ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆಸ್ತಿ ವಿಚಾರಕ್ಕೆ ಗಲಾಟೆ ; ನಡುರಸ್ತೆಯಲ್ಲೇ ಮಹಿಳೆಯ ಕತ್ತು ಕೊಯ್ದು ಕೊಲೆಯಲ್ಲಿ ಅಂತ್ಯ!

Twitter
Facebook
LinkedIn
WhatsApp
ಆಸ್ತಿ ವಿಚಾರಕ್ಕೆ ಗಲಾಟೆ ; ನಡುರಸ್ತೆಯಲ್ಲೇ ಮಹಿಳೆಯ ಕತ್ತು ಕೊಯ್ದು ಕೊಲೆಯಲ್ಲಿ ಅಂತ್ಯ!

ತುಮಕೂರು: ಆಸ್ತಿ ವಿಚಾರಕ್ಕೆ ಮಹಿಳೆಯೊಬ್ಬರ ಪ್ರಾಣಪಕ್ಷಿಯೇ ಹಾರಿಹೋಗಿದೆ. ಶಿವಮ್ಮ (65) ಹತ್ಯೆಯಾದವರು. ನಂದೀಶ್‌ ಎಂಬಾತನೊಂದಿಗೆ ಆಸ್ತಿ ವಿಚಾರಕ್ಕೆ ಶಿವಮ್ಮ ಕಿತ್ತಾಡಿಕೊಂಡಿದ್ದು, ಕೊಲೆಯಲ್ಲಿ (Murder Case) ಅಂತ್ಯವಾಗಿದೆ. ತುಮಕೂರು ಜಿಲ್ಲೆ ತುರುವೆಕೆರೆ ತಾಲೂಕಿ‌ನ ದಂಡಿನಶಿವರ ಬಳಿಯಿರುವ ಡಿ.ಪಾಳ್ಯದಲ್ಲಿ ಘಟನೆ ನಡೆದಿದೆ.

ಆರೋಪಿ ನಂದೀಶ್ ಹಾಗೂ ಶಿವಮ್ಮ ನಡುವೆ ಹಲವು ವರ್ಷಗಳಿಂದ ಆಸ್ತಿ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು. ಶನಿವಾರ (ಅ.7) ಇದೇ ವಿಚಾರ ಗಲಾಟೆ ಶುರುವಾಗಿದೆ. ಮಾತಿಗೆ ಮಾತು ಬೆಳೆದಿದ್ದು, ಕೋಪದ ಕೈಗೆ ಬುದ್ದಿ ಕೊಟ್ಟ ನಂದೀಶ್‌ ಶಿವಮ್ಮನ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ.
ರಕ್ತದ ಮಡುವಿನಲ್ಲೇ ಬಿದ್ದು ಒದ್ದಾಡಿದ ಶಿವಮ್ಮ ಸ್ಥಳದಲ್ಲೇ ಅಸುನೀಗಿದ್ದಾಳೆ. ಹತ್ಯೆ ಬಳಿಕ ಆರೋಪಿ ನಂದೀಶ್‌ ತಾನೇ ದಂಡಿನಶಿವರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

ಹತ್ಯೆ ನಡೆದ ಸ್ಥಳಕ್ಕೆ ದಂಡಿನ ಶಿವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ದಂಡಿನ ಶಿವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಟೀಯಲ್ಲಿ ನಿದ್ರೆ ಮಾತ್ರೆ ಹಾಕಿ ಚಿನ್ನಾಭರಣ ಲೂಟಿ

ಬೆಂಗಳೂರು: ನೀವೇನಾದರೂ ಟೀ-ಕಾಫಿ ಪ್ರಿಯರಾಗಿದ್ದರೆ ಎಚ್ಚರವಾಗಿರಿ. ಯಾಕೆಂದರೆ ಖತರ್ನಾಕ್‌ ಜೋಡಿಯೊಂದು ಟೀ ಕುಡಿಸಿ ಬಳಿಕ ನಿಮ್ಮಲ್ಲಿರುವ ಚಿನ್ನಾಭರಣವನ್ನು ಎಗರಿಸಿ (theft Case) ಪರಾರಿ ಆಗುತ್ತಾರೆ. ಹೀಗೆ ವೃದ್ಧರನ್ನೇ ಟಾರ್ಗೆಟ್‌ ಮಾಡಿ ಕಳವು ಮಾಡುತ್ತಿದ್ದ ಲಿವಿಂಗ್‌ ಟುಗೆದರ್‌ ಜೋಡಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಾರ್ತಿಕ್ ಹಾಗೂ ಮಂಜುಶ್ರೀ ಬಂಧಿತ ಆರೋಪಿಗಳಾಗಿದ್ದಾರೆ. ಇವರಿಬ್ಬರು ವೃದ್ದರನ್ನೇ ಟಾರ್ಗೆಟ್ ಮಾಡುತ್ತಿದ್ದರು. ನಯವಾಗಿ ಮಾತಾಡಿ ವೃದ್ಧೆಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದರು. ಟೀ ಕುಡಿಯುವ ನೆಪದಲ್ಲಿ ಕರೆದು ಬಳಿಕ ಮಾತಿಗಿಳಿಯುತ್ತಿದ್ದರು. ಮಾತನಾಡುತ್ತಲೆ ಟೀ ಅಥವಾ ಕಾಫಿಗೆ ನಿದ್ರೆ ಮಾತ್ರೆಯನ್ನು ಹಾಕಿ ಪ್ರಜ್ಞೆ ತಪ್ಪಿಸುತ್ತಿದ್ದರು. ಟೀ ಕುಡಿದು ಪ್ರಜ್ಞೆ ತಪ್ಪುತ್ತಿದ್ದಂತೆ ಅವರ ಬಳಿ ಇದ್ದ ಚಿನ್ನಾಭರಣ ಕದ್ದು ಪರಾರಿಯಾಗುತ್ತಿದ್ದರು.

ಇದೇ ಮಾದರಿಯಲ್ಲಿ ಮಲ್ಲೇಶ್ವರಂನ ಅಂಗಡಿ ಮಾಲೀಕರ ಚಿನ್ನ ಎಗರಿಸಿದ್ದರು. ಈ ಸಂಬಂಧ ಪ್ರಕರಣ‌ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆಯನ್ನು ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಕಾರ್ತಿಕ್‌ ಈ ಹಿಂದೆ ಕೊಲೆ ಹಾಗೂ ಕಿಡ್ನ್ಯಾಪ್ ಪ್ರಕರಣದಲ್ಲಿ ಭಾಗಿಯಾಗಿದ್ದ. ಇತ್ತೀಚೆಗೆ ಜಾಮೀನಿನ ಮೇಲೆ ಹೊರ ಬಂದು ಹೊಸ ಮಾದರಿ ಕೃತ್ಯಕ್ಕೆ ಕೈ ಹಾಕಿದ್ದ.

ಲಿವಿಂಗ್ ಟುಗೆದರ್‌ನಲ್ಲಿದ್ದಾಗ ಜತೆಯಾಗಿ ತಂತ್ರವನ್ನು ರೂಪಿಸುತ್ತಿದ್ದರು. ಕಾರ್ತಿಕ್‌ ವೃದ್ಧರೊಂದಿಗೆ ಮಾತಾಡಿ ಪುಸಲಾಯಿಸಿ ಚಿನ್ನ ಕಳವು ಮಾಡಿ ಮಂಜುಶ್ರೀಗೆ ನೀಡುತ್ತಿದ್ದ. ಮಂಜುಶ್ರೀ ಕದ್ದ ಚಿನ್ನವನ್ನು ಮಾರಾಟ ಮಾಡುತ್ತಿದ್ದಳು.

ಸದ್ಯ ಮಲ್ಲೇಶ್ವರಂ ಪೊಲೀಸರು ಈ ಖತರ್ನಾಕ್‌ ಜೋಡಿಯನ್ನು ಬಂಧಿಸಿದ್ದು, ಸುಮಾರು 6.5 ಲಕ್ಷ ಮೌಲ್ಯದ 115 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ಟೀ-ಕಾಫಿಗೆ ಬೆರೆಸುತ್ತಿದ್ದ ನಿದ್ದೆ ಮಾತ್ರೆಯನ್ನು ಕಸಿದುಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮಲ್ಲೇಶ್ವರಂ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ