ಮಂಗಳವಾರ, ಏಪ್ರಿಲ್ 30, 2024
ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯಕ್ಷಗಾನ ವೇಷ ಧರಿಸಿ ಮತದಾನ ಬಗ್ಗೆ ಜಾಗೃತಿ ಮೂಡಿಸಿದ ಉಡುಪಿ ಅಧಿಕಾರಿಗಳು..!

Twitter
Facebook
LinkedIn
WhatsApp
ಯಕ್ಷಗಾನ ವೇಷ ಧರಿಸಿ ಮತದಾನ ಬಗ್ಗೆ ಜಾಗೃತಿ ಮೂಡಿಸಿದ ಉಡುಪಿ ಅಧಿಕಾರಿಗಳು..!

ಉಡುಪಿ: ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಅಧಿಕಾರಿಗಳು ನಾನಾ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಅತ್ಯುತ್ತಮವಾಗಿ ಜಾಗೃತಿ ಕಾರ್ಯ ಮೂಡಿಸಿದ ಅಧಿಕಾರಿಗಳಿಗೆ ಚುನಾವಣಾ ಆಯೋಗ ಪಾರಿತೋಷಕವನ್ನು ನೀಡುತ್ತದೆ.

ಉಡುಪಿ ಜಿಲ್ಲೆಯ ಅಧಿಕಾರಿಗಳಂತೂ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಸ್ವತಹ ತಾವೇ ಯಕ್ಷಗಾನದ ಬಗೆಬಗೆಯ ವೇಷಗಳನ್ನು ತೊಡುವ ಮೂಲಕ ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲೇ ವಿಶೇಷ ಎಂಬಂತೆ ಜಿಲ್ಲೆಯ ಐಎಎಸ್, ಐಪಿಎಸ್ ಹಾಗೂ ಕೆಎಎಸ್ ಅಧಿಕಾರಿಗಳು ಶ್ರಮಪಟ್ಟು ಗಂಟೆಗಟ್ಟಲೆ ಕುಳಿತು ಯಕ್ಷಗಾನ ವೇಷ ಧರಿಸಿ ಜಾಗೃತಿ ಕಾರ್ಯಕ್ರಮದ ವಿಡಿಯೋಗಳಿಗೆ ಪೋಸ್ಟರ್‌ಗಳಿಗೆ ಪೋಸ್ ನೀಡಿದ್ದಾರೆ.

ಕರಾವಳಿಯ ಪ್ರಸಿದ್ಧ ಜಾನಪದ ಕಲೆಯಾದ ಯಕ್ಷಗಾನದ ಮೂಲಕ ಈಗಾಗಲೇ ಹಲವು ರೀತಿಯಲ್ಲಿ ಮತದಾನದ ಜಾಗೃತಿ ನಡೆಸಲಾಗಿದೆ . ಆದರೆ ಸ್ವತಃ ಅಧಿಕಾರಿಗಳೇ ಯಕ್ಷಗಾನ ವೇಷ ಧರಿಸಿ ಮತದಾನ ಜಾಗೃತಿ ಮೂಡಿಸಿರುವುದು ಇದೇ ಪ್ರಥಮ.

ಉಡುಪಿ ಜಿಲ್ಲಾ ಪಂಚಾಯತ್ ಸಿಇಒ ಪ್ರತಿಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾದೇವಿ, ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ ಕರಾವಳಿ ಕಾವಲುಪಡೆಯ ಪೊಲೀಸ್ ಅಧೀಕ್ಷಕ ಮಿಥುನ್ ಸ್ವತಹ ಆಸಕ್ತಿಯಿಂದ ಬಡಗುತಿಟ್ಟು ಯಕ್ಷಗಾನ ಶೈಲಿಯ ವೇಷ ಭೂಷಣ ಧರಿಸಿಕೊಂಡದ್ದು ಗಮನ ಸೆಳೆಯಿತು.

ವಿಶ್ವ ಪ್ರಸಿದ್ಧ ಕಾಪು ಬೀಚ್ ಸೇರಿದಂತೆ ಜಿಲ್ಲೆಯ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಈ ಮೂಲಕ ಮತದಾನದ ಮಹತ್ವವನ್ನು ಅಧಿಕಾರಿಗಳು ಸಾರಿದ್ದಾರೆ.ಯಕ್ಷಗಾನ ನಮ್ಮ ದೇಶದ ವಿಶಿಷ್ಟ ಕಲೆಯಾಗಿ ಗುರುತಿಸಿಕೊಂಡಿದ್ದು ಜಿಲ್ಲಾ ಸ್ವೀಪ್ ಕಾರ್ಯಕ್ರಮದ ಭಾಗವಾಗಿ ಈ ಕಲೆಯ ಮೂಲಕ ಜನರನ್ನು ತಲುಪುತ್ತಿದ್ದೇವೆ.

ಯಕ್ಷಗಾನ ಕಲೆಯ ಬಗ್ಗೆ ಹಿಂದಿನಿಂದಲೂ ನಾವು ಕೇಳಿದ್ದು ಇದೀಗ ಸ್ವತಹ ವೇಷ ಧರಿಸಿರುವುದು ಖುಷಿ ನೀಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಬಡಗುತಿಟ್ಟು ಯಕ್ಷಗಾನದ ಕೇದೆಗೆ ಮುಂಡಾಸು ಹಾಗೂ ಸ್ತ್ರೀ ವೇಷವನ್ನು ಧರಿಸುವ ಮೂಲಕ ಅಧಿಕಾರಿಗಳು ಕಲೆಗೂ ಗೌರವ ಸಲ್ಲಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ