ಸೋಮವಾರ, ಮೇ 20, 2024
ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!-ಗಗನೇಕ್ಕೇರುತ್ತಿದೆ ಚಿಕನ್ ದರ; ಮೊಟ್ಟೆ ಬೆಲೆಯೂ ಏರಿಕೆ.!-ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯವರಾಜರೇ ನಿಮಗೆ ನಿಮ್ಮದೇ ಘನತೆ ಇದೆ, ದಯವಿಟ್ಟು ರಾಜಕೀಯಕ್ಕೆ ಬರಬೇಡಿ; ಪೋಸ್ಟರ್‌ ಅಭಿಯಾನ

Twitter
Facebook
LinkedIn
WhatsApp
ಯವರಾಜರೇ ನಿಮಗೆ ನಿಮ್ಮದೇ ಘನತೆ ಇದೆ, ದಯವಿಟ್ಟು ರಾಜಕೀಯಕ್ಕೆ ಬರಬೇಡಿ; ಪೋಸ್ಟರ್‌ ಅಭಿಯಾನ

ರಾಜ್ಯದ ಗಮನ ಸೆಳೆದಿರುವ ಮೈಸೂರು-ಕೊಡಗು (Mysore-Kodagu) ಲೋಕಸಭಾ(Loka Saba) ಕ್ಷೇತ್ರದ ಬಿಜೆಪಿ(BJP) ಅಭ್ಯರ್ಥಿ ವಿಚಾರ ಭಾರೀ ಕುತೂಹಲ ಮೂಡಿಸಿದೆ. ಮಹತ್ವದ ಬೆಳವಣಿಗೆಯಲ್ಲಿ ಸಂಸದ ಪ್ರತಾಪ್‌ ಸಿಂಹ(Prathap Simha) ಬದಲಿಗೆ ರಾಜವಂಶಸ್ಥ ಯದುವೀರ್‌ ಒಡೆಯರ್‌ (Yaduveer) ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ. ಇನ್ನೊಂದೆಡೆ ರಾಜವಂಶಸ್ಥ ಯದುವೀರ್‌ ಅವರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ರಾಜಕೀಯಕ್ಕೆ ಎಂಟ್ರಿಕೊಡುವ ಕುರಿತಂತೆ ಸಾರ್ವಜನಿಕ ವಲಯದಲ್ಲಿ ದೊಡ್ಡಮಟ್ಟದ ಚರ್ಚೆ ನಡೆಯುತ್ತಿದೆ. ಯದುವೀರ್‌ ಒಡೆಯರ್‌ ಅವರು ಅವರು ಚುನಾವಣೆಗೆ ಸ್ಪರ್ಧೆ ಮಾಡುವ ವಿಷಯದ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ(Social Media)ದಲ್ಲಿ ಚರ್ಚೆ ನಡೆಯುತ್ತಿದ್ದು, ದಯವಿಟ್ಟು ರಾಜಕೀಯಕ್ಕೆ ಬರಬೇಡಿ. ರಾಜರಾಗಿರಿ ಕೇವಲ ಮಂತ್ರಿಯಾಗಬೇಡಿ ಎನ್ನುವ ಪೋಸ್ಟರ್ ಅಭಿಯಾನ ಆರಂಭವಾಗಿದೆ.

ರಾಜವಂಶಸ್ಥ ಯದುವೀರ್ ಒಡೆಯರ್ ಬಿಜೆಪಿ ಅಭ್ಯರ್ಥಿ ಆಗುತ್ತಾರೆ ಎಂಬ ಸಂಗತಿ ಹೊರಬೀಳುತ್ತಿದ್ದಂತೆ ಹಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಕೂಡ ಆರಂಭಿಸಿದ್ದಾರೆ. ಯದುವೀರ್‌ ಒಡೆಯರ್‌ ಅವರು ರಾಜಕೀಯಕ್ಕೆ ಬರದಂತೆ ಪೋಸ್ಟರ್ ಅಭಿಯಾನ ಆರಂಭಿಸಿದ್ದು, “ಯವರಾಜರೇ ನಿಮಗೆ ನಿಮ್ಮದೇ ಘನತೆ ಇದೆ, ದಯವಿಟ್ಟು ರಾಜಕೀಯಕ್ಕೆ ಬರಬೇಡಿ. ರಾಜರಾಗಿರಿ ಕೇವಲ ಮಂತ್ರಿಯಾಗಬೇಡಿ” ಎಂದು ಮನವಿ ಮಾಡಿದ್ದಾರೆ.

ಯದುವೀರ್ ಸ್ಪರ್ಧೆಗೆ ಪ್ರತಾಪ್ ಸಿಂಹ ಟಾಂಗ್

ಮೈಸೂರು-ಕೊಡಗು ಲೋಕಸಭೆಯ ಬಿಜೆಪಿ ಟಿಕೆಟ್ ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ಗೆ ಸಿಗೋದು ಬಹುತೇಕ ಪಕ್ಕಾ ಆಗಿದೆ. ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿ ಆಗಿರುವ ಹಾಲಿ ಸಂಸದ ಪ್ರತಾಪ್​ ಸಿಂಹಗೆ ಕೈತಪ್ಪುತ್ತಿರೋದು ಬಹುತೇಕ ದೃಢವಾಗಿದೆ. ಅದೇ ಕಾರಣಕ್ಕೆ ಯದುವೀರ್ ಒಡೆಯರ್​​ ಅವರಿಗೆ ಪ್ರತಾಪ್ ಸಿಂಹ ತಮ್ಮ ಮೊನಚು ಮಾತುಗಳ ಮೂಲಕ ತಿವಿದಿದ್ದಾರೆ

ಮಾಧ್ಯಮಗಳ ಎದುರು ಬೇಸರಿಂದಲೇ ಮೈಸೂರು ಮಹಾರಾಜರಿಗೆ ಟಾಂಗ್ ನೀಡಿರುವ ಪ್ರತಾಪ್ ಸಿಂಹ, ಪಕ್ಷದಲ್ಲಿ ಒಂದು ಪ್ರೊಟೋಕಾಲ್ ಇರುತ್ತದೆ, ಕಾರ್ಯಕಾರಣಿ ಸಭೆ ನಡೆಯುತ್ತದೆ. ರಾಜ್ಯಾಧ್ಯಕ್ಷರು, ಪ್ರಮುಖರು, ದೊಡ್ಡವರು ಮೇಲೆ ಕೂತಿರುತ್ತಾರೆ. ನಮ್ಮಂಥವರು ಕೆಳಗಡೆ ಕೂತಿರುತ್ತೇವೆ. ಇನ್ಮೇಲೆ ರಾಜರು ಕೆಳಗಡೆ ಕೂರೋದಕ್ಕೂ ರೆಡಿ ಇದ್ದಾರೆ. ಅಷ್ಟೇ ಅಲ್ಲ, ನಮ್ಮ ರಾಜ್ಯಾಧ್ಯಕ್ಷರು ಮೈಸೂರಿಗೆ ಬರುತ್ತಿದ್ದಾರೆ ಅಂದರೆ ನಾವು ಹೋಟೆಲ್ ಮುಂದೆ ಬಿಸಿಲಲ್ಲಿ ಬೊಕ್ಕೆ ಹಿಡಿದು ಕಾಯುತ್ತಿರುತ್ತೇವೆ. ಮಹಾರಾಜರು ಆ ರೀತಿ ಕಾಯೋದಕ್ಕೂ ಸಿದ್ಧರಿದ್ದಾರೆ. ಇದ್ಕಿಂತ ಖುಷಿ ಇನ್ನೇನಿದೆ? ಎಂದು ಪರೋಕ್ಷವಾಗಿ ಯದುವೀರ್ ಕಾಲೆಳೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ