ಭಾನುವಾರ, ಫೆಬ್ರವರಿ 23, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

SBI ಬ್ಯಾಂಕ್ ನ ವ್ಯವಸ್ಥಾಪಕ ನಿರ್ದೇಶಕರಾಗಿ ಉಡುಪಿಯ ವಿನಯ್ ಎಂ. ತೋನ್ಸೆ ನೇಮಕ!

Twitter
Facebook
LinkedIn
WhatsApp
SBI ಬ್ಯಾಂಕ್ ನ ವ್ಯವಸ್ಥಾಪಕ ನಿರ್ದೇಶಕರಾಗಿ ಉಡುಪಿಯ ವಿನಯ್ ಎಂ. ತೋನ್ಸೆ ನೇಮಕ!

ಹೊಸದಿಲ್ಲಿ: ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ (State Bank of India – SBI) ವ್ಯವಸ್ಥಾಪಕ ನಿರ್ದೇಶಕರಾಗಿ (ಎಂಡಿ) ಉಡುಪಿಯ ವಿನಯ್ ಎಂ. ತೋನ್ಸೆ (Vinay M Tonse) ಅವರನ್ನು ಕೇಂದ್ರ ಸರ್ಕಾರ ಸೋಮವಾರ ನೇಮಿಸಿದೆ.

ಇದಕ್ಕೆ ಮೊದಲು, ವಿನಯ್‌ ತೋನ್ಸೆ ಅವರು ಎಸ್‌ಬಿಐನಲ್ಲಿ ಉಪ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಸರ್ಕಾರಿ ಸ್ವಾಮ್ಯದ ಎಸ್‌ಬಿಐಯ ಹಿರಿಯ ಹುದ್ದೆಗೆ ಹಣಕಾಸು ಸೇವಾ ಸಂಸ್ಥೆಗಳ ಬ್ಯೂರೋ (ಎಫ್ಎಸ್ಐಬಿ) ಇವರ ಹೆಸರನ್ನು ಸೆಪ್ಟೆಂಬರ್‌ನಲ್ಲಿ ಶಿಫಾರಸು ಮಾಡಿದೆ.

FSIB ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳ ನಿರ್ದೇಶಕರನ್ನು ಶಿಫಾರಸು ಮಾಡುವ ಜವಾಬ್ದಾರಿಯನ್ನು ಹೊಂದಿದೆ. ಸ್ವಾಮಿನಾಥನ್ ಜಾನಕಿರಾಮನ್ ಅವರು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಡೆಪ್ಯುಟಿ ಗವರ್ನರ್ ಆಗಿ ನೇಮಕಗೊಂಡ ನಂತರ ಈ ಹುದ್ದೆ ತೆರವಾಗಿತ್ತು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವನ್ನು ನಾಲ್ಕು ವ್ಯವಸ್ಥಾಪಕ ನಿರ್ದೇಶಕರು ಮತ್ತು ಒಬ್ಬ ಅಧ್ಯಕ್ಷರು ನಿರ್ವಹಿಸುತ್ತಾರೆ.

ವಿನಯ್ ಅವರ ಅಜ್ಜ ತೋನ್ಸೆ ನಾರಾಯಣ ಅವರು ಉಡುಪಿಯ ಬೋರ್ಡ್ ಹೈಸ್ಕೂಲ್‌ನಲ್ಲಿ ಶಿಕ್ಷಕರಾಗಿದ್ದರು. ಕಿನ್ನಿ ಮುಲ್ಕಿ ನಿವಾಸಿ ತಂದೆ ಮುರಳೀಧರ ರಾವ್ ಕಂದಾಯ ಇಲಾಖೆ, ಸಣ್ಣ ಉಳಿತಾಯ ಮತ್ತು ಲಾಟರಿ ಇಲಾಖೆ ನಿರ್ದೇಶಕರಾಗಿ ನಿವೃತ್ತರಾಗಿದ್ದಾರೆ. ಅವರ ತಾಯಿ ಕೃಷ್ಣಾ ಬಾಯಿ. ಬೆಂಗಳೂರಿನ ರಾಜಾಜಿನಗರ, ಇಂದಿರಾ ನಗರದಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ, ಸೈಂಟ್‌ ಜೋಸೆಫ್ ಕಾಲೇಜ್ ಆಫ್ ಕಾಮರ್ಸ್‌ನಲ್ಲಿ ಬಿಕಾಂ, ಸೆಂಟ್ರಲ್ ಕಾಲೇಜಿನಿಂದ ಎಂಕಾಂ ಪದವಿ ಪಡೆದಿದ್ದಾರೆ.

ರಾಜ್ಯ ಮಿನಿ ಒಲಿಂಪಿಕ್ಸ್‌ನಲ್ಲಿ ಬಿಲ್ವಿದ್ಯೆಯಲ್ಲಿ ಚಿನ್ನ, ಬೆಳ್ಳಿ ಪದಕ ಪಡೆದಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕವನ್ನು ಪ್ರ ತಿನಿಧಿಸಿದ್ದಾರೆ. ಅವರು 1988ರಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಕ್ಕೆ ಪ್ರೊಬೇಷನರಿ ಅಧಿಕಾರಿಯಾಗಿ ಸೇರಿದರು. ಭಾರತದಲ್ಲಿ ಮತ್ತು ವಿದೇಶಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. 30 ವರ್ಷಗಳಿಗೂ ಹೆಚ್ಚು ಕಾಲದ ಅವರ ವೃತ್ತಿಜೀವನದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪ್ರಮುಖ ಕಾರ್ಯಯೋಜನೆಗಳನ್ನು ಮುನ್ನಡೆಸಿದ್ದಾರೆ. ಕಾರ್ಪೊರೇಟ್ ಕ್ರೆಡಿಟ್, ಖಜಾನೆ, ಚಿಲ್ಲರೆ ಮತ್ತು ಅಂತಾರಾಷ್ಟ್ರೀಯ ಬ್ಯಾಂಕಿಂಗ್‌ನಂತಹ ವಾಣಿಜ್ಯ ಬ್ಯಾಂಕಿಂಗ್‌ನ ಅನುಭವ ಹೊಂದಿದ್ದಾರೆ.

ಅವರ ನೇಮಕಾತಿಗೆ ಮೊದಲು, ಎಫ್ಎಸ್ಐಬಿ ಆಗಸ್ಟ್‌ನಲ್ಲಿ ಎಸ್‌ಬಿಐನ ಉನ್ನತ ಹುದ್ದೆಗಾಗಿ 13 ಅಭ್ಯರ್ಥಿಗಳನ್ನು ಸಂದರ್ಶಿಸಿತ್ತು. ಅವರ ಕಾರ್ಯಕ್ಷಮತೆ, ಅವರ ಒಟ್ಟಾರೆ ಅನುಭವ ಮತ್ತು ಅಸ್ತಿತ್ವದಲ್ಲಿರುವ ನಿಯತಾಂಕಗಳನ್ನು ಗಮನದಲ್ಲಿಟ್ಟುಕೊಂಡು, ವಿನಯ್ ಎಂ. ತೋನ್ಸೆ ಅವರನ್ನು ಎಸ್‌ಬಿಐನಲ್ಲಿ ಎಂಡಿ ಹುದ್ದೆಗೆ ಮಂಡಳಿ ಶಿಫಾರಸು ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟದ ನೇಮಕಾತಿ ಸಮಿತಿಯಿಂದ ಅನುಮೋದನೆ ಪಡೆದ ನಂತರ ನೇಮಕಾತಿಯನ್ನು ದೃಢಪಡಿಸಲಾಗಿದೆ. ಎಫ್ಎಸ್ಐಬಿಯ ನೇತೃತ್ವವನ್ನು ಸಿಬ್ಬಂದಿ ಮತ್ತು ತರಬೇತಿ
ಇಲಾಖೆಯ (ಡಿಒಪಿಟಿ) ಮಾಜಿ ಕಾರ್ಯದರ್ಶಿ ಭಾನು ಪ್ರತಾಪ್ ಶರ್ಮಾ ವಹಿಸಿದ್ದಾರೆ. ಹಿಂದಿನ ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್‌ನ ಮಾಜಿ ಅಧ್ಯಕ್ಷ ಮತ್ತು ಎಂಡಿ ಅನಿಮೇಶ್ ಚೌಹಾನ್, ಆರ್‌ಬಿಐ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ದೀಪಕ್ ಸಿಂಘಾಲ್, ಹಿಂದಿನ ಐಎನ್‌ಜಿ ವೈಶ್ಯ ಬ್ಯಾಂಕ್‌ನ ಮಾಜಿ ಎಂಡಿ ಶೈಲೇಂದ್ರ ಭಂಡಾರಿ ಅವರು ಮಂಡಳಿಯ ಇತರ ಸದಸ್ಯರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist