ಸೋಮವಾರ, ಫೆಬ್ರವರಿ 3, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ

Twitter
Facebook
LinkedIn
WhatsApp
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ

ಬೆಂಗಳೂರು: ಸಿಗರೇಟ್​​ಗಳ (cigarettes )ಮತ್ತು ಇತರೆ ತಂಬಾಕು (Tobacco) ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಮಯ) (ಕರ್ನಾಟಕ ತಿದ್ದುಪಡಿ) ವಿಧೇಯಕ ಇಂದು (ಫೆ.21) ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳಿಂದ (Schools) ನೂರು ಮೀಟರ್ ವ್ಯಾಪ್ತಿಯಲ್ಲಿ ಸಿಗರೇಟ್ ಮಾರಾಟ ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದವರ ವಿರುದ್ಧ ದಂಡದ ಪ್ರಮಾಣ 100 ರೂ. ರಿಂದ 1000 ರೂ. ಗೆ ಏರಿಕೆ ಮಾಡಲಾಗಿದೆ.

ಇನ್ನು ಸಿಗರೇಟು ಮಾರಾಟದ ವಯೋಮಿತಿ 18 ವರ್ಷದಿಂದ 21 ವರ್ಷಕ್ಕೆ ಏರಿಕೆ ಮಾಡಲಾಗಿದೆ. ಯಾವುದೇ ಬಾರ್ ರೆಸ್ಟೋರೆಂಟ್ ಹಾಗೂ ಇತರೆ ಕಡೆಗಳಲ್ಲಿ ಹುಕ್ಕಾ ಬಾರ್​ ನಿಷೇಧಿಸಲಾಗಿದೆ. ಹುಕ್ಕಾ ಬಾರ್ ಅನಧಿಕೃತವಾಗಿ‌ ನಡೆಸಿದರೆ ಒಂದು ವರ್ಷಕ್ಕೆ ಕಡಿಮೆ ಇಲ್ಲದಂತೆ ಹಾಗೂ 3 ವರ್ಷಕ್ಕೆ ವಿಸ್ತರಣೆ ಮಾಡುವ ಜೈಲು ಶಿಕ್ಷೆ ಮತ್ತು 50 ಸಾವಿರದಿಂದ 1 ಲಕ್ಷ ರೂ. ವರೆಗೆ ದಂಡ ವಿಧಿಸಲಾಗುತ್ತದೆ.

ವಿಧೇಯಕ ಮಂಡಿಸಿದ ದಿನೇಶ್ ಗುಂಡೂರಾವ್

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು 2024ರ ಸಿಗರೇಟ್ ಸೇವನೆ ಮತ್ತು ಜಾಹೀರಾತು ನಿಷೇಧ, ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ ಮತ್ತು ಸರಬರಾಜು ತಿದ್ದುಪಡಿ ವಿಧೇಯಕವನ್ನು ಮಂಡನೆ ಮಾಡಿದರು. ಈ ವೇಳೆ ಮಾತನಾಡಿದ ಸಚಿವ ದಿನೇಶ್‌ ಗುಂಡೂರಾವ್, ಹುಕ್ಕಾಬಾರ್‌ಗಳನ್ನು ನಿಷೇಧ ಮಾಡಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್ ಸೇದಬಾರದು ಅಂತಿದೆ. ಆದರೆ, ಅನೇಕ ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಹುಕ್ಕಾ ಬಾರ್‌ಗಳನ್ನು ಆರಂಭಿಸಿದ್ದಾರೆ. ಸಿಗರೇಟ್ ಸೇದೋದೇ ತಪ್ಪು ಅಂತ ಹೇಳಿದರೆ, ಮತ್ತೊಂದು ರೂಪದಲ್ಲಿ ತಂದಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಮುಂದಾಗಿದ್ದೇವೆ ಎಂದು ಹೇಳಿದರು.

ಕಾನೂನಿನಲ್ಲಿ 18 ವರ್ಷದೊಳಗಿನವರಿಗೆ ಮಾರಬಾರದು ಎಂದು ಇತ್ತು. ಅದನ್ನು 21 ವರ್ಷಕ್ಕೆ ಅಂತ ಏರಿಸಲಾಗಿದೆ. ಶಾಲಾ – ಕಾಲೇಜುಗಳ ಮೂರು ಮೀಟರ್ ಒಳಗೆ ಮಾರಾಟ ಮಾಡಬಾರದು ಅಂತ ನಿಯಮ ಇದೆ. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದುವವರಿಗೆ ಇನ್ನೂರು ದಂಡ ಇತ್ತು. ಈಗ ಸಿಗರೇಟ್ ಸೇದುವವರಿಗೆ 1000 ರೂ. ದಂಡ ಹಾಕಲಾಗುವುದು. ಆರೋಗ್ಯ ಕಾಪಾಡುವುದು ನಮ್ಮ ಕರ್ತವ್ಯ. ಯುವಕರು ಹುಕ್ಕಾ ಬಾರ್‌ಗೆ ಹೋಗಿ ಅಡಿಕ್ಟ್ ಆಗುತ್ತಿದ್ದಾರೆ. ಯುವ ಜನತೆ ಇದನ್ನು ಫ್ಯಾಷನ್ ಮಾಡಿಕೊಂಡಿದ್ದಾರೆ. ಇದರಿಂದ ಬೇರೆ ರೀತಿಯ ಅಡ್ಡ ಪರಿಣಾಮ‌ ಆಗುತ್ತಿದೆ ಎಂದು ದಿನೇಶ್‌ ಗುಂಡೂರಾವ್‌ ಕಳವಳ ವ್ಯಕ್ತಪಡಿಸಿದರು

ಒಳ್ಳೆಯ ನಿರ್ಧಾರ ಎಂದ ವಿರೋಧ ಪಕ್ಷ

ಈ ವೇಳೆ ವಿಪಕ್ಷ ನಾಯಕ ಅಶೋಕ್ ಮಾತನಾಡಿ, ಇದು ಒಳ್ಳೆಯ ನಿರ್ಧಾರವಾಗಿದೆ. ಇನ್ನೆರಡು ನಿಯಮಗಳನ್ನು ಸೇರಿಸಿ. ಶಾಲಾ – ಕಾಲೇಜುಗಳ ನೂರು ಮೀಟರ್ ಒಳಗೆ ಮಾರಾಟ ಮಾಡಿದರೆ ಸಾವಿರ ಅಲ್ಲ, ಹತ್ತು ಸಾವಿರ ರೂಪಾಯಿ ದಂಡ ಹಾಕಲಾಗುವುದು ಎಂಬುದನ್ನು ಸೇರ್ಪಡೆ ಮಾಡಿ ಎಂದು ಸಲಹೆ ನೀಡಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಿಗರೇಟ್ ಮಾರಾಟ ಮಾಡುವವರು ಸಣ್ಣ ಪುಟ್ಟ ಅಂಗಡಿಗಳು, ಅವರ ಮೇಲೆ ಮತ್ತೊಂದು ರೀತಿಯ ದೌರ್ಜನ್ಯ ಆಗಬಾರದು. ಹಾಗಾಗಿ ಸಾವಿರ ರೂಪಾಯಿ ದಂಡ ಹಾಕಿದ್ದೇವೆ. ಆದರೆ, ಹುಕ್ಕಾ ಬಾರ್ ನಡೆಸುವವರು ಶ್ರೀಮಂತರು. ಅವರಿಗೆ ಬೇಕಾದರೆ ನೊಡೋಣ ಎಂದು ಹೇಳಿದರು.

ಶಾಸಕ ಸುರೇಶ್ ಕುಮಾರ್ ಮಾತನಾಡಿ, ಅಪರೂಪಕ್ಕೆ ಒಳ್ಳೆಯ ಬಿಲ್ ತಂದಿದ್ದಾರೆ ಎಂದು ಹೇಳಿದರು. ಈ ವೇಳೆ ಮಧ್ಯಪ್ರವೇಶ ಮಾಡಿದ ಶಾಸಕ ಶಿವಲಿಂಗೇಗೌಡ, ಹುಕ್ಕಾ ಬಾರ್ ಅಂದ್ರೇನು, ಸ್ವಲ್ಪ ವಿವರ ನೀಡಿ ಎಂದು ಕೇಳಿದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ಸ್ಪೀಕರ್‌ ಯು.ಟಿ. ಖಾದರ್‌, ಗೂಗಲ್ ಮಾಡಿ ಸಿಗುತ್ತದೆ ಎಂದು ಹೇಳಿ ಕೂರಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist