ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಾವು ತ್ಯಾಗ ಮಾಡಿ ಬಂದವರು, ಈಗ ಮನೆಯಲ್ಲಿದ್ದೇವೆ; ಲೋಕಸಭೆ ಟಿಕೆಟ್ ನನಗೆ ಕೊಡಬೇಕು : ಬಿ.ಸಿ ಪಾಟೀಲ್

Twitter
Facebook
LinkedIn
WhatsApp
ನಾವು ತ್ಯಾಗ ಮಾಡಿ ಬಂದವರು, ಈಗ ಮನೆಯಲ್ಲಿದ್ದೇವೆ; ಲೋಕಸಭೆ ಟಿಕೆಟ್ ನನಗೆ ಕೊಡಬೇಕು : ಬಿ.ಸಿ ಪಾಟೀಲ್

ನಾವು ತ್ಯಾಗ ಮಾಡಿ ಬಂದವರು, ಈಗ ಮನೆಯಲ್ಲಿದ್ದೇವೆ. ನಮಗೆ ಹೆದರಿಸುವುದು, ಬೆದರಿಸುವುದು ಎಲ್ಲ ಗೊತ್ತಿಲ್ಲ. ಟಿಕೆಟ್ ನನಗೆ ಕೊಡಬೇಕು ಎಂದು ಬಿ.ಸಿ.ಪಾಟೀಲ್ ಹಾವೇರಿ-ಗದಗ ಲೋಕಸಭೆ ಬಿಜೆಪಿ ಟಿಕೆಟ್ ಗಾಗಿ ಪಟ್ಟು ಹಿಡಿದಿದ್ದಾರೆ.

ಹಿರೇಕೆರೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಮನೆಯಲ್ಲಿ ಕೂತುಕೊಂಡಿದ್ದೇವೆ. ನಮಗೆ ಹೆದರಿಸೋದು ಬೆದರಿಸೋದು ಗೊತ್ತಿಲ್ಲ. ಸೈಲೆಂಟ್ ಆಗಿ ಇದ್ದೀವಿ ಎಂದರೆ ಅದು ನಮ್ಮ ದೌರ್ಬಲ್ಯ ಎಂದು ಭಾವಿಸಬಾರದು. ಈಗಾಗಲೇ ಬೊಮ್ಮಾಯಿ ಸಿಎಂ ಆಗಿದ್ದಾರೆ. ನಾನು ಹಾವೇರಿ ಹಾಗೂ ಗದಗ ಜಿಲ್ಲೆಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದೇನೆ. ನನಗೆ ಟಿಕೆಟ್ ಕೊಡಬೇಕು ಎಂದು ಅವರು ಬೇಡಿಕೆ ಇಟ್ಟಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದೇನೆ. ಹಾಗೆಂದು ನಾನು ಟಿಕೆಟ್ ಬೆನ್ನತ್ತಿಕೊಂಡು ಹೋಗುವವನಲ್ಲ. ನನಗೆ ಕೊಡಬೇಕು ಎಂದು ವಾದ ಮಾಡುತ್ತಿದ್ದೇನೆ. ಸಿಗಲಿಲ್ಲ ಎಂದರೆ ಕಾರ್ಯಕರ್ತರ ಜೊತೆ ಮಾತಾನಾಡುತ್ತೇನೆ. ನನಗೆ ನಂದೇ ಹಾದಿ ಇದೆ. ಹೆಬ್ಬಾರ್, ಎಸ್‍.ಟಿ ಸೋಮಶೇಖರ್ ಹಾದಿ ಬೇಕಾಗಿಲ್ಲ ಎಂದಿದ್ದಾರೆ.

ಯಡಿಯೂರಪ್ಪನವರೇ ಕಾಂತೇಶ್ ಜೊತೆ ನಿಂತು ಗೆಲ್ಲಿಸಿಕೊಂಡು ಬರೋದಾಗಿ ಮಾತುಕೊಟ್ಟಿದ್ದಾರೆ ಎಂಬ ಈಶ್ವರಪ್ಪ ಹೇಳಿಕೆ ವಿಚಾರವಾಗಿ, ಯಡಿಯೂರಪ್ಪನವರೇ ಆ ಮಾತು ಹೇಳಬೇಕಲ್ವಾ? ಅವರು ಹೇಳಿದರೆ ಆ ಪ್ರಕಾರ ನಡೆದುಕೊಳ್ಳಬೇಕಾಗುತ್ತೆ. ನಮಗೆ ಯಾವ ರೀತಿನೂ ಯಡಿಯೂರಪ್ಪ ಅವರು ಹೇಳಿಲ್ಲ. ನಾನು ಸೋತಿದ್ದೀನಿ, ಅವಕಾಶ ಕೊಡಿ ಗೆಲ್ತೀನಿ ಎಂದು ಕೇಳಿದ್ದೇನೆ. ಕಾಂತೇಶ್‍ಗೆ ಟಿಕೆಟ್ ಕೊಟ್ಟರೆ ವಿಚಾರ ಮಾಡುತ್ತೇನೆ. ಕಾಂತೇಶ್ ಅವರ ಬಗ್ಗೆ ಮಾತಾಡೋಕೆ ಹೋಗಲ್ಲ, ಕಾಂತೇಶ್‍ಗೂ ನನಗೂ ಸಂಬಂಧ ಇಲ್ಲ ಎಂದಿದ್ದಾರೆ.

ನಾನು ಎಲ್ಲಾ ಹೇಳಿದರೆ ನಿಮಗೆ ರುಚಿ ಉಳಿಯಲ್ಲ. ನಾನು ಎಚ್ಚರಿಕೆ ಕೊಡುತ್ತಿಲ್ಲ. ಒಬ್ಬ ಗ್ರಾಮ ಪಂಚಾಯತಿ ಸದಸ್ಯ ತನ್ನ ಸ್ಥಾನ ತ್ಯಾಗ ಮಾಡಲ್ಲ. ನಾವು ತ್ಯಾಗ ಮಾಡಿದ್ದೇವೆ. ನಮಗೆ ಟಿಕೆಟ್ ಕೊಡುವುದರಲ್ಲಿ ನ್ಯಾಯ ಇದೆ. ನಮ್ಮ ತ್ಯಾಗದಿಂದ ಸರ್ಕಾರ ಬಂತು. ಇನ್ನೂ 2023ರಲ್ಲಿ ಬಿಜೆಪಿ ಸೋತಿದೆ. ನಾವೆಲ್ಲಾ ಸೋತಿದ್ದೇವೆ, ಈಗ ನಮ್ಮ ಹಿತವನ್ನೂ ಅವರು ಕಾಯಲಿ. ಆ ಜವಾಬ್ದಾರಿ ಅವರಿಗೆ ಇದೆ ಅಲ್ವಾ? ಎಂದು ಪ್ರಶ್ನಿಸಿದ್ದಾರೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist