ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆಸ್ತಿಗಾಗಿ 88 ವರ್ಷದ ತಾಯಿ ಹತ್ಯೆಗೆ ಯತ್ನಿಸಿದ 65 ವರ್ಷದ ನಿವೃತ್ತ ಸೇನಾಧಿಕಾರಿ ಬಂಧನ

Twitter
Facebook
LinkedIn
WhatsApp
ಆಸ್ತಿಗಾಗಿ 88 ವರ್ಷದ ತಾಯಿ ಹತ್ಯೆಗೆ ಯತ್ನಿಸಿದ 65 ವರ್ಷದ ನಿವೃತ್ತ ಸೇನಾಧಿಕಾರಿ ಬಂಧನ

ಬೆಂಗಳೂರು: ಆಸ್ತಿ ವಿಚಾರವಾಗಿ 88 ವರ್ಷದ ತಾಯಿಯನ್ನು ಆಕೆಯ ಮನೆಯಲ್ಲಿಯೇ ಹತ್ಯೆ ಮಾಡಲು ಯತ್ನಿಸಿದ 65 ವರ್ಷದ ವ್ಯಕ್ತಿಯನ್ನು ಆರ್‌ಟಿ ನಗರ ಪೊಲೀಸರು ಬಂಧಿಸಿದ್ದಾರೆ.

ಮಹಿಳೆ, ಕ್ಯಾಥರೀನ್ ಡಿ’ಕ್ರೂಜ್ ಅವರಿಗೆ ನಾಲ್ಕು ಮಕ್ಕಳು. ಅವರಲ್ಲಿ ಇಬ್ಬರು ವಿದೇಶದಲ್ಲಿ ನೆಲೆಸಿದ್ದಾರೆ, ಒಬ್ಬ ಅವಿವಾಹಿತ ಮಗಳು ಆಶ್ರಮದಲ್ಲಿ ವಾಸಿಸುತ್ತಿದ್ದಾರೆ. ಆರೋಪಿ ಜಾನ್ ಡಿಕ್ರೂಜ್ ಎಲ್ಲರಿಗೂ ಹಿರಿಯನಾಗಿದ್ದಾನೆ. ಕೋಟ್ಯಂತರ ರು. ಮೌಲ್ಯದ ಆಸ್ತಿಯನ್ನು ಮಗನ ಹೆಸರಿಗೆ ಮಾಡಿ ಕೊಟ್ಟರೂ, ದಾಹ ತೀರದ ಮಗ ವಯಸ್ಸಾದ ತಾಯಿಯ ಉಸಿರು ನಿಲ್ಲಿಸಲು ಮುಂದಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆ ಆರ್​ಟಿ ನಗರದ 2ನೇ ಬ್ಲಾಕ್​ನಲ್ಲಿ ನಡೆದಿದೆ.

ಕ್ಯಾಥರಿನ್ ಡಿ ಕ್ರೂಸ್ (88) ನತದೃಷ್ಟ ತಾಯಿ. ಮಗ ಜಾನ್ ಡಿ ಕ್ರೂಸ್ (65)ರನ್ನು ಆರ್.ಟಿ. ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮೊದಲನೆಯವರಾದ ಜಾನ್ ಡಿ ಕ್ರೂಸ್ ಹೆಸರಿಗೆ ಆಸ್ತಿ ಬರೆದುಕೊಟ್ಟಿದ್ದರೂ ಸಹ ತಾಯಿಯೊಂದಿಗೆ ನಿತ್ಯ ಗಲಾಟೆ ಮಾಡುತ್ತಿದ್ದರು ಎನ್ನಲಾಗ್ತಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ನಾಲ್ಕು ವರ್ಷಗಳ ಹಿಂದೆಯೇ ಅನಾರೋಗ್ಯಕ್ಕೆ ತುತ್ತಾತ ಕ್ಯಾಥರಿನ್‌ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಬಳಿಕ ಮನೆಗೆ ಬಂದಾಗ ಆಕೆಯ ನೋಡಿಕೊಳ್ಳಲು ಅಮೆರಿಕದಲ್ಲಿರುವ ಪುತ್ರ ಕೇರ್‌ ಟೇಕರ್‌ವೊಬ್ಬರನ್ನು ನೇಮಿಸಿದ್ದರು. ನಿತ್ಯ ಕೇರ್‌ ಟೇಕರ್‌ ಬಂದು ನೋಡಿಕೊಳ್ಳುತ್ತಿದ್ದರು. ಆದರೆ, ಆರೋಪಿ ತಾಯಿಗೆ ಅಳವಡಿಸಿದ್ದ ಕೃತಕ ಉಸಿರಾಟ ಆಕ್ಸಿಜನ್‌ ಮಾಸ್ಕ್ ತೆಗೆದು ಹತ್ಯೆಗೆ ಯತ್ನಿಸಿದ್ದಾನೆ. ಅದನ್ನು ಗಮನಿಸಿದ ಕೇರ್‌ ಟೇಕರ್‌, ಪ್ರಶ್ನಿಸಿದ್ದಾರೆ. ಆಗ ಆರೋಪಿ ಆಕೆ ಸಾಯಲಿ ಎಂದು ಆಕ್ಸಿಜನ್‌ ಮಾಸ್ಕ್ ತೆಗೆದರೆ, ನೀವು ಹಾಕುತ್ತಿದ್ದಿರಾ ಎಂದೆಲ್ಲ ಪ್ರಶ್ನಿಸಿದ್ದಾನೆ.

ಹೀಗಾಗಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಆದರಿಂದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ 2019 ಡಿಸೆಂಬರ್‌ನಲ್ಲಿಯೂ ಇದೇ ರೀತಿ ತಾಯಿಯ ಕೊಲೆಗೆ ಯತ್ನಿಸಿದ್ದ. ಕೂಡಲೇ ಎಚ್ಚೆತ್ತ ಕೇರ್ ಟೇಕರ್ ಪೊಲೀಸರಿಗೆ ಕರೆ ಮಾಡಿದ್ದಿರಂದ ಸ್ಥಳಕ್ಕೆ ಬಂದ ಆರ್​​ ಟಿ ನಗರ ಪೊಲೀಸರು ವೃದ್ಧೆ ಕ್ಯಾಥರೀನ್​​ರನ್ನು ರಕ್ಷಿಸಿದ್ದಾರೆ. ಕೇರ್ ಟೇಕರ್ ದೂರಿನ ಮೇರೆಗೆ ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಾಯಿಯನ್ನೇ ಕೊಲೆ ಮಾಡಲು ಮುಂದಾಗಿದ್ದ ಮಗನನ್ನು ಬಂಧಿಸಿದ್ದಾರೆ.

ಆತನನ್ನು ಬಂಧಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಾನ್ ವಿರುದ್ಧ ಐಪಿಸಿ ಸೆಕ್ಷನ್ 307ರ ಅಡಿಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist