ಶುಕ್ರವಾರ, ಮೇ 10, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಎಎಪಿ, ಬಿಜೆಪಿ ಸದಸ್ಯರ ನಡುವೆ ಮಾರಾಮಾರಿ; ಕುಸಿದು ಬಿದ್ದ ಕೌನ್ಸಿಲರ್!

Twitter
Facebook
LinkedIn
WhatsApp
ಎಎಪಿ, ಬಿಜೆಪಿ ಸದಸ್ಯರ ನಡುವೆ ಮಾರಾಮಾರಿ; ಕುಸಿದು ಬಿದ್ದ ಕೌನ್ಸಿಲರ್!

ನವದೆಹಲಿ: ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ ನಲ್ಲಿ (ಎಂಸಿಡಿ) ಮತ್ತೆ ಬಿಜೆಪಿ ಮತ್ತು ಎಎಪಿ ಕೌನ್ಸಿಲರ್ ಗಳ ನಡುವೆ ಮಾರಾಮಾರಿ ನಡೆದಿದೆ.

ಶುಕ್ರವಾರ ಸದನದ ಕಲಾಪ ಆರಂಭವಾಗುತ್ತಿದ್ದಂತೆಯೇ, ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ಕೌನ್ಸಿಲರ್ ಗಳ ನಡುವೆ ಘರ್ಷಣೆ ಸಂಭವಿಸಿದ್ದು, ಉಭಯ ಪಕ್ಷಗಳ ಕೌನ್ಸಿಲರ್ ಗಳ ನಡುವೆ ಪರಸ್ಪರ ತಳ್ಳಾಟ, ಗಲಾಟೆ, ಹಲ್ಲೆ ನಡೆದಿದೆ. ಇದರಿಂದಾಗಿ ಕೌನ್ಸಿಲರ್ ಒಬ್ಬರು ಎಂಸಿಡಿ ಸದನದಲ್ಲಿ ಕುಸಿದು ಬಿದ್ದಿದ್ದಾರೆ

ಎಂಸಿಡಿಯಲ್ಲಿ ಮೂರನೇ ಬಾರಿಗೆ ಈ ರೀತಿಯ ಅಹಿತಕರ ಘಟನೆ ನಡೆದಿದೆ. ಫೆಬ್ರವರಿ 23 ರಂದು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ ನಡೆಯುವಾಗ ಮಾರಾಮರಿ ನಡೆದಿದ್ದರಿಂದ ಇಂದಿಗೆ ಚುನಾವಣೆಯನ್ನು  ಮುಂದೂಡಲಾಗಿತ್ತು. ಇಂದು ಕೂಡಾ ಚುನಾವಣೆ ಸಂದರ್ಭದಲ್ಲಿ ಕೌನ್ಸಿಲರ್ ಗಳು ತಾವು ಜನರಿಂದ ಚುನಾಯಿತರಾದ ಪ್ರತಿನಿಧಿಗಳು ಎಂಬುದನ್ನು ಮರೆತು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಮಹಿಳಾ ಮೇಯರ್ ಶೆಲ್ಲಿ ಒಬೆರಾಯ್ ಮೇಲೆ ಹಲ್ಲೆ ನಡೆಸಿದ ಬಿಜೆಪಿಯ ಗೂಂಡಾಗಳು ತಮ್ಮ ಮೇಲೂ ಹಲ್ಲೆ ನಡೆಸಿರುವುದಾಗಿ ಹಲ್ಲೆಗೊಳಗಾದ ಎಎಪಿ ಕೌನ್ಸಿಲರ್ ಅಶೋಕ್ ಕುಮಾರ್ ಮಾನು ಮಾಧ್ಯಮಗಳ ಮುಂದೆ ಆರೋಪಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ