ಉಡುಪಿ : ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ!
ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ವಿರಾಜ್, ಬಾಕ್ಸಿಂಗ್ ಕ್ಷೇತ್ರದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿದ್ದ. ಇಂದು ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕುರಿತು ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ, ಸೆ.05: ರಾಷ್ಟ್ರಮಟ್ಟದ ಬಾಕ್ಸಿಂಗ್ (Boxing) ಕ್ರೀಡಾಪಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ (Udupi) ಜಿಲ್ಲೆಯ ಮಲ್ಪೆ ಸಮೀಪದ ಶಾಂತಿನಗರದಲ್ಲಿ ನಡೆದಿದೆ. ಶಾಂತಿನಗರ ನಿವಾಸಿ ವಿರಾಜ್ ಮೆಂಡನ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ.
ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ವಿರಾಜ್, ಬಾಕ್ಸಿಂಗ್ ಕ್ಷೇತ್ರದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿದ್ದ. ಇಂದು ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಧರ್ಮದ ವಿವಾದಾತ್ಮಕ ಹೇಳಿಕೆ ನೀಡಿದ ತಮಿಳುನಾಡು ಸಿಎಂ ಪುತ್ರನಿಗೆ ‘ಸನಾತನ’ದ ಪಾಠ ಹೇಳಿದ ಪೇಜಾವರ ಶ್ರೀ
ಮೈಸೂರು, (ಸೆಪ್ಟೆಂಬರ್ 04): ಸನಾತನ ಧರ್ಮ (Sanatana Dharma) ಡೆಂಘಿ, ಮಲೇರಿಯಾ, ಕೊರೊನಾ ಇದ್ದಂತೆ. ಅದಕ್ಕೆ ಹೆದರಬಾರದು, ಅದನ್ನ ನಿರ್ಮೂಲನೆ ಮಾಡಬೆಕು. ಅದೇ ರೀತಿ ಸನಾತನ ಧರ್ಮವನ್ನ ನಿರ್ಮೂಲನೆ ಮಾಡಬೇಕು ಎಂದು ಸಚಿವ ಉದಯನಿಧಿ ಸ್ಟಾಲಿನ್, ಹೇಳಿಕೆಯನ್ನು ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ (Pejawar Mutt seer, Vishwaprasanna Teertha) ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಇಂದು (ಸೆಪ್ಟೆಂಬರ್ 04) ಮೈಸೂರಿನಿಂದ ಮಾಧ್ಯಮಗಳಿಗೆ ವಿಡಿಯೋ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ಶ್ರೀಗಳು, ಉದಯನಿಧಿ ಸ್ಟಾಲಿನ್ ಒಂದು ರಾಜ್ಯದ ಮಂತ್ರಿಯಾಗಿದ್ದಾರೆ. ಸಮಾಜದಲ್ಲಿ ಇಂತಹ ವಿಷ ಬೀಜವನ್ನು ಬಿತ್ತುವುದು ಸರಿಯಲ್ಲ.‘ಸನಾತನ’ ಎಂದರೇ ಸದಾ ಕಾಲವೂ ಇರುವಂತಹದ್ದು ಎಂದರ್ಥ. ಎಲ್ಲರೂ ಸುಖವಾಗಿ ಬದುಕಲು ಅಳವಡಿಸಿಕೊಳ್ಳುವ ಸೂತ್ರವೇ ಧರ್ಮ. ನಮ್ಮ ಸುಖದಿಂದ ಅಕ್ಕಪಕ್ಕದವರಿಗೆ ದುಃಖವಾಗಬಾರದು. ಬದಲಾಗಿ ನಮ್ಮ ಸುಖದಿಂದ ಅಕ್ಕಪಕ್ಕದವರಿಗೂ ಸಂತೋಷ ಲಭಿಸಬೇಕು. ಇದು ಸನಾತನ ಧರ್ಮದ ಮೂಲ ಆಶಯವಾಗಿದೆ. ಅಂತಹ ಧರ್ಮವನ್ನು ನಿರ್ಮೂಲಿಸಬೇಕು ಎನ್ನುವ ಪ್ರವೃತ್ತಿ ಸರಿಯಲ್ಲ ಎಂದಿದ್ದಾರೆ.
ಸಮಾಜದೊಳಗೆ ವಿಷ ಬೀಜ ಬಿತ್ತುವ ಕೆಲಸ ಮಾಡಬಾರದು. ಸಚಿವರೊಬ್ಬರ ಸನಾತನ ಧರ್ಮದ ಹೇಳಿಕೆ ಕೇಳಿ ತೀವ್ರ ಅಘಾತವಾಗಿದೆ. ಸನಾತನ ಧರ್ಮ ಅಂದ್ರೆ ಸದಾಕಾಲ ಇರುವಂತಹದ್ದು. ಎಲ್ಲಾರು ಸುಖ ಶಾಂತಿಯಿಂದ ಬಯಸುವವರು. ಸಮಾಜದಲ್ಲಿ ಸುಖ ಶಾಂತಿಯಿಂದ ಬದುಕುಬೇಕು. ಇದೇ ಸನಾತನ ಧರ್ಮದ ಆಶಯವಾಗಿರುತ್ತದೆ. ಸನಾತದ ಧರ್ಮದ ನಿರ್ಮೂಲನೆ ಹೇಳಿಕೆಯನ್ನ ಖಂಡಿಸುತ್ತೇನೆ. ಇಂತಹ ಹೇಳಿಕೆಯನ್ನ ನಾನು ಬಲವಾಗಿ ಖಂಡಿಸುತ್ತೇನೆ ಎಂದು ಹೇಳಿದ್ದಾರೆ.