ಭೀಕರ ಕಾರು ಅಪಘಾತ ಇಬ್ಬರು ಯುವಕರು ಸಾವು

ಹಾಸನ, ಜನವರಿ 12: ಕಲಬುರಗಿ (Kalaburagi) ಮತ್ತು ಹಾಸನ (Hassan) ಜಿಲ್ಲೆಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ನಾಲ್ವರು ಮೃತಪಟ್ಟಿದ್ದಾರೆ. ಹುಟ್ಟು ಹಬ್ಬ ಸಂಭ್ರಮಾಚರಣೆ ಬಳಿಕ ಹಾಸನ ತಾಲೂಕಿನ ಮಡೆನೂರು ಫ್ಲೈಓವರ್ ಬಳಿ ಕಾರಿನಲ್ಲಿ ಜಾಲಿ ರೈಡ್ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಕಲಬುರಗಿಯಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ.
ಗುರುವಾರ ರಾತ್ರಿ ಹುಟ್ಟು ಹಬ್ಬ ಸಂಭ್ರಮಾಚರಣೆ ಬಳಿಕ ಜಾಲಿ ರೈಡ್ ಹೋಗುತ್ತಿದ್ದಾಗ ಕಾರು ಎಲೆಕ್ಟ್ರಿಕ್ ಪೋಲ್ಗೆ ಡಿಕ್ಕಿ ಹೊಡೆದು ಜಮೀನಿನಲ್ಲಿ ಉರುಳಿಬಿದ್ದ ಘಟನೆ ಹಾಸನ ತಾಲೂಕಿನ ಮಡೆನೂರು ಫ್ಲೈಓವರ್ ಬಳಿ ನಡೆದಿದೆ. ಕಾರಿನಲ್ಲಿದ್ದ ರಕ್ಷಿತ್(22), ಕುಶಾಲ್(24) ಮೃತ ದುರ್ದೈವಿಗಳು.
ರಕ್ಷಿತ್ ಸ್ಥಳದಲ್ಲೇ ಮೃತಪಟ್ಟಿದ್ದು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕುಶಾಲ್ ಸಾವಿಗೀಡಾಗಿದ್ದಾನೆ. ಇನ್ನು ಕಾರಿನಲ್ಲಿದ್ದ ಅಭಿಷೇಕ್, ನಿಶಾಂತ್, ಮಂಜುನಾಥ್ ಎಂಬುವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚನ್ನರಾಯಪಟ್ಟಣದ ಯುವಕರು ಹುಟ್ಟುಹಬ್ಬದ ಆಚರಣೆಗೆ ಗಿರೀಶ್ ಎಂಬುವರಿಂದ ಕಾರು ಪಡೆದುಕೊಂಡು ಹಾಸನಕ್ಕೆ ಬಂದಿದ್ದರು ಎಂಬುವುದು ತಿಳಿದುಬಂದಿದೆ. ಶಾಂತಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Namma Metro: ಬೆಂಗಳೂರು ಮೆಟ್ರೋದಿಂದ ಮಹಿಳಾ ಪ್ರಯಾಣಿಕರಿಗೆ ಗುಡ್ನ್ಯೂಸ್: ಒಂದಲ್ಲ ಎರಡು ಬೋಗಿ ಮೀಸಲು
ಬೆಂಗಳೂರು, ಜ.12: ನಮ್ಮ ಮೆಟ್ರೋದಲ್ಲಿ (Bengaluru Metro) ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುವ ಹಾಗೂ ಲೈಂಗಿಕ ಕಿರುಕುಳದಂತಹ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರೈಲಿನಲ್ಲಿ ಎರಡು ಕೋಚ್ಗಳನ್ನು ಮಹಿಳಾ ಪ್ರಯಾಣಿಕರಿಗೆ ಮೀಸಲಿಡಲಿದೆ. ಸದ್ಯ ನಮ್ಮ ಮೆಟ್ರೋ ರೈಲಿನಲ್ಲಿ ಒಂದು ಮಹಿಳಾ ಮೀಸಲು ಕೋಚ್ ಇದೆ. ಮೆಟ್ರೋದಲ್ಲಿ ಮಹಿಳಾ ಪ್ರಯಾಣಿಕರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ್ದ ಪ್ರಕರಣಗಳ ಬಗ್ಗೆ ಟಿವಿ9 ನಿರಂತರವಾಗಿ ವರದಿ ಪ್ರಸಾರ ಮಾಡಿತ್ತು. ಇದರಿಂದ ಎಚ್ಚೆತ್ತ ಮೆಟ್ರೋ ಅಧಿಕಾರಿಗಳು, ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಶೀಘ್ರದಲ್ಲೇ ಮಹಿಳೆಯರಿಗೆ 2 ಬೋಗಿ ಮೀಸಲಿಡಲು ಚಿಂತನೆ ನಡೆಸಿದ್ದಾರೆ.
ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಜನವರಿ 1 ರಂದು ಯುವಕನೊಬ್ಬ ಹಿಂಬದಿಯಿಂದ ಖಾಸಗಿ ಅಂಗವನ್ನ ಮುಟ್ಟಿ ಲೈಂಗಿಕ ಕಿರುಕುಳ ಕೊಟ್ಟಿದ್ದಾನೆ ಎಂದು ಯುವತಿಯೊಬ್ಬಳು ತೀವ್ರ ತರಾಟೆಗೆ ತೆಗೆದುಕೊಂಡಿದ್ದಳು. ಅಲ್ಲದೆ, ವಿಚಾರ ತಿಳಿದ ಭದ್ರತಾ ಸಿಬ್ಬಂದಿ ವ್ಯಕ್ತಿಯನ್ನು ಹಿಡಿದಿದ್ದರು. ಈ ವೇಳೆ ಯುವತಿ ಮುಂದೆ ಆತ ತಪ್ಪೊಪ್ಪಿಕೊಂಡಿದ್ದನು.
ನವೆಂಬರ್ 20 ರಂದು ಇದೇ ಮೆಜೆಸ್ಟಿಕ್ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಗೆ, ಕೆಂಪು ಬಟ್ಟೆ ಧರಿಸಿದ್ದ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ಕೊಟ್ಟಿದ್ದರ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಡಿಸೆಂಬರ್ 7 ರಂದು ರಾಜಾಜಿನಗರಲ್ಲಿ ಮೆಟ್ರೋ ಹತ್ತಿದ್ದ ಯುವತಿಗೆ ಯುವಕನೊಬ್ಬ ಹಿಂಬದಿಯಿಂದ ಬಂದು ಆಕೆಯ ದೇಹವನ್ನ ಸ್ಪರ್ಶಿಸಿ ಅನುಚಿತವಾಗಿ ವರ್ತಿಸಿದ್ದ. ಈ ರೀತಿಯ ಪ್ರಕರಣ ನಡೆಯುತ್ತಿರುವುದರಿಂದ ಹೆಣ್ಣುಮಕ್ಕಳಿಗೆ ಮೆಟ್ರೋ ಎಷ್ಟು ಸುರಕ್ಷಿತ ಅನ್ನೋ ಆತಂಕಭರಿತ ಪ್ರಶ್ನೆ ಮೂಡಿತ್ತು.