ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಎಂಇಎಸ್​ ಪುಂಡಾಟಿಕೆ ವಿರುದ್ಧ ಆಕ್ರೋಶ: ಡಿಸೆಂಬರ್​ 31ರಂದು ಕರ್ನಾಟಕ ಬಂದ್​ಗೆ ಕರೆ

Twitter
Facebook
LinkedIn
WhatsApp
ಎಂಇಎಸ್​ ಪುಂಡಾಟಿಕೆ ವಿರುದ್ಧ ಆಕ್ರೋಶ: ಡಿಸೆಂಬರ್​ 31ರಂದು ಕರ್ನಾಟಕ ಬಂದ್​ಗೆ ಕರೆ

ಬೆಂಗಳೂರು : ಮಹಾರಾಷ್ಟ್ರ ಏಕೀಕರಣ ಸಮಿತಿಯು ಬೆಳಗಾವಿಯಲ್ಲಿ ನಡೆಸಿದ ಕಿಡಿಗೇಡಿತನವನ್ನು ವಿರೋಧಿಸಿ ಡಿಸೆಂಬರ್​ 31ರಂದು ಕರ್ನಾಟಕ ಬಂದ್​ ನಡೆಸುವುದಾಗಿ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್​ ಘೋಷಣೆ ಮಾಡಿದ್ದಾರೆ. ಬೆಳಗ್ಗೆ ಆರರಿಂದ ಸಂಜೆ ಆರು ಗಂಟೆಯವರೆಗೂ ಕರ್ನಾಟಕ ಬಂದ್ ​ ಇರಲಿದ್ದು ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಬೇಕು. ಪಕ್ಷಬೇಧ ಮರೆತು ಪ್ರತಿಯೊಬ್ಬರೂ ಬಂದ್​ಗೆ ಸಹಕಾರ ನೀಡಬೇಕು ಎಂದು ಕೋರಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್​ ಒಂದರಲ್ಲಿ ನಡೆದ ಸಭೆಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಒಂದಾಗಿ ಈ ನಿರ್ಧಾರವನ್ನು ಕೈಗೊಂಡಿವೆ. ಇದೇ ವಿಚಾರವಾಗಿ ಮಾತನಾಡಿದ ಹೋರಾಟಗಾರ ವಾಟಾಳ್​ ನಾಗರಾಜ್​ ಸರಿ ಸುಮಾರು 35 ಸಂಘಟನೆಗಳು ಬಂದ್​ಗೆ ಬೆಂಬಲ ನೀಡಿವೆ ಎಂದು ಹೇಳಿದರು .

ಕರ್ನಾಟಕ ಬಂದ್​ಗೆ ಈಗಾಗಲೇ ಊಬರ್​ ಹಾಗೂ ಓಲಾಗಳು ಬೆಂಬಲ ನೀಡಿವೆ. ಇತ್ತ ಟ್ಯಾಕ್ಸಿ ಮಾಲೀಕರು, ದಲಿತ ಸಂಘರ್ಷ ಸಮಿತಿ, ಬೀದಿಬದಿ ವ್ಯಾಪಾರಿಗಳು, ಲಾರಿ ಮಾಲೀಕರ ಸಂಘ, ಹೋಟೆಲ್​ ಉದ್ಯಮಿಗಳು, ಕಟ್ಟಡ ಕಾರ್ಮಿಕರ ಸಂಘ, ಸರ್ಕಾರಿ ನೌಕರರು ಸೇರಿದಂತೆ ಇನ್ನೂ ಹಲವು ಸಂಘಟನೆಗಳು ಬೆಂಬಲ ನೀಡುವ ಸಾಧ್ಯತೆ ದಟ್ಟವಾಗಿದೆ. ಚಿತ್ರೋದ್ಯಮ ಕೂಡ ಕರ್ನಾಟಕ ಬಂದ ಕುರಿತಂತೆ ಇನ್ನೂ ತನ್ನ ನಿಲುವನ್ನು ಹೊರ ಹಾಕಿಲ್ಲ.
ಡಿಸೆಂಬರ್​ 31ರಂದು ಲವ್​ ಯು ರಚ್ಚು ಸೇರಿದಂತೆ ಅನೇಕ ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿವೆ. ಆದರೆ ಅಂದು ಕರ್ನಾಟಕ ಬಂದ್​ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಿನಿಮಾ ರಿಲೀಸ್​ಗೆ ಅಡಚಣೆಯುಂಟಾಗುವ ಸಾಧ್ಯತೆ ದಟ್ಟವಾಗಿದೆ. ಕರ್ನಾಟಕ ಬಂದ್​ ಕುರಿತಂತೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಸಭೆಯನ್ನು ಕರೆಯಲಾಗಿದೆ. ಈ ವಿಚಾರವಾಗಿ ಮಾತನಾಡಿದ ಕರವೇ ಅಧ್ಯಕ್ಷ ನಾರಾಯಣ ಗೌಡ ಬಂದ್​ಗೆ ಬೆಂಬಲ ನೀಡುವ ಬಗ್ಗೆ ಇನ್ನೂ ಯಾವುದೇ ಸ್ಪಷ್ಟನೆ ಇಲ್ಲ. ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಹೇಳಿದ್ದಾರೆ.
ಎಂಇಎಸ್ ಸಂಘಟನೆಯನ್ನು ನಿಷೇಧ ಮಾಡುವಂತೆ ಕೋರಿ ಕನ್ನಡ ಪರ ಸಂಘಟನೆಗಳು ಈಗಾಗಲೇ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ. ಆದರೆ ರಾಜ್ಯ ಸರ್ಕಾರ ಇದಕ್ಕೆ ಪೂರಕವಾದ ಯಾವೊಂದು ಕ್ರಮವನ್ನೂ ಕೈಗೊಂಡಿಲ್ಲ. ಹೀಗಾಗಿ ಕನ್ನಡದ ಉಳಿವಿಗೆ ಮುಂದಾದ ಕನ್ನಡ ಪರ ಸಂಗಟನೆಗಳು ಬಂದ್​ಗೆ ಕರೆ ನೀಡಿವೆ.ಈ ದಿನದಂದು ಪ್ರತಿಭಟನಾ ಮೆರವಣಿಗೆ, ಬೃಹತ್​ ಜಾಥಾಗಳನ್ನು ಕೈಗೊಳ್ಳಲಾಗುತ್ತೆ ಅಂತಾ ವಾಟಾಳ್​ ನಾಗರಾಜ್​ ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು