ಶಿರಸಿ(ಜೂ.07): ಕಳೆದ ಏಳು ವರ್ಷಗಳಿಂದ ನಿರಂತರ ವಿಶ್ವಶಾಂತಿ ಸಂದೇಶ ಸಾರುವ ಯಕ್ಷನೃತ್ಯ ರೂಪಕದ ಬಾಲೆ, ತಾಲೂಕಿನ ಬೆಟ್ಟಕೊಪ್ಪದ ತುಳಸಿ ಹೆಗಡೆ ಸಾಧನೆ ಇದೀಗ ದೇಶದ ಪ್ರತಿಷ್ಠಿತ ‘ಇಂಡಿಯಾ ಬುಕ್ ರೆಕಾರ್ಡ’ನಲ್ಲಿಯೂ ದಾಖಲಾಗಿದೆ. ವಿಶ್ವಶಾಂತಿ ಸಂದೇಶ ಸಾರುವ ಕಲಾ ಪ್ರದರ್ಶನ ನೀಡುವ ದೇಶದ ಏಕಮೇವ ಬಾಲೆ ಎಂಬುದು ಈಗ ಅಧಿಕೃತವಾಗಿ ಋುಜುವಾತಾಗಿದೆ.
13ರ ತುಳಸಿ ಕಳೆದ ಏಳು ವರ್ಷಗಳಿಂದ ಸತತ ವಿವಿಧ ಪೌರಾಣಿಕ ಕಥೆ ಒಳಗೊಂಡ ವಿಶ್ವಶಾಂತಿ ಸರಣಿ ಪ್ರಸ್ತುತಪಡಿಸುವ ಬಾಲೆ ಎಂದೇ ಪ್ರಸಿದ್ಧಿ. ತುಳಸಿಯ ಈ ವಿಶಿಷ್ಟಸಾಧನೆಯನ್ನು ‘ಅತ್ಯಂತ ಕಿರಿಯ ವಯಸ್ಸಿನಿಂದ ವಿಶ್ವಶಾಂತಿ ಸರಣಿ ಸಂದೇಶ ಸಾರುವ ಬಾಲ ಯಕ್ಷಗಾನ ಕಲಾವಿದೆ’ ಎಂದೇ ಇಂಡಿಯಾ ಬುಕ್ ಆಫ್ ರೆಕಾರ್ಡ್ ನೀಡುವ ಪ್ರಮಾಣಪತ್ರಲ್ಲಿ ಉಲ್ಲೇಖಿಸಿದೆ.
ಏ.27ರಂದು ದಾಖಲೀಕರಿಸಿಕೊಂಡ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಂಸ್ಥೆ ತುಳಸಿ ಯಕ್ಷಗಾನದ ಕಲಾ ಮಾಧ್ಯಮದ ಮೂಲಕ ಜಗತ್ತಿನ ಯೋಗಕ್ಷೇಮದ ಪ್ರಸ್ತುತಿಗಾಗಿ ಈ ರೂಪಕವನ್ನು ಪ್ರದರ್ಶಿಸುತ್ತಿದ್ದಾಳೆ ಎಂದೂ ಹೆಮ್ಮೆ ವ್ಯಕ್ತಪಡಿಸಿದೆ.
ಮುಮ್ಮೇಳದ ಏಕವ್ಯಕ್ತಿ ರೂಪಕ ಇದಾಗಿದ್ದು, ಹಿಮ್ಮೇಳದಲ್ಲಿ ಪ್ರಸಿದ್ಧ ಕಲಾವಿದರ, ನಿರ್ದೇಶಕರ, ಸಾಹಿತಿಗಳ, ಪರಿಣತರ ಒಂಬತ್ತು ಜನರ ತಂಡ ಕೆಲಸ ಮಾಡುತ್ತಿದೆ. ಒಂದು ಗಂಟೆಗೂ ಮಿಕ್ಕಿದ ವಿಶ್ವಶಾಂತಿ ಸಂದೇಶ, ವಿಶ್ವಶಂಕರಾಕ್ಷರ, ಶ್ರೀಕೃಷ್ಣಂ ವಂದೇ, ವಂದೇ ಪರಮಾನಂದಂ, ಪಂಚಪಾವನ ಕಥಾ, ಪರಿವರ್ತನೆ ಜಗದ ನಿಯಮ, ವಂಶೀವಿಲಾಸ ಯಕ್ಷನೃತ್ಯ ರೂಪಕಗಳನ್ನು ಈಕೆ ಪ್ರಸ್ತುತಪಡಿಸುತ್ತಿದ್ದಾಳೆ. ಈ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡನಲ್ಲಿ ದಾಖಲಾಗಿದ್ದು, ಯಕ್ಷಗಾನದ ಇತಿಹಾಸದಲ್ಲೂ ಪ್ರಥಮ.
ತುಳಸಿ ಶಿರಸಿಯ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ಎಂಟನೇ ವರ್ಗದಲ್ಲಿ ಓದುತ್ತಿದ್ದಾಳೆ. ಅವಳ ಸಾಧನೆಯನ್ನು ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ ಕೂಡ ದಾಖಲಿಸಿದೆ. ಈಚೆಗಷ್ಟೇ ಪುಣೆಯ ಸಂಸ್ಥೆಯೊಂದು ನೀಡುವ ಇಂಡಿಯನ್ ಸ್ಟಾರ್ ಐಕಾನ್ ಅವಾರ್ಡ್ ಕೂಡ ಬಂದಿದೆ ಎಂಬುದೂ ಉಲ್ಲೇಖನೀಯ.
ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,
ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?