ಗುರುವಾರ, ಏಪ್ರಿಲ್ 25, 2024
ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

WPL:ಕೊನೆಗೂ ಮೊದಲ ಜಯಗಳಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

Twitter
Facebook
LinkedIn
WhatsApp
WhatsApp Image 2023 03 16 at 7.33.30 AM

ಮುಂಬಯಿ: ಪ್ರೀಮಿಯರ್ ಲೀಗ್ ನಲ್ಲಿ ಸತತ 5 ಸೋಲುಗಳಿಂದ ದಿಕ್ಕೆಟ್ಟಿದ್ದ ಆರ್‌ ಸಿಬಿ ವನಿತಾ ತಂಡ ಯುಪಿ ವಾರಿಯರ್ಸ್ ವಿರುದ್ಧ ಬುಧವಾರ ನಡೆದ ಪಂದ್ಯದಲ್ಲಿ ಜಯದ ನಗು ಬೀರುವಲ್ಲಿ ಯಶಸ್ವಿಯಾಗಿದೆ

ಸ್ಮತಿ ಮಂಧನಾ ಬಳಗ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆಮಾಡಿತು. ಎಸ್ ಡಿವೈನ್ ಅವರು ಮೊದಲ ಓವರ್ ನಲ್ಲೆ ನಾಯಕಿ ಹೀಲೇ ಮತ್ತು ದೇವಿಕಾ ವೈದ್ಯ ಅವರ ರೂಪದಲ್ಲಿ ಪ್ರಮುಖ 2 ವಿಕೆಟ್ ಕಬಳಿಸಿ ಯುಪಿ ವಾರಿಯರ್ಸ್ ಗೆ ಭಾರಿ ಶಾಕ್ ನೀಡಿದರು. 5 ರನ್ ಆಗುವಷ್ಟರಲ್ಲಿ ತಾಲಿಯಾ ಮೆಕ್‌ಗ್ರಾತ್ ಅವರ ರೂಪದಲ್ಲಿ 3 ನೇ ವಿಕೆಟ್ ಕಳೆದು ಕೊಂಡು ಸಂಕಷ್ಟಕ್ಕೆ ಸಿಲುಕಿತು. ಆ ಬಳಿಕ ಕಿರಣ್ ನವಗಿರೆ 22 ರನ್ ಮತ್ತು ಗ್ರೇಸ್ ಹ್ಯಾರಿಸ್ 46 ರನ್ ಕೊಡುಗೆ ನೀಡಿ ತಂಡಕ್ಕೆ ಆಸರೆಯಾದರು. ದೀಪ್ತಿ ಶರ್ಮಾ 22 ಮತ್ತು ಎಕ್ಲೆಸ್ಟೋನ್ 12 ರನ್ ಗಳಿಸಿದರು. 19.3 ಓವರ್ ಗಳಲ್ಲಿ 135 ರನ್ ಗಳಿಗೆ ಆಲೌಟಾಯಿತು. ಎಲ್ಲಿಸ್ ಪೆರ್ರಿ3 ವಿಕೆಟ್ ಪಡೆದು ಗಮನ ಸೆಳೆದರು. ಉತ್ತಮ ಬೌಲಿಂಗ್ ದಾಳಿ ನಡೆಸಿ ಎಸ್ ಡಿವೈನ್ ಮತ್ತು ಆಶಾ ಶೋಬನಾ ತಲಾ 2 ವಿಕೆಟ್ ಪಡೆದರು. ಮೇಗನ್ ಶುಟ್ ಮತ್ತು ಶ್ರೇಯಾಂಕ ಪಾಟೀಲ್ ತಲಾ 1 ವಿಕೆಟ್ ಪಡೆದರು.

rstb5aupyo89ht7y 1678900339

ಗುರಿ ಬೆನ್ನಟ್ಟಿದ ಆರ್ ಸಿಬಿ 18 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿ ಗೆಲುವಿನ ಸಂಭ್ರಮದಲ್ಲಿ ತೇಲಿತು. 14 ರನ್ ಆಗುವಷ್ಟರಲ್ಲಿ 2 ವಿಕೆಟ್ ಕಳೆದುಕೊಂಡಿತು. ಸ್ಮತಿ ಮಂಧನಾ ಶೂನ್ಯಕ್ಕೆ ಔಟಾಗಿ ನಿರಾಸೆ ಅನುಭವಿಸಿದರು. ಸೋಫಿ 14 ರನ್ , ಹೀದರ್ ನೈಟ್ 24, ಭರ್ಜರಿ ಆಟವಾಡಿದ ಕನಿಕಾ ಅಹುಜಾ 46 ರನ್ ಗಳಿಸಿ ಔಟಾದರು. ರಿಚಾ ಘೋಷ್ ಔಟಾಗದೆ 31 ಮತ್ತುಶ್ರೇಯಾಂಕಾ ಪಾಟೀಲ್ ಔಟಾಗದೆ 5 ರನ್ ಕೊಡುಗೆ ನೀಡಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ