ಉಡುಪಿ, (ಮೇ.19): ಕರಾವಳಿ ಜಿಲ್ಲೆ ಉಡುಪಿಯಲ್ಲಿ ಮಳೆಗಾಲ ಆರಂಭವಾಗುತ್ತಿದ್ದಂತೆ ಡೆಂಗ್ಯೂ (Dengue) ಭೀತಿ ಹೆಚ್ಚುತ್ತಿದೆ . ಕುಂದಾಪುರ, ಬೈಂದೂರು ತಾಲೂಕಿನ ಗ್ರಾಮೀಣ ಭಾಗದಲ್ಲಿ ಅತಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.
ಡೆಂಗ್ಯೂ ಪ್ರಕರಣ ಹೆಚ್ಚುತ್ತಿರುವ ಗ್ರಾಮಗಳಲ್ಲಿ ಹತ್ತು ದಿನಗಳ ಕಾಲ ಶಾಲೆಗೆ ರಜೆ (Schools Holiday) ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಜಡ್ಕಲ್ ಮದ್ದೂರು ಭಾಗದ ಶಾಲೆಗಳಿಗೆ ರಜೆ ಆದೇಶ ಜಾರಿಯಾಗಲಿದೆ.
ಉಡುಪಿ ಜಿಲ್ಲೆಯ ಅತ್ಯಂತ ಹಿಂದುಳಿದ ಕ್ಷೇತ್ರವಾಗಿರುವ ಬೈಂದೂರು ಕ್ಷೇತ್ರದಲ್ಲಿ ಡೆಂಗ್ಯೂ ರೋಗ ಮಿತಿಮೀರಿದೆ. ಬೈಂದೂರು ತಾಲೂಕಿನ ಜಡ್ಕಲ್ ಗ್ರಾ.ಪಂ. ವ್ಯಾಪ್ತಿಯ ಮುದೂರು, ಉದಯನಗರ, ಬೀಸಿನಪಾರೆ, ಕಾನ್ಕಿ ಮುಂತಾದೆಡೆ ಡೆಂಗ್ಯೂ ಕಾಣಿಸಿಕೊಂಡಿದೆ. ಇದೇ ಭಾಗದಲ್ಲಿ ಜನವರಿಯಿಂದ ಈವರೆಗೆ 100 ಕ್ಕೂ ಮಿಕ್ಕಿ ಡೆಂಗ್ಯೂ ಜ್ವರ ಪೀಡಿತ ರೋಗಿಗಳ ಪತ್ತೆಯಾಗುವ ಮೂಲಕ ಆತಂಕ ಹೆಚ್ಚಿದೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?