀಸಲಿಡಲಿದೆ. ಸದ್ಯ ನಮ್ಮ ಮೆಟ್ರೋ ರೈಲಿನಲ್ಲಿ ಒಂದು ಮಹಿಳಾ ಮೀಸಲು ಕೋಚ್​ ಇದೆ. ಮೆಟ್ರೋದಲ್ಲಿ ಮಹಿಳಾ ಪ್ರಯಾಣಿಕರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ್ದ ಪ್ರಕರಣಗಳ ಬಗ್ಗೆ ಟಿವಿ9 ನಿರಂತರವಾಗಿ ವರದಿ ಪ್ರಸಾರ ಮಾಡಿತ್ತು. ಇದರಿಂದ ಎಚ್ಚೆತ್ತ ಮೆಟ್ರೋ ಅಧಿಕಾರಿಗಳು, ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಶೀಘ್ರದಲ್ಲೇ ಮಹಿಳೆಯರಿಗೆ 2 ಬೋಗಿ ಮೀಸಲಿಡಲು ಚಿಂತನೆ ನಡೆಸಿದ್ದಾರೆ.

ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಜನವರಿ 1 ರಂದು ಯುವಕನೊಬ್ಬ ಹಿಂಬದಿಯಿಂದ ಖಾಸಗಿ ಅಂಗವನ್ನ ಮುಟ್ಟಿ ಲೈಂಗಿಕ ಕಿರುಕುಳ ಕೊಟ್ಟಿದ್ದಾನೆ ಎಂದು ಯುವತಿಯೊಬ್ಬಳು ತೀವ್ರ ತರಾಟೆಗೆ ತೆಗೆದುಕೊಂಡಿದ್ದಳು. ಅಲ್ಲದೆ, ವಿಚಾರ ತಿಳಿದ ಭದ್ರತಾ ಸಿಬ್ಬಂದಿ ವ್ಯಕ್ತಿಯನ್ನು ಹಿಡಿದಿದ್ದರು. ಈ ವೇಳೆ ಯುವತಿ ಮುಂದೆ ಆತ ತಪ್ಪೊಪ್ಪಿಕೊಂಡಿದ್ದನು.

ನವೆಂಬರ್ 20 ರಂದು ಇದೇ ಮೆಜೆಸ್ಟಿಕ್ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಗೆ, ಕೆಂಪು ಬಟ್ಟೆ ಧರಿಸಿದ್ದ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ಕೊಟ್ಟಿದ್ದರ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಡಿಸೆಂಬರ್ 7 ರಂದು ರಾಜಾಜಿನಗರಲ್ಲಿ ಮೆಟ್ರೋ ಹತ್ತಿದ್ದ ಯುವತಿಗೆ ಯುವಕನೊಬ್ಬ ಹಿಂಬದಿಯಿಂದ ಬಂದು ಆಕೆಯ ದೇಹವನ್ನ ಸ್ಪರ್ಶಿಸಿ ಅನುಚಿತವಾಗಿ ವರ್ತಿಸಿದ್ದ. ಈ ರೀತಿಯ ಪ್ರಕರಣ ನಡೆಯುತ್ತಿರುವುದರಿಂದ ಹೆಣ್ಣುಮಕ್ಕಳಿಗೆ ಮೆಟ್ರೋ ಎಷ್ಟು ಸುರಕ್ಷಿತ ಅನ್ನೋ ಆತಂಕಭರಿತ ಪ್ರಶ್ನೆ ಮೂಡಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist