ಶುಕ್ರವಾರ, ಮೇ 10, 2024
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಸ್ಸಾಂ: ಅಕ್ರಮವಾಗಿ ಭಾರತ ಪ್ರವೇಶಿಸಿದ 10 ಬಾಂಗ್ಲಾದೇಶಿಯರ ಬಂಧನ

Twitter
Facebook
LinkedIn
WhatsApp
ಅಸ್ಸಾಂ: ಅಕ್ರಮವಾಗಿ ಭಾರತ ಪ್ರವೇಶಿಸಿದ 10 ಬಾಂಗ್ಲಾದೇಶಿಯರ ಬಂಧನ

ಕರೀಂಗಂಜ್: ಅಸ್ಸಾಂನ ಕರೀಂಗಂಜ್ ಪೊಲೀಸರು ಶನಿವಾರ ಕರೀಂಗಂಜ್ ಜಿಲ್ಲೆಯ ಬಜಾರಿಚೆರಾ ಪೊಲೀಸ್ ವಾಚ್‌ಪೋಸ್ಟ್‌ನ ಅಸ್ಸಾಂ-ತ್ರಿಪುರ ಗಡಿಯ ಚುರೈಬರಿ ಪ್ರದೇಶದಲ್ಲಿ 4 ಮಹಿಳೆಯರು ಸೇರಿದಂತೆ 10 ಬಾಂಗ್ಲಾದೇಶ ಪ್ರಜೆಗಳನ್ನು ಬಂಧಿಸಿದ್ದಾರೆ.
ಈ ಘಟನೆ ಕರೀಂಗಂಜ್ ಜಿಲ್ಲೆಯ ಸ್ಥಳೀಯ ಜನರಲ್ಲಿ ಸಂಚಲನ ಮೂಡಿಸಿದೆ. ಇವರೆಲ್ಲರೂ ತ್ರಿಪುರಾದ ಧರ್ಮನಗರದಿಂದ ಬರುತ್ತಿದ್ದರು ಎನ್ನಲಾಗಿದೆ. ಮೂರು ಬೇರೆ ಬೇರೆ ಸಂದರ್ಭಗಳಲ್ಲಿ ವಾಹನಗಳ ತಪಾಸಣೆಯ ಸಮಯದಲ್ಲಿ ಅವರನ್ನು ಬಂಧಿಸಲಾಗಿದೆ. ಇವರೊಂದಿಗೆ ಭಾರತೀಯ ಲಿಂಕ್‌ಮ್ಯಾನ್‌ನನ್ನು ಕೂಡ ಬಂಧಿಸಲಾಗಿದೆ. ಬಂಧಿತ ಅಕ್ರಮ ವಲಸಿಗರು ಬಾದರ್‌ಪುರ ರೈಲು ನಿಲ್ದಾಣದಿಂದ ದಕ್ಷಿಣ ಭಾರತದತ್ತ ತೆರಳುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಅವರು ದಕ್ಷಿಣ ಭಾರತದ ನಗರಗಳ ವಿವಿಧ ರೆಸ್ಟೋರೆಂಟ್‌ಗಳಲ್ಲಿ ಕೆಲಸ ಮಾಡುವ ಸಲುವಾಗಿ ಬರುತ್ತಿದ್ದರು ಎಂಬ ಮಾಹಿತಿ ಬಹಿರಂಗವಾಗಿದೆ. ಲಿಂಕ್‌ಮ್ಯಾನ್ ಮೂಲಕ ತ್ರಿಪುರಾ ಗಡಿಯ ಮೂಲಕ ಅಕ್ರಮವಾಗಿ ಭಾರತವನ್ನು ಇವರು ಪ್ರವೇಶಿಸಿದ್ದಾರೆ.
ಕರೀಂಗಂಜ್‌ನ ಪೊಲೀಸರು ಮಾಹಿತಿ ನೀಡಿ, ಭಾರತ-ಬಾಂಗ್ಲಾದೇಶದ ಗಡಿಯನ್ನು ಸುರಕ್ಷಿತವಾಗಿ ದಾಟಲು ಮತ್ತು ದಕ್ಷಿಣ ಭಾರತದಲ್ಲಿ ತಮ್ಮ ನಿಗದಿತ ಸ್ಥಳಗಳಿಗೆ ತಲುಪಲು ಪ್ರತಿಯೊಬ್ಬರೂ ತಮ್ಮ ಭಾರತೀಯ ಹ್ಯಾಂಡ್ಲರ್‌ಗಳಿಗೆ 35 ಸಾವಿರ ರೂಪಾಯಿ ಪಾವತಿಸಿದ್ದಾರೆ ಎಂದು ಬಂಧಿತ ಬಾಂಗ್ಲಾದೇಶಿ ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ.

ಬಂಧಿತ ಬಾಂಗ್ಲಾದೇಶಿಗಳು ಕೆಲಸಕ್ಕಾಗಿ ಚೆನ್ನೈಗೆ ತೆರಳುತ್ತಿದ್ದಾರೆ ಎಂದು ಬಜಾರಿಚೆರಾ ಪೊಲೀಸ್ ವಾಚ್‌ಪೋಸ್ಟ್‌ನ ಉಸ್ತುವಾರಿ ಮೊನೊರಂಜನ್ ಸಿನ್ಹಾ ತಿಳಿಸಿದ್ದಾರೆ. ಶೋಧ ಸಮಯದಲ್ಲಿ ಅವರು ಯಾವುದೇ ಸರಿಯಾದ ದಾಖಲೆಗಳನ್ನು ನೀಡಲು ವಿಫಲರಾಗಿದ್ದಾರೆ. ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಲು ಸಹಾಯ ಮಾಡಿದ್ದಕ್ಕಾಗಿ ರತಾಬರಿ ಪ್ರದೇಶದ ಲಿಂಕ್‌ಮ್ಯಾನ್ ಬಿದನ್ ಚಂದ್ರ ದಾಸ್‌ನನ್ನು ಸಹ ಬಂಧಿಸಲಾಗಿದೆ.
ಬಂಧಿತರು ಬಾಂಗ್ಲಾದೇಶದ ರಾಜಶಾಹಿ ಮತ್ತು ಖುಲ್ನಾ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ವಾಹನಗಳ ಚಾಲಕರನ್ನೂ ವಿಚಾರಣೆಗೆ ಕರೆದೊಯ್ಯಲಾಗಿದೆ. ಬಂಧಿತ ಬಾಂಗ್ಲಾ ಪ್ರಜೆಗಳಾದ ಸೊಹೈಲ್ ಅಹ್ಮದ್ 23, ಅಬ್ದುಲ್ ಗಫೂರ್ 29, ನಜ್ಮಾ ಬೇಗಂ 25, ಸೋಫಿರಾ ಅಖ್ತರ್ 23, ಅಲಿಯಾ ಬೇಗಂ 45, ಫಾತಿಮಾ ಅಖ್ತಾ 21, ರಾಜೇಶ್ ಶೇಖ್ 29, ಅಸಾಬುಲ್ ಶೇಖ್ 29, ಸನಾವುಲ್ಲಾ 28, ಕೌಸರ್ ಹುಸೇನ್ 20 ಎಂದು ಗುರುತಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು