ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹಿರಿಯ ಜಾನಪದ ವಿದ್ವಾಂಸ, ಸಾಹಿತಿ ಅಮೃತ ಸೋಮೇಶ್ವರ ನಿಧನ...!

Twitter
Facebook
LinkedIn
WhatsApp
ಹಿರಿಯ ಜಾನಪದ ವಿದ್ವಾಂಸ, ಸಾಹಿತಿ ಅಮೃತ ಸೋಮೇಶ್ವರ ನಿಧನ...!

ಮಂಗಳೂರು: ಕರಾವಳಿಯ ಖ್ಯಾತ ಜಾನಪದ ವಿದ್ವಾಂಸ (Janapada Vidvamsa), ಸಂಶೋಧಕ, ಪ್ರಸಂಗ ಕರ್ತೃ, ಕವಿ ಮತ್ತು ಕಥೆಗಾರರಾಗಿ ಬಹುಮುಖಗಳಲ್ಲಿ ಕಾಣಿಸಿಕೊಂಡ ಹಿರಿಯ ಚೇತನ ಡಾ. ಅಮೃತ ಸೋವೇಶ್ವರ (Dr. Amrutha Someshwara) ಅವರು ಇನ್ನಿಲ್ಲ. ಅವರು ಶನಿವಾರ (ಜನವರಿ 6) ಬೆಳಗ್ಗೆ ಸೋಮೇಶ್ವರದಲ್ಲಿರುವ ತಮ್ಮ ಮನೆಯಲ್ಲಿ ನಿಧನರಾದರು (Death News). ಅವರಿಗೆ 81 ವರ್ಷ ಆಗಿತ್ತು.

ಸುಮಾರು 32ಕ್ಕೂ ಅಧಿಕ ಯಕ್ಷಗಾನ ಪ್ರಸಂಗಗಳನ್ನು ಬರೆದಿರುವ ಅಮೃತ ಸೋಮೇಶ್ವರ ಅವರು ಕರಾವಳಿಯ ಜಾನಪದ ಸಂಪತ್ತಿನ ಕೀಲಿಕೈಯಂತೆ ಸಾಧನೆ ಮಾಡಿದ್ದರು. ಅನುವಾದಕರಾಗಿ, ವಿಮರ್ಶಕರಾಗಿಯೂ ಸೇವೆ ಸಲ್ಲಿಸಿದ್ದ ಅಮೃತರ ನಿಧನದಿಂದ ಕರಾವಳಿ ಸರ್ವ ವಿಚಾರಗಳ ಬಗ್ಗೆ ಅಧ್ಯಯನಪೂರ್ಣವಾಗಿ ಮಾತನಾಡಬಲ್ಲ ಒಬ್ಬ ಪಂಡಿತನನ್ನು ಕಳೆದುಕೊಂಡಂತಾಗಿದೆ.

ಬದುಕು, ಸಾಧನೆಯ ಪುಟ್ಟ ಇಣುಕುನೋಟ
  1. 1. ಅಮೃತ ಸೋಮೇಶ್ವರರವರು ಹುಟ್ಟಿದ್ದು 1943ರ ಸೆಪ್ಟಂಬರ್ 27ರಂದು. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಕೋಟೆಕಾರು ಸಮೀಪದ ಅಡ್ಯ ಎಂಬಲ್ಲಿ. ತಂದೆ ಚಿರಿಯಂಡ ಮತ್ತು ತಾಯಿ ಅಮುಣಿ.
  2. 2. ಮಾತೃಭಾಷೆ ಮಲಯಾಳಂ ಆದರೂ ಸಾಹಿತ್ಯ ರಚನೆಗೆ ತೊಡಗಿದ್ದು ತುಳು ಹಾಗೂ ಕನ್ನಡದಲ್ಲಿ. ಪ್ರಾರಂಭಿಕ ಶಿಕ್ಷಣ ಕೋಟೆಕಾರಿನ ಸ್ಟೆಲ್ಲಾ ಮೇರಿ ಕಾನ್ವೆಂಟ್‌ನಲ್ಲಿ ಮುಗಿಸಿದ ಅವರು ಪ್ರೌಢ ಶಿಕ್ಷಣವನ್ನ ಆನಂದಾಶ್ರಮದಲ್ಲಿ ಮಾಡಿದ್ದಾರೆ.
  3. 3. ಮಂಗಳೂರಿನ ಸೇಂಟ್ ಅಲೋಷಿಯಸ್ ಕಾಲೇಜಿನಲ್ಲಿ ಪದವಿ ಪಡೆದು, ಮದರಾಸು ವಿಶ್ವವಿದ್ಯಾಲಯದಿಂದ ಕಲಾ ವಿಭಾಗದಲ್ಲಿ ಪದವಿ ಪಡೆದ ಅವರು ಮುಂದೆ ಅಲೋಷಿಯಸ್ ಕಾಲೇಜಿನಲ್ಲಿಯೇ ಅಧ್ಯಾಪಕರಾಗಿ ಕೆಲಸ ಆರಂಭಿಸಿದರು.
  4. 4. ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಎಂ.ಎ.ಪದವಿ ಪಡೆದ ನಂತರ ಪುತ್ತೂರಿನ ಸೇಂಟ್ ಫಿಲೋಮಿನಾ ಕಾಲೇಜಿನಲ್ಲಿ ಉಪನ್ಯಾಸಕರಾಗಿ ನಂತರ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ, 1993ರಲ್ಲಿ ನಿವೃತ್ತಿ ಹೊಂದಿದರು.
  5. 5. ನಿವೃತ್ತಿಯ ನಂತರ ಮಂಗಳೂರು ವಿಶ್ವವಿದ್ಯಾಲಯದ ಯಕ್ಷಗಾನ ಮಾಹಿತಿ ಕೇಂದ್ರದ ಸಂದರ್ಶಕ ಪ್ರಾಧ್ಯಾಪಕರಾಗಿ ಕೆಲಕಾಲ ಕಾರ್ಯ ನಿರ್ವಹಿಸಿದರು
ಯಕ್ಷಗಾನ ಕೃತಿಗಳಿಗೆ ಹೊಸ ಆಯಾಮ ನೀಡಿದ ಅಮೃತರು

1. ಹೈಸ್ಕೂಲು ವಿದ್ಯಾರ್ಥಿಯಾಗಿದ್ದಾಗಲೇ ಸಾಹಿತ್ಯದ ಬಗ್ಗೆ ಒಲವು ಬೆಳೆಸಿಕೊಂಡಿದ್ದ ಅವರು ಕಥೆ , ಕವನಗಳ ರಚನೆಗೆ ತೊಡಗಿಸಿಕೊಂಡು ಯಕ್ಷಗಾನ ಪ್ರಸಂಗವೊಂದನ್ನೂ ರಚಿಸಿದ್ದರು.

2. ಅಮರ ಶಿಲ್ಪಿ ವೀರ ಕಲ್ಕುಡ, ಘೋರ ಮಾರಕ, ಸಹಸ್ರ ಕವಚ ಮೋಕ್ಷ, ಕಾಯಕಲ್ಪ, ಅಮರ ವಾಹಿನಿ, ತ್ರಿಪುರ ಮಥನ, ಆದಿಕವಿ ವಾಲ್ಮೀಕಿ, ಚಾಲುಕ್ಯ ಚಕ್ರೇಶ್ವರ ಮುಂತಾದ ಮೂವತ್ತಕ್ಕೂ ಹೆಚ್ಚು ಕೃತಿ ರಚಿಸಿದ್ದು, ಅವರುಗಳ ರಂಗದಲ್ಲಿ ದೊಡ್ಡ ಜನಪ್ರಿಯತೆ ಪಡೆದಿವೆ.

3. ‘ಯಕ್ಷಗಾನ ಕೃತಿ ಸಂಪುಟ’ ಇವರ ಜಾನಪದ ಯಕ್ಷಗಾನ ಸಂಶೋಧನೆಯ ಫಲವಾಗಿ ಮೂಡಿಬಂದ ಬಹು ಮೌಲಿಕ ಕೃತಿ. ನವೋದಯ, ನವ್ಯ, ಪ್ರಗತಿಶೀಲ, ಬಂಡಾಯ ಹೀಗೆ ಯಾವುದೇ ಅಲೆಗೂ ಸಿಕ್ಕದೆ ಸ್ವತಂತ್ರ ನೆಲೆಯಲ್ಲಿ 70ಕ್ಕೂ ಅಧಿಕ ಕೃತಿಗಳನ್ನು ರಚಿಸಿದ್ದಾರೆ.

4. ಎಲೆಗಿಳಿ ಕೆಂಪುನೆನಪು, ರುದ್ರಶಿಲೆ ಸಾಕ್ಷಿ, ಮಾನವತೆ ಗೆದ್ದಾಗ ಮೊದಲಾದ ಕಥಾನ ಸಂಕಲನಗಳು ವನಮಾಲೆ, ಭ್ರಮಣ, ಉಪ್ಪುಗಳ್ಳಿ, ಜ್ಯೋತಿದರ್ಶನವಾಯಿತು-ಕವನ ಸಂಕಲನಗಳು. ತೀರದ ತೆರೆ (ಕಾದಂಬರಿ), ಕೋಟಿಚನ್ನಯ್ಯ, ವಿಶ್ವರೂಪ (ನಾಟಕ),ನಂದಳಿಕೆ ನಂದಾದೀಪ ಹಾಗೂ ರಾಜರತ್ನಂ ಕವಿತೆಗಳು (ವಿಮರ್ಶಾಕೃತಿಗಳು).

5. ತಂಬಿಲ, ರಂಗೀತ (ತುಳು ಕವನ ಸಂಕಲನಗಳು); ತುಳು ಪಾಡ್ದನ ಕತೆಗಳು, ಅವಿಲು (ತುಳು ಜಾನಪದ ಕತೆಗಳು); ಅಪಾರ್ಥಿನಿ-ಕುಚೋದ್ಯದ ಶಬ್ದಕೋಶವಲ್ಲದೆ ಫಿನ್ಲೆಂಡಿನ ಜಾನಪದ ಮಹಾಕಾವ್ಯವಾದ ‘ಕಾಲೇವಾಲ’ ವನ್ನೂ ತುಳುಭಾಷೆಗೆ ಅನುವಾದಿಸಿದ್ದಾರೆ.

ತುಳು ಭಾಷೆಗೆ ಅಪಾರ ಕೊಡುಗೆ ನೀಡಿದ ವಿದ್ವಾಂಸರು

1. ತುಳು ಭಾಷೆಯಲ್ಲಿ ಹಲವಾರು ರೇಡಿಯೋ ನಾಟಕಗಳು, ನೃತ್ಯ ರೂಪಕಗಳು, ಗಾದೆಗಳನ್ನೂ ರಚಿಸಿದ್ದಾರೆ.

2. ಚಂದ್ರಶೇಖರ ಕಂಬಾರರ ಜೋಕುಮಾರ ಸ್ವಾಮಿ ನಾಟಕವನ್ನೂ ತುಳು ಭಾಷೆಗೂ ಅನುವಾದಿಸಿದ್ದು ರಂಗದ ಮೇಲೂ ಪ್ರದರ್ಶನಗೊಂಡಿದೆ.

3. ಸುಮಾರು ಮೂವತ್ತಕ್ಕೂ ಹೆಚ್ಚು ಭಕ್ತಿಗೀತೆ, ಭಾವಗೀತೆಗಳ ಧ್ವನಿಸುರುಳಿಗಳನ್ನೂ ತುಳು ಹಾಗೂ ಕನ್ನಡ ಭಾಷೆಗಳಲ್ಲಿ ತಂದಿದ್ದಾರೆ.

4.ಯಕ್ಷಗಾನ ಕಲಾ ತಂಡವನ್ನೂ ಬಹರೈನ್‌, ದುಬಾಯ್‌ ದೇಶಗಳಿಗೆ ಕೊಂಡೊಯ್ದು ಯಕ್ಷಗಾನದ ಬಗ್ಗೆ ಅಭಿರುಚಿ ಬೆಳೆಯುವಂತೆ ಮಾಡಿದ್ದಾರೆ.

 
ಸಾಧನೆಗೆ ಸಂದ ಪ್ರಶಸ್ತಿಗಳ ಮಾಲೆ

1. ‘ತುಳುನಾಡ ಕಲ್ಕುಡೆ’ ನಾಟಕಕ್ಕೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ‘ಯಕ್ಷಗಾನ ಕೃತಿ ಸಂಪುಟ’ಕ್ಕೆ ಜಾನಪದ ಮತ್ತು ಯಕ್ಷಗಾನ ಅಕಾಡಮಿ ಪ್ರಶಸ್ತಿ, ‘ತುಳುಪಾಡ್ದನ ಕಥೆಗಳು’ ಕೃತಿಗೆ ಕೇಂದ್ರ ವಿದ್ಯಾ ಇಲಾಖೆಯ ಪ್ರಶಸ್ತಿ ದೊರೆತಿದೆ.

2 ‘ತುಳುಪಾಡ್ದನ ಸಂಪುಟ’ಕ್ಕೆ ಕು.ಶಿ. ಹರಿದಾಸಭಟ್ಟ ಜಾನಪದ ಪ್ರಶಸ್ತಿ, ‘ಅಪಾರ್ಥಿನಿ’ ಕುಚೋದ್ಯ ಶಬ್ದ ಕೋಶಕ್ಕೆ ಆರ್ಯಭಟ ಪ್ರಶಸ್ತಿ, ಯಕ್ಷಗಾನದ ಕೊಡುಗೆಗಾಗಿ ‘ಪಾರ್ತಿಸುಬ್ಬ ಪ್ರಶಸ್ತಿ’ ಆಕಾಶವಾಣಿ ಬಹುಮಾನ ದೊರೆತಿದೆ.

3. ತುಳು ಅಕಾಡಮಿ ಪ್ರಶಸ್ತಿ, ಕುಕ್ಕಿಲ ಪ್ರಶಸ್ತಿ, ನುಡಿಸಿರಿ ಪ್ರಶಸ್ತಿ, ಜಿಲ್ಲಾ ಗಣರಾಜ್ಯೋತ್ಸವ ಪ್ರಶಸ್ತಿ, ಕಾರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳಲ್ಲದೆ ಮುಲ್ಕಿಯಲ್ಲಿ ನಡೆದ ಅಖಿಲ ಭಾರತ ತುಳು ಸಮ್ಮೇಳನದ ಅಧ್ಯಕ್ಷತೆ, ಮುಂಬಯಿಯಲ್ಲಿ ನಡೆದ ಯಕ್ಷಗಾನ ಸಮ್ಮೇಳನದ ಅಧ್ಯಕ್ಷತೆ, ಕನ್ನಡ ಪುಸ್ತಕ ಪ್ರಾಧಿಕಾರ ಕೊಡಮಾಡುವ 2019ನೇ ಸಾಲಿನ ಡಾ. ಎಂ. ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ ಮುಂತಾದ ಗೌರವಗಳು ಅವರಿಗೆ ಸಿಕ್ಕಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist