ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಡುಪಿ ನಾಲ್ವರ ಹತ್ಯೆ ಪ್ರಕರಣ ; ತನಿಖೆ ಬಳಿಕ ಎಸ್. ಪಿ ಹೇಳಿದ್ದಿಷ್ಟು..!

Twitter
Facebook
LinkedIn
WhatsApp
ಉಡುಪಿ ನಾಲ್ವರ ಹತ್ಯೆ ಪ್ರಕರಣ ; ತನಿಖೆ ಬಳಿಕ ಎಸ್. ಪಿ ಹೇಳಿದ್ದಿಷ್ಟು..!

ಉಡುಪಿ ತಾಲೂಕಿನ ನೇಜಾರು ಸಮೀಪದ ತೃಪ್ತಿನಗರದಲ್ಲಿ ಇದೇ ನವೆಂಬರ್ 12 ರಂದು ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಧಾರುಣ ಘಟನೆ ನಡೆದಿತ್ತು. ಹೌದು, ಆರೋಪಿ ಹತ್ಯೆ ಮಾಡಿದ ಬಳಿಕ ಪೊಲೀಸರಿಗೆ ಸುಳಿವು ಸಿಗದಂತೆ ಉಡುಪಿ ನಗರದೊಳಗೆ ನಾಲ್ಕು ಬಾರಿ ವಾಹನ ಬದಲಾಯಿಸಿ ಪರಾರಿಯಾಗಿದ್ದ. ಈ ಹಿನ್ನಲೆ ಆರೋಪಿಯನ್ನು ಕಂಡುಹಿಡಿಯಲು ಪೊಲೀಸರು ತಡಕಾಡುವಂತಾಗಿತ್ತು. ನಂತರ ಪೊಲೀಸರು ಟೆಕ್ನಿಕಲ್ ಎವಿಡೆನ್ಸ್ ಆಧಾರದ ಮೇಲೆ ಕೊಲೆಗಾರನ ಪತ್ತೆಗೆ ಬಲೆ ಬೀಸಿದ್ದರು. ಕೊನೆಗೆ ಹಂತಕನನ್ನು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಉಡುಪಿ ಪೊಲೀಸರು ಬಂಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಉಡುಪಿ ಎಸ್.ಪಿ ಡಾ.ಅರುಣ್ ಪತ್ರಿಕಾಗೋಷ್ಠಿ ಕರೆದಿದ್ದು, ಹತ್ಯೆಯ ಕುರಿತು ಸತ್ಯಾಂಶವನ್ನು ಬಿಚ್ಚಿಟ್ಟಿದ್ದಾರೆ.

ಇನ್ನು ಈ ಕುರಿತು ಮಾತನಾಡಿದ ಎಸ್​ಪಿ ಡಾ.ಅರುಣ್ ‘​ ನಾಲ್ವರ ಹತ್ಯೆಯನ್ನು ಮಾಡಿರುವುದಾಗಿ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಒಪ್ಪಿಕೊಂಡಿದ್ದಾರೆ. ಮೇಲ್ನೋಟಕ್ಕೆ ಹತ್ಯೆಗೆ ಮೂರ್ನಾಲ್ಕು ಕಾರಣಗಳು ಇರುವ ಸಾಧ್ಯತೆಯಿದೆ. ಸಂಪೂರ್ಣ ತನಿಖೆ ಮಾಡದೆ ಕಾರಣ ಹೇಳಲು ಸಾಧ್ಯವಿಲ್ಲ. ಆರೋಪಿ ತಪ್ಪೊಪ್ಪಿಗೆ ಹೇಳಿಕೆ ಕೊಟ್ಟಿದ್ದಾನೆ. ಅವನ ಉದ್ದೇಶ ಆಯ್ನಾಸ್ ಕೊಲೆ ಮಾಡುವುದಾಗಿತ್ತು. ಆದರೆ, ಈ ವೇಳೆ ಆರೋಪಿ ತಪ್ಪಿಸಿಕೊಳ್ಳಲು ಮತ್ತು ಸಾಕ್ಷಿ ನಾಶ ಮಾಡಲು ಉಳಿದವರನ್ನು ಕೊಲೆ ಮಾಡಿರುವ ಬಗ್ಗೆಯೋ ಒಪ್ಪಿಕೊಂಡಿದ್ದಾನೆ ಎಂದರು.

ಹೌದು, ಪೊಲೀಸರ ವಿಚಾರಣೆ ವೇಳೆ ಆರೋಪಿ ಪ್ರವೀಣ್ ಅರುಣ್ ಚೌಗಲೆ ಸತ್ಯಾಂಶ ಬಿಚ್ಚಿಟ್ಟಿದ್ದು, ‘ಸ್ನೇಹ, ಸಲುಗೆ, ಪ್ರೇಮ ಮತ್ತು ಹಣದ ವಿಚಾರದಿಂದ ಕೊಲೆ ಮಾಡಿದ್ದಾಗಿ ಹೇಳಿದ್ದಾರೆ. ಮದುವೆಯಾಗಿ ಮಕ್ಕಳಾಗಿದ್ರು ಅಯ್ನಾಸ್ ಮೇಲೆ ಆರೋಪಿಗೆ ಲವ್ ಆಗಿತ್ತು. ಆಯ್ನಾಸ್ ಕೂಡ ಪ್ರವೀಣ್ ಜೊತೆ ಸಲುಗೆಯಿಂದ ಇದ್ದಳು. ಈ ವಿಚಾರವನ್ನು ಅಯ್ನಾಸ್‌ ಲೈಟ್ ಆಗಿ ಸ್ವೀಕರಿಸದ್ದರೆ, ಆರೋಪಿ ಪ್ರವೀಣ್ ಮಾತ್ರ ತನ್ನ ಪ್ರೀತಿಯನ್ನು ಗಂಭೀರವಾಗಿ ಪರಿಣಗಣಿಸಿದ್ದ. ಈ ಮಧ್ಯೆ ಇಬ್ಬರ ನಡುವೆ ಹಣದ ವ್ಯವಹಾರ ಕೂಡ ನಡೆದಿದ್ದು, ಈ ವಿಚಾರ ಎರಡು ಕುಟುಂಬಕ್ಕೂ ಗೊತ್ತಾಗಿ ಗಲಾಟೆ ಕೂಡ ಆಗಿತ್ತು.

ಇನ್ನು ಮನೆಯವರ ಗಲಾಟೆಯ ನಡುವೇಯೇ ಆರೋಪಿ ಪ್ರವೀಣ್ ಪತ್ನಿ, ಮೃತ ಅಯ್ನಾಸ್ ಜೊತೆ ಜಗಳವಾಡಿದ್ದರು. ಇದಾದ ಬಳಿಕ ಅಯ್ನಾಸ್ ಪ್ರವೀಣ್​ನನ್ನು ರಿಜೆಕ್ಟ್ ಮಾಡಿದ್ದಳು. ಈ ಹಿನ್ನಲೆ ಆಕೆಯನ್ನು ಕೊಲ್ಲುವ ನಿರ್ಧಾರ ಮಾಡಿದ್ದಾನೆ. ಅದರಂತೆ ನ.12 ರಂದು ಮನೆಗೆ ನುಗ್ಗಿ ಆಕೆಯನ್ನು ಹತ್ಯೆ ಮಾಡಲು ಮುಂದಾಗಿದ್ದ, ಈ ವೇಳೆ ಅಕೆಯ ಕೊಲೆಗೆ ಅಡ್ಡಪಡಿಸಿದವರನ್ನೆಲ್ಲರನ್ನು ಕೂಡ ಕೊಂದಿದ್ದಾಗಿ ಆರೋಪಿ ಪ್ರವೀಣ್ ಹೇಳಿದ್ದಾನೆ.

ಹೌದು, ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿ, ಯಾವುದೇ ಸಾಕ್ಷಿ ಬಿಡದೇ ಪರಾರಿಯಾಗಿದ್ದ ಹಂತಕನನ್ನು ಬಂಧಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಇನ್ನು ಈ ಆರೋಪಿಯನ್ನು ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹ ಮಾಡಿ ಬಂಧಿಸಿದ್ದೇವೆ. ಇಂದೇ ಆರೋಪಿ ಪ್ರವೀಣ್​ನನ್ನು ಕೋರ್ಟ್​ಗೆ ಹಾಜರುಪಡಿಸುತ್ತೇವೆ. ಅಯ್ನಾಝ್, ಚೌಗುಲೆ ನಡುವಿನ ಸಂಬಂಧ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಇನ್ನು ಆರೋಪಿ ಪ್ರವೀಣ್ ಚೌಗುಲೆಗೆ ಮದುವೆಯಾಗಿದೆ ಎಂದು ಉಡುಪಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist