ಭಾನುವಾರ, ಫೆಬ್ರವರಿ 16, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ; 13 ಜನ ಸಾವು!

Twitter
Facebook
LinkedIn
WhatsApp
ಮಣಿಪುರದಲ್ಲಿ ಮತ್ತೆ ಹಿಂಸಾಚಾರ ; 13 ಜನ ಸಾವು!

ನವದೆಹಲಿ: ಈಶಾನ್ಯ ರಾಜ್ಯ ಮಣಿಪುರದ (Manipur Violence) ತೆಂಗ್ನೌಪಾಲ್ ಜಿಲ್ಲೆಯಲ್ಲಿ (Tengnoupal district) ಸೋಮವಾರ ಮಧ್ಯಾಹ್ನ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು (Fresh violence), ಕನಿಷ್ಠ 13 ಜನರು ಮೃತಪಟ್ಟಿದ್ದಾರೆ. ತೆಂಗ್ನೌಪಾಲ್ ಜಿಲ್ಲೆಯ ಸೈಬೋಲ್ ಬಳಿಯ ಲೀತು ಗ್ರಾಮದಲ್ಲಿ ಮಧ್ಯಾಹ್ನದ ಸುಮಾರಿಗೆ ಎರಡು ಗುಂಪುಗಳ ಬಂಡುಕೋರರ ನಡುವೆ ಗುಂಡಿನ ಚಕಮಕಿ ನಡೆದಿದೆ (Encounter) ಎಂದು ಭದ್ರತಾ ಪಡೆಗಳ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂಸಾಚಾರ ನಡೆದ ಸ್ಥಳದಿಂದ ಭದ್ರತಾ ಪಡೆಗಳು ಕೇವಲ 10 ಕಿ.ಮೀ ದೂರದಲ್ಲಿದ್ದವು. ನಮ್ಮ ಪಡೆಗಳು ಸ್ಥಳಕ್ಕೆ ಆಗಮಿಸುವ ಹೊತ್ತಿಗೆ ಲೀತು ಗ್ರಾಮದಲ್ಲಿ 13 ಶವಗಳ ಬಿದ್ದಿದ್ದವು. ಆದರೆ, ಅಲ್ಲಿ ಯಾವುದೇ ಶಸ್ತ್ರಾಸ್ತ್ರಗಳು ಕಂಡ ಬರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತಪಟ್ಟವರೆಲ್ಲರೂ ಲೀತು ಗ್ರಾಮದಲ್ಲವರೆಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಅವರು ಬೇರೆ ಸ್ಥಳದಿಂದ ಬಂದು ಇಲ್ಲಿನ ಸ್ಥಳೀಯ ಪ್ರತ್ಯೇಕತಾ ಗುಂಪುಗಳ ಜತೆಗೆ ಸಂಘರ್ಷ ನಡೆಸಿರಬಹುದು. ಆಗ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಮತ್ತೊಂದೆಡೆ, ಮೃತಪಟ್ಟವರ ಗುರುತು ಪತ್ತೆಯನ್ನು ಪೊಲೀಸರಲಾಗಲೀ, ಭದ್ರತಾ ಪಡೆಗಳಾಗಲೇ ಖಚಿತಪಡಿಸಿಲ್ಲ.

ಈಗಾಗಲೇ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ ಮತ್ತು ತನಿಖೆಯನ್ನು ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಣಿಪುರದಲ್ಲಿ ಮೈತೈ ಮತ್ತು ಕುಕಿ ಸಮುದಾಯಗಳ ನಡುವೆ ಮೇ 3ರಿಂದ ಸಂಘರ್ಷ ನಡೆಯುತ್ತಿದೆ. ಎರಡೂ ಸಮುದಾಯಗಳ ನಡುವಿನ ಸಂಘರ್ಷದಲ್ಲಿ ಇದವರೆಗೆ ಕನಿಷ್ಠ 182 ಜನರು ಮೃತಪಟ್ಟು, 50 ಸಾವಿರಕ್ಕೂ ಅಧಿಕ ಜನರು ನಿರ್ಗತಿಕರಾಗಿದ್ದಾರೆ.

ಹಿಂಸಾಚಾರಪೀಡಿತ ಮಣಿಪುರ ರಾಜ್ಯದ ಗಡಿ ಪ್ರದೇಶಗಳನ್ನು ಹೊರತುಪಡಿಸಿ ಕೆಲವು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ಅಧಿಕಾರಿಗಳು ಭಾನುವಾರ ಮಾತ್ರ ಹಿಂತೆಗೆದುಕೊಂಡಿದ್ದಾರೆ. ಇದಾದ ಬೆನ್ನಲ್ಲೇ ಮತ್ತೆ ಗುಂಡಿನ ಚಕಮಕಿ ನಡೆದಿದೆ, ಹಿಂಸಾಚಾರ ಭುಗಿಲೆದ್ದಿದೆ.

ಹಿಂಸಾಚಾರಪೀಡಿತ ಕೆಲವು ಜಿಲ್ಲೆಗಳಲ್ಲಿನ ಪ್ರದೇಶಗಳು ಮೈತೈ ಅಥವಾ ಕುಕಿಗಳ ಪ್ರಾಬಲ್ಯವನ್ನು ಹೊಂದಿವೆ ಮತ್ತು ಕಳೆದ ಏಳು ತಿಂಗಳುಗಳಲ್ಲಿ ಹೆಚ್ಚಿನ ಹಿಂಸಾಚಾರ, ಗುಂಡಿನ ಚಕಮಕಿ, ಬೆಂಕಿ ಹಚ್ಚುವುದು ಮತ್ತು ಅಪಹರಣಗಳಿಗೆ ಈ ಪ್ರದೇಶವು ಸಾಕ್ಷಿಯಾಗಿದೆ. ಕೇಂದ್ರ ಮತ್ತು ಮಣಿಪುರ ಸರ್ಕಾರವು, ರಾಜ್ಯದ ಅತ್ಯಂತ ಹಳೆಯ ಉಗ್ರಗಾಮಿ ಸಂಘಟನೆಯಾದ ಯುನೈಟೆಡ್ ನ್ಯಾಶನಲ್ ಲಿಬರೇಶನ್ ಫೋರ್ಸ್ (ಯುಎನ್‌ಎಲ್‌ಎಫ್) ನೊಂದಿಗೆ ದಿಲ್ಲಿಯಲ್ಲಿ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ನಾಲ್ಕು ದಿನಗಳ ನಂತರ, ನಿಷೇಧವನ್ನು ಹಿಂತೆಗೆದುಕೊಳ್ಳಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist