ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಳ್ಳಾಲ : ನಾಪತ್ತೆಯಾಗಿದ್ದ ಚೈತ್ರಾ ಹೆಬ್ಬಾರ್ ವಿದೇಶಕ್ಕೆ ತೆರಳಿರುವ ಶಂಕೆ..!

Twitter
Facebook
LinkedIn
WhatsApp
ಉಳ್ಳಾಲ : ನಾಪತ್ತೆಯಾಗಿದ್ದ ಚೈತ್ರಾ ಹೆಬ್ಬಾರ್ ವಿದೇಶಕ್ಕೆ ತೆರಳಿರುವ ಶಂಕೆ..!

ಪುತ್ತೂರು : ನಾಪತ್ತೆಯಾಗಿದ್ದ ಪಿಎಚ್.ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ವಿದೇಶಕ್ಕೆ ತೆರಳಿರುವ ಶಂಕೆ ವ್ಯಕ್ತವಾಗಿದ್ದು ಪೊಲೀಸ್ ಮೂಲಗಳು ಈ ವಿಷಯವನ್ನು ಧೃಡಿಕರಿಸಿವೆ.

ದಕ್ಷಿಣ ಕನ್ನಡ ಪುತ್ತೂರಿನ ಪುರುಷರಕಟ್ಟೆ ನಿವಾಸಿ ಚೈತ್ರಾ ಹೆಬ್ಬಾರ್ ಬಂಟ್ವಾಳ ತಾಲೂಕಿನ ನೇರಳಕಟ್ಟೆ ನಿವಾಸಿ ಶಾರೂಕ್ ಶೇಖ್ ಸ್ನೇಹಿತನ ನೆರವಿನಲ್ಲಿ ವಿದೇಶಕ್ಕೆ ವಿಸಿಟಿಂಗ್ ವೀಸಾದಲ್ಲಿ ಚೈತ್ರಾ ಹೆಬ್ಬಾರ್ ಹಾರಿದ್ದಾಳೆ ಎಂದು ತಿಳಿದು ಬಂದಿದೆ. ಮಂಗಳೂರಿನ ಉಳ್ಳಾಲ ಕೋಟೆಕಾರು ಮಾಡೂರಿನ ಪಿಜಿಯಿಂದ ಫೆ.17 ಕ್ಕೆ ಪಿಹೆಚ್‌ಡಿ ವ್ಯಾಸಆಂಗ ಮಾಡುತ್ತಿದ್ದ ಚೈತ್ರಾ ಏಕಾಎಕಿ ನಾಪತ್ತೆಯಾಗಿದ್ದಳು. ಫೆ.18 ಕ್ಕೆ ಶಾರೂಕ್ ಶೇಖ್ ಕೂಡಾ ನಾಪತ್ತೆಯಾಗಿದ್ದು ಬಳಿಕ ಇವರು ಬೆಂಗಳೂರಿಗೆ ತೆರಳಿದ್ದರು. ಅಲ್ಲಿಂದ ಹಿಮಾಚಲ ಪ್ರದೇಶದ ಮನಾಲಿಗೆ ತೆರಳಿದ್ದರು ಅಲ್ಲಿಂದ ಬಳಿಕ ದೆಹಲಿ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ಚೈತ್ರಾ ಮಾತ್ರ ಹಾರಿದ್ದಾಳೆ. ಚೈತ್ರಾ‌ ವಿದೇಶಕ್ಕೆ ಹಾರಿದ ಬಳಿಕ ಶಾರೂಕ್ ಶೇಖ್ ನನ್ನು ಪೊಲೀಸರು ಪತ್ತೆ ಹಚ್ಚಿವಿಚಾರಣೆಗೆಂದು ಉಳ್ಳಾಲ ಪೋಲೀಸ್‌ ಠಾಣೆಗೆ ಕರೆ ತಂದಿದ್ದರು.

ಆದ್ರೆ ಚೈತ್ರಾ ಶಾರೂಕ್ ಜೊತೆ ಇದ್ದ ಎನ್ನುವುದಕ್ಕೆ ಯಾವುದೇ ದಾಖಲೆ ಇಲ್ಲದ ಕಾರಣ ಪೊಲೀಸರು ಶಾರೂಕ್ ನನ್ನು ಮನೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ. ಆದ್ರೆ ವಿದೇಶದಲ್ಲಿ ಯಾವುದೇ ಸಂಬಂಧಗಳಿಲ್ಲದ ಚೈತ್ರಾಳಿಗೆ ವಿದೇಶದ ವೀಸಾ ಕಳುಹಿಸಿದವರು ಯಾರು ? ವೀಸಾ ಕಳುಹಿಸಿದ ವ್ಯಕ್ತಿಗೂ ಚೈತ್ರಾಳಿಗೂ ಇರುವ ನಂಟೇನು ? ಎಂಬುವುದು ಇನ್ನೂ ನಿಗೂಢವಾಗಿದ್ದು ಒಟ್ಟಾರೆ ಚೈತ್ರಾ ಪ್ರಕರಣ ಪೊಲೀಸರಿಗೂ ಗೊಂದಲದ ಗೂಡಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ