ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

UP: ಆಸ್ಪತ್ರೆಯಲ್ಲಿ ಸಿಗದ ಎಮರ್ಜೆನ್ಸಿ ಬೆಡ್ ; ಬಿಜೆಪಿ ಮಾಜಿ ಸಂಸದನ ಪುತ್ರ ಸಾವು!

Twitter
Facebook
LinkedIn
WhatsApp
UP: ಆಸ್ಪತ್ರೆಯಲ್ಲಿ ಸಿಗದ ಎಮರ್ಜೆನ್ಸಿ ಬೆಡ್ ; ಬಿಜೆಪಿ ಮಾಜಿ ಸಂಸದನ ಪುತ್ರ ಸಾವು!

ಲಕ್ನೋ: ಎಮೆರ್ಜೆನ್ಸಿ ವಾರ್ಡ್‍ನಲ್ಲಿ ಬೆಡ್ ಕೊರತೆಯಿಂದಾಗಿ ಬಿಜೆಪಿಯ ಮಾಜಿ ಸಂಸದನ (BJP Former MP) ಪುತ್ರನೊಬ್ಬ ಮೃತಪಟ್ಟ ಘಟನೆ ಉತ್ತರಪ್ರದೇಶ ಲಕ್ನೋದ ಎಸ್‍ಜಿಪಿಜಿಐ ಆಸ್ಪತ್ರೆಯಲ್ಲಿ ನಡೆದಿದೆ.

ಮೃತನನ್ನು ಪ್ರಕಾಶ್ ಮಿಶ್ರಾ (41) ಎಂದು ಗುರುತಿಸಲಾಗಿದ್ದು, ಇವರು ಭಾರತೀಯ ಜನತಾ ಪಕ್ಷದ (BJP) ಮಾಜಿ ಸಂಸದ ಭೈರೋನ್ ಪ್ರಸಾದ್ ಮಿಶ್ರಾ (Bhairon Prasad Mishra) ಪುತ್ರ.

ಮೂತ್ರಪಿಂಡದ (Kidney) ಕಾಯಿಲೆಯಿಂದ ಬಳಲುತ್ತಿದ್ದ ಮಿಶ್ರಾ ಅವರನ್ನು ಸೋಮವಾರ ರಾತ್ರಿ 11 ಗಂಟೆಗೆ ಎಸ್‍ಜಿಪಿಜಿಐ ತುರ್ತು ವಿಭಾಗಕ್ಕೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಬೆಡ್ ಕೊರತೆಯಿಂದಾಗಿ ತುರ್ತು ಚಿಕಿತ್ಸೆ ಸಿಗಲಿಲ್ಲ. ಹೀಗಾಗಿ ಆಸ್ಪತ್ರೆಗೆ ಹೋದ ಸ್ವಲ್ಪ ಸಮಯದ ಬಳಿಕ ಮಗ ಮೃತಪಟ್ಟಿರುವುದಾಗಿ ಪ್ರಸಾದ್ ಮಿಶ್ರಾ ದೂರಿದ್ದಾರೆ. ಅಲ್ಲದೆ ಮಗನ ಶವದೊಂದಿಗೆ ತುರ್ತು ವಾರ್ಡ್‍ನ ಹೊರಗೆ ಪ್ರತಿಭಟನೆ ಮಾಡಿದರು.

ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು ನನ್ನ ಮಗನನ್ನು ಕಳೆದುಕೊಂಡಿದ್ದೇನೆ ಎಂದು ಪ್ರಸಾದ್ ಮಿಶ್ರಾ ಗೋಳಾಡಿದರು. ನನ್ನ ನಂತರ ಸುಮಾರು 20-25 ಜನರು ಚಿಕಿತ್ಸೆ ಪಡೆದರು. ನಾನು ಪ್ರತಿಭಟನೆಗೆ ಕುಳಿತಾಗ ಎಲ್ಲರೂ ವೈದ್ಯನ ಬಗ್ಗೆ ದೂರು ನೀಡುತ್ತಿದ್ದರು. ಆ ವೈದ್ಯನಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

ಆಸ್ಪತ್ರೆ ಮುಖ್ಯಸ್ಥ ಡಾ.ಆರ್.ಕೆ.ಧಿಮಾನ್ ಮಾತನಾಡಿ, ಆಸ್ಪತ್ರೆಗೆ ದಾಖಲಿಸಿದಾಗ ರೋಗಿಯನ್ನು ಐಸಿಯುಗೆ ಕರೆದೊಯ್ಯಲು ವೈದ್ಯರು ಹೇಳಿದರು. ಆದರೆ ಅಲ್ಲಿ ಬೆಡ್‍ಗಳು ಲಭ್ಯವಿಲ್ಲ ಎಂದು ರೋಗಿ ಕಡೆಯವರಿಗೆ ತಿಳಿಸಿದ್ದಾರೆ. ಯಾಕೆ ಬೆಡ್ ಇಲ್ಲ ಎಂದು ಹೇಳಿದರು ತಿಳಿದಿಲ್ಲ. ಈ ಸಂಬಂಧ ನಾವು ಸಮಿತಿಯನ್ನು ರಚಿಸಿದ್ದೇವೆ. ನಾವು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಸದ್ಯ ವೈದ್ಯರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದರು.

ಘಟನೆಯ ಕುರಿತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಪ್ರತಿಕ್ರಿಯಿಸಿ, ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದು ಆಸ್ಪತ್ರೆಯ ತಪ್ಪಲ್ಲ. ಆದರೆ ಇದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಪ್ಪು. ಆಸ್ಪತ್ರೆಗೆ ಏಕೆ ಬಜೆಟ್ ನೀಡುತ್ತಿಲ್ಲ ಎಂದು ಪ್ರಶ್ನಿಸಿದರು.

ಘಟನೆ ಸಂಬಂಧ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಕಟ್ಟುನಿಟ್ಟಿನ ಕ್ರಮದ ಭರವಸೆ ನೀಡಿದ್ದಾರೆ. ಅಲ್ಲದೆ ಮಾಜಿ ಸಂಸದನ ಮನೆಗೆ ಭೇಟಿ ಮಾಡಿದ್ದಾರೆ. ಇದೊಂದು ದುರದೃಷ್ಟಕರ ಘಟನೆಯಾಗಿದೆ. ಈ ಸಂಬಂಧ ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದ್ದು, ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಲಾಗುವುದು ಎಂದರು.

ಮುಕೇಶ್‌ ಅಂಬಾನಿಗೆ 3ನೇ ಬಾರಿಗೆ ಕೊಲೆ ಬೆದರಿಕೆ – ಬೇಡಿಕೆ ಮೊತ್ತ 400 ಕೋಟಿಗೆ ಏರಿಕೆ

ಮುಂಬೈ: ರಿಲಯನ್ಸ್‌ ಇಂಡಸ್ಟ್ರೀಸ್‌ ಅಧ್ಯಕ್ಷ ಮುಕೇಶ್‌ ಅಂಬಾನಿ (Mukesh Ambani) ಅವರಿಗೆ 3ನೇ ಬಾರಿಗೆ ಕೊಲೆ ಬೆದರಿಕೆ ಬಂದಿದೆ. ಇಮೇಲ್‌ನಲ್ಲಿ ಮತ್ತೊಂದು ಬೆದರಿಕೆ ಪತ್ರ ಬಂದಿದ್ದು, ಬೇಡಿಕೆ ಮೊತ್ತವನ್ನು 200 ಕೋಟಿ ರೂ.ನಿಂದ 400 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ.

ಇದೇ ಅಕ್ಟೋಬರ್‌ 27 ರಂದು 200 ಕೋಟಿ ರೂ.ಗಳಿಗೆ ಬೇಡಿಕೆಯಿಟ್ಟು ಬೆದರಿಕೆ ಇಮೇಲ್‌ ಪತ್ರ (Email Death Threat Letter) ಕಳುಹಿಸಿದ್ದ ಅದೇ ಇಮೇಲ್‌ನಿಂದ ಮತ್ತೊಂದು ಬೆದರಿಕೆ ಪತ್ರ ಬಂದಿದೆ. ಈ ಬಾರಿ ಬೇಡಿಕೆ ಮೊತ್ತವನ್ನು 400 ಕೋಟಿಗೆ ಹೆಚ್ಚಿಸಲಾಗಿದೆ.

ನಿಮಗೆ ಎಷ್ಟೇ ಉತ್ತಮ ಭದ್ರತೆ ಇದ್ದರೂ, ನಮ್ಮ ಒಬ್ಬನೇ ಒಬ್ಬ ಸ್ನೈಪರ್‌ ನಿಮ್ಮನ್ನು ಕೊಲ್ಲುತ್ತಾನೆ. ಈ ಬಾರಿ ನಮ್ಮಮ್ಮ ಪತ್ತೆ ಮಾಡುವುದಕ್ಕಾಗಲಿ ಅಥವಾ ಬಂಧಿಸುವುದಕ್ಕಾಗಲಿ ಸಾಧ್ಯವಿಲ್ಲ ಎಂದೂ ಇಮೇಲ್‌ನಲ್ಲಿ ಅಪರಿಚಿತ ವ್ಯಕ್ತಿ ಎಚ್ಚರಿಕೆ ನೀಡಿದ್ದಾನೆ. 3ನೇ ಬಾರಿಗೆ ಕೊಲೆ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು (Mumbai Police) ದಕ್ಷಿಣ ಮುಂಬೈನಲ್ಲಿರುವ ಅಂಬಾನಿ ನಿವಾಸಕ್ಕೆ ಭದ್ರತೆ ಹೆಚ್ಚಿಸಿದ್ದಾರೆ.

ಇದೇ ತಿಂಗಳ ಅಕ್ಟೋಬರ್‌ 27 ರಂದು ಮೊದಲ ಇಮೇಲ್‌ ಬೆದರಿಕೆ ಪತ್ರ ಬಂದಿತ್ತು. ಅದರಲ್ಲಿ 20 ಕೋಟಿ ರೂ.ಗಳನ್ನು ತಪ್ಪದೇ ಕೊಡಬೇಕು. ನಮ್ಮ ಬಳಿ ಶಾರ್ಪ್ ಶೂಟರ್‌ಗಳಿದ್ದು, ಹಣ ನೀಡುವಲ್ಲಿ ವಿಫಲರಾದರೆ ಗುಂಡು ಹಾರಿಸಲಾಗುವುದು ಎಂದು ಬೆದರಿಕೆ ಹಾಕಲಾಗಿತ್ತು. ಅಕ್ಟೋಬರ್‌ 28 ರಂದು ಅದೇ ಇಮೇಲ್‌ನಿಂದ ಅಪರಿಚಿತ ವ್ಯಕ್ತಿಯೊಬ್ಬ ಮತ್ತೊಂದು ಬೆದರಿಕೆ ಪತ್ರ ಕಳುಹಿಸಿದ್ದ. ಹಿಂದಿನ ಇ-ಮೇಲ್‌ಗೆ ಪ್ರತಿಕ್ರಿಯೆ ನೀಡದ ಕಾರಣ ಹಣದ ಬೇಡಿಕೆಯನ್ನು 200 ಕೋಟಿ ರೂ.ಗೆ ಹೆಚ್ಚಿಸಿರುವುದಾಗಿ ಎಚ್ಚರಿಕೆ ನೀಡಿದ್ದ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist