ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಗ್ ಬಾಸ್ ಮನೆಯಿಂದಲೇ ವರ್ತೂರು ಸಂತೋಷ್ ಅರೆಸ್ಟ್ ; ತಡರಾತ್ರಿ ಬಂಧಿಸಿದ ಪೊಲೀಸರು?

Twitter
Facebook
LinkedIn
WhatsApp
ಬಿಗ್ ಬಾಸ್ ಮನೆಯಿಂದಲೇ ವರ್ತೂರು ಸಂತೋಷ್ ಅರೆಸ್ಟ್ ; ತಡರಾತ್ರಿ ಬಂಧಿಸಿದ ಪೊಲೀಸರು?

‘ಕನ್ನಡ ಬಿಗ್ ಬಾಸ್’ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆ ಒಳಗೆ ಪೊಲೀಸರ ಎಂಟ್ರಿ ಆಗಿದೆ ಎನ್ನಲಾಗುತ್ತಿದೆ. ವರ್ತೂರು ಸಂತೋಷ್ ಅವರನ್ನು ಪೊಲೀಸರು ಭಾನುವಾರ (ಅಕ್ಟೋಬರ್ 22) ತಡರಾತ್ರಿ ಅರೆಸ್ಟ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಈ ವಿಚಾರ ಚರ್ಚೆ ಆಗುತ್ತಿದೆ. ಕೆಲವು ಮೂಲಗಳು ಇದನ್ನು ಖಚಿತಪಡಿಸಿವೆ. ಆದರೆ, ವಾಹಿನಿ ಕಡೆಯಿಂದ ಈ ಬಗ್ಗೆ ಯಾವುದೇ ಮಾಹಿತಿ ಹೊರ ಬಿದ್ದಿಲ್ಲ. ಅವರು ಮಾಡಿದ ತಪ್ಪೇನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ವರ್ತೂರು ಸಂತೋಷ್ ಅವರು ಹಲವು ಪ್ರಾಣಿಗಳನ್ನು ಸಾಕಿದ್ದಾರೆ. ಹಳ್ಳಿಕಾರ್ ಕ್ಯಾಟಲ್ ಬ್ರೀಡ್​ನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ಇದಲ್ಲದೆ ಅಖಿಲ ಭಾರತ ಹಳ್ಳಿಕಾರ್‌ ತಳಿ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಸಂತೋಷ್ ಅವರು ಕತ್ತಿಗೆ ಒಂದು ಚೈನ್ ಹಾಕಿದ್ದರು. ಇದರಲ್ಲಿ ಹುಲಿಯ ಉಗುರು ಕಾಣಿಸಿದೆ. ಈ ಕಾರಣದಿಂದಲೇ ಅವರನ್ನು ಅರೆಸ್ಟ್ ಮಾಡಲಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ವರ್ತೂರು ಸಂತೋಷ್ ಅವರು ಬಿಗ್ ಬಾಸ್​ಗೆ ಬರುವ ಸಂದರ್ಭದಲ್ಲಿ ಕತ್ತಿನಲ್ಲಿ ಹುಲಿ ಉಗುರಿನ ಪೆಂಡೆಂಟ್ ಇರುವ  ಚೈನ್ ಹಾಕಿದ್ದರು. ಈ ಪೆಂಡೆಂಟ್ ಚರ್ಚೆ ಹುಟ್ಟುಹಾಕಿತ್ತು. ವನ್ಯಜೀವಿ ಕಾಯಿದೆ ಉಲ್ಲಂಘನೆ ಮಾಡಿದ್ದರಿಂದ ಅವರು ಬಂಧನಕ್ಕೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ.

 

ಒಮ್ಮೆ ಬಿಗ್ ಬಾಸ್ ಮನೆಯಿಂದ ಹೊರಬಿದ್ದರೆ ಅವರಿಗೆ ಮತ್ತೆ ಮನೆ ಒಳಗೆ ಪ್ರವೇಶ ನೀಡುವುದಿಲ್ಲ. ಈಗ ವರ್ತೂರು ಸಂತೋಷ್ ಅವರು ಅರೆಸ್ಟ್​ ಆಗಿರುವುದರಿಂದ ಅವರಿಗೆ ಮತ್ತೆ ಬಿಗ್ ಬಾಸ್ ಮನೆ ಒಳಗೆ ಬರೋಕೆ ಅವಕಾಶ ಸಿಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ. ಅವರು ಎಲಿಮಿನೇಟ್ ಆದ ಲೆಕ್ಕವೇ ಎಂದು ಕೆಲವರು ಊಹಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ