ಮಂಗಳವಾರ, ಅಕ್ಟೋಬರ್ 3, 2023
ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!-ರಸ್ತೆ ಬದಿ ಮಲಗಿದ್ದ 10 ಮಂದಿ ಕಾರ್ಮಿಕರ ಮೇಲೆ ಹರಿದ ಟ್ರಕ್ ; 5 ಮಂದಿ ಮೃತ್ಯು - ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Weather Today: ಉತ್ತರಾಖಂಡ, ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ; ದೆಹಲಿ, ಪಂಜಾಬ್​ನಲ್ಲಿ ಮಳೆ ಸಾಧ್ಯತೆ

Twitter
Facebook
LinkedIn
WhatsApp
PTI1 7 2017 000189A

ನವದೆಹಲಿ: ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಇಂದು (ಜನವರಿ 20) ಲಘು ಮಳೆಯಾಗಲಿದೆ (Rainfall) ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹಾಗೇ, ಮುಂದಿನ 48 ಗಂಟೆಗಳ ಕಾಲ ಹಿಮಾಚಲ ಪ್ರದೇಶದ (Himachal Pradesh) ಹೆಚ್ಚಿನ ಪ್ರದೇಶಗಳಲ್ಲಿ ಭಾರೀ ಹಿಮಪಾತ (Snowfall) ಮತ್ತು ಮಳೆಯ ಮುನ್ಸೂಚನೆ ನೀಡಲಾಗಿದೆ.

ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್‌ನಲ್ಲಿ ಜನವರಿ 22ರವರೆಗೆ ಲಘುವಾಗಿ ಮಳೆ ಮತ್ತು ಹಿಮಪಾತ ಉಂಟಾಗಲಿದೆ. ಪಂಜಾಬ್, ಹರಿಯಾಣ, ಚಂಡೀಗಢ, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಜನವರಿ 23-26ರ ಅವಧಿಯಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ದೆಹಲಿಯಲ್ಲಿ ಜನವರಿ 23ರಿಂದ 25ರವರೆಗೆ ಮಳೆ ಬೀಳುವ ನಿರೀಕ್ಷೆಯಿದೆ.

ಒಡಿಶಾ, ಅಸ್ಸಾಂ, ಮೇಘಾಲಯ ಮತ್ತು ತ್ರಿಪುರಾದ ಹಲವು ಪ್ರದೇಶಗಳಲ್ಲಿ ಜನವರಿ 23ರ ಅವಧಿಯಲ್ಲಿ ದಟ್ಟವಾದ ಮಂಜು ಆವರಿಸುವ ಸಾಧ್ಯತೆಯಿದೆ. ವಾಯುವ್ಯ ಭಾರತದ ಸೀವ್ರಾಲ್ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು ಸುಮಾರು 2 ಡಿಗ್ರಿ ಸೆಲ್ಸಿಯಸ್​ಗೆ ಏರಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಮಧ್ಯಪ್ರದೇಶದಲ್ಲಿ ಕನಿಷ್ಠ ತಾಪಮಾನದಲ್ಲಿ 3ರಿಂದ 5 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

 

ಮುಂದಿನ ವಾರ 5 ದಿನಗಳ ಕಾಲ ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತವಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. IMD ಪ್ರಕಾರ, ಹಿಮಾಚಲ ಪ್ರದೇಶವು ಜನವರಿ 23ರಿಂದ 26ರವರೆಗೆ ಭಾರೀ ಹಿಮಪಾತ ಮತ್ತು ಮಳೆಗೆ ಸಾಕ್ಷಿಯಾಗಲಿದೆ. ಲಾಹೌಲ್-ಸ್ಪಿತಿ, ಕುಲು, ಕಿನ್ನೌರ್ ಮತ್ತು ಚಂಬಾದ 3ರಿಂದ 4 ಜಿಲ್ಲೆಗಳಲ್ಲಿ 5 ಸೆಂ.ಮೀ ಹಿಮಪಾತ ದಾಖಲಾಗಿದೆ.

“ಎಲ್ಲ ರೀತಿಯ ಹವಾಮಾನ ಎಚ್ಚರಿಕೆಗೆ ಸರ್ಕಾರ ಸಿದ್ಧವಾಗಿದೆ. ಭಾರೀ ಹಿಮದ ನಡುವೆ ನಿರ್ಬಂಧಿಸಲಾದ ರಸ್ತೆಗಳನ್ನು ತೆರವುಗೊಳಿಸಲು ತಮ್ಮ ಹಿಮ ತೆರವು ಕಾರ್ಯಾಚರಣೆಯೊಂದಿಗೆ ಸಿದ್ಧರಾಗಿರಲು ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಹಿಮಾಚಲ ಪ್ರದೇಶದ ಸಿಎಂ ಸುಖ್ವಿಂದರ್ ಸಿಂಗ್ ಸುಖು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ