ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯುವ ಮಹಿಳಾ ಅರಣ್ಯಾಧಿಕಾರಿ ನೇಣಿಗೆ ಶರಣು!

Twitter
Facebook
LinkedIn
WhatsApp
ಯುವ ಮಹಿಳಾ ಅರಣ್ಯಾಧಿಕಾರಿ ನೇಣಿಗೆ ಶರಣು!

ಕೊಡಗು, ಆಗಸ್ಟ್​ 30: ಮಡಿಕೇರಿಯ ಅರಣ್ಯ ಇಲಾಖೆ ವಸತಿಗೃಹದಲ್ಲಿ ಯುವ ಮಹಿಳಾ ಅರಣ್ಯಾಧಿಕಾರಿ (young woman forest officer) ನೇಣಿಗೆ ಶರಣಾಗಿದ್ದಾರೆ. ಮಂಡ್ಯ ಮೂಲದ ರಶ್ಮಿ (27) ಮೃತ ಅಧಿಕಾರಿ. ರಶ್ಮಿ ಅವರು ಅರಣ್ಯ ಇಲಾಖೆಯಲ್ಲಿ DRFO ಆಗಿದ್ದರು. ಕೊಡಗು ಜಿಲ್ಲೆ ಮಡಿಕೇರಿ ನಗರದ ಅರಣ್ಯ ಭವನ ಬಳಿ ಇರುವ ವಸತಿ ಗೃಹದಲ್ಲಿ ಘಟನೆ ನಡೆದಿದೆ.

ಆತ್ಮಹತ್ಯೆಗೆ (suicide hanging) ನಿಖರ ಕಾರಣ ತಿಳಿದು ಬಂದಿಲ್ಲ. ರಶ್ಮಿ ಕಳೆದ ಎರಡು ವರ್ಷಗಳಿಂದ ಕೊಡಗಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. 

ಳಕ್ಕೆ ಮಡಿಕೇರಿ ನಗರ (madikeri, Kodagu) ಪೊಲೀಸರು ಭೇಟಿ‌ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಅರಣ್ಯ ಅಧಿಕಾರಿ ನಿನ್ನೆ ರಾತ್ರಿಯೇ ಆತ್ಮಹತ್ಯೆ‌ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ನೃತ್ಯದಲ್ಲಿ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಕನಸು ಕಂಡಿದ್ದ ಬಾಲಕ ಏಡಿ ಹಿಡಿಯಲು ಹೋಗಿ ನೀರು ಪಾಲು

ಮಡಿಕೇರಿ: ನೃತ್ಯದ ಮೂಲಕ ಭಾರತ ದೇಶವನ್ನು ಪ್ರತಿನಿಧಿಸುವ ಕನಸು ಕಂಡಿದ್ದ ಬಾಲಕನೋರ್ವ ಬುಧವಾರ ನಾಲೆಯಲ್ಲಿ ಏಡಿ ಹಿಡಿಯಲು ಹೋಗಿ ನೀರು ಪಾಲದ ಘಟನೆ ಕೊಡಗು (Kodagu) ಜಿಲ್ಲೆಯ ಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯದ (Harangi Reservoir) ನಾಲೆ ಬಳಿ ನಡೆದಿದೆ. ಅನಿತ್ ನಾಲೆಗೆ ಬಿದ್ದು ಮೃತಪಟ್ಟ ದುರ್ದೈವಿಯಾಗಿದ್ದಾನೆ.

ಇಂದು ಬೆಳಗ್ಗೆ 8:30ರ ಸುಮಾರಿಗೆ ಬ್ಯಾಡಗೂಟ್ಟದಲ್ಲಿರುವ ದಿಡ್ಡಳ್ಳಿ ನಿರಾಶ್ರಿತರ ಕೇಂದ್ರದ ಬಳಿಯಿಂದ ಸ್ನೇಹಿತರೊಂದಿಗೆ ಶಾಲೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಹಾರಂಗಿ ನಾಲೆಯಲ್ಲಿ ಏಡಿಯೊಂದು ಅನಿತ್‌ಗೆ ಗೋಚರಿಸಿದೆ. ಈ ವೇಳೆ ಅನಿತ್ ತನ್ನ ಗೆಳೆಯರಿಗೆ ಏಡಿ ಹಿಡಿದುಕೊಂಡು ಬರುವೆ, ಸ್ವಲ್ಪ ಸಮಯ ಕಾಯಿರಿ ಎಂದು ನಾಲೆ ಸಮೀಪವೇ ಬಟ್ಟೆ, ಶಾಲಾ ಬ್ಯಾಗ್ ಇಟ್ಟು ಹೋಗಿದ್ದಾನೆ. ಆದರೆ ಆಕಸ್ಮಿಕವಾಗಿ ಕಾಲು ಜಾರಿ ನಾಲೆಯಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಅನಿತ್ ಸ್ನೇಹಿತರು ಆತನನ್ನು ರಕ್ಷಣೆ ಮಾಡಲು ಮುಂದಾದರೂ ಯಾವುದೇ ಪ್ರಯೋಜನವಾಗಿಲ್ಲ.

ನಂತರ ಶಾಲಾ ಬಾಲಕರು ಹಾಗೂ ಗ್ರಾಮಸ್ಥರು ನಾಲೆಯಲ್ಲಿ ಅನಿತ್ ಕಣ್ಮರೆಯಾಗಿರುವ ವಿಷಯ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನಿತ್‌ನ ಹುಡುಕಾಟಕ್ಕಾಗಿ ಹಾರಂಗಿ ಜಲಾಶಯದಿಂದ ನಾಲೆಗೆ ಬಿಟ್ಟಿರುವ ನೀರನ್ನು ಸ್ಥಗಿತಗೊಳಿಸಿದ್ದಾರೆ. ಅಗ್ನಿ ಶಾಮಕ ದಳದವರು ಬಾಲಕನಿಗಾಗಿ ಶೋಧ ಕಾರ್ಯ ನಡೆಸಿ ಬಾಲಕನ ಮೃತದೇಹವನ್ನು ಹೊರತೆಗೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕುಶಾಲನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ನಾಲೆಯಲ್ಲಿ ಬಿದ್ದು ಮೃತಪಟ್ಟ ಬಾಲಕ ಪ್ರತಿಭಾವಂತ ವಿದ್ಯಾರ್ಥಿಯಾಗಿದು, ನೃತ್ಯ ತರಬೇತಿಯಲ್ಲೂ ಹೆಸರು ಮಾಡಿದ್ದ. ಇತ್ತೀಚೆಗೆ ಚೀನಾದಲ್ಲಿ ನಡೆದ ನ್ಯಾಷನಲ್ ಲೆವೆಲ್ ಬುಕ್ ಆಫ್ ರೆಕಾರ್ಡ್‌ನಲ್ಲಿ ಭಾಗವಹಿಸಿದ್ದ. ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಥೈಲೆಂಡ್‌ನಲ್ಲಿ ನಡೆಯಲಿರುವ ಇಂಟರ್ ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಗೂ ಭಾರತ ತಂಡದಿಂದ ಭಾಗವಹಿಸಲು ಸಿದ್ಧತೆ ನಡೆಸುತ್ತಿದ್ದ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ