ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಒಂದೇ ಕುಟುಂಬದ ‌7 ಜನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ: ಓರ್ವ ಮಹಿಳೆ ಸಾವು

Twitter
Facebook
LinkedIn
WhatsApp
ಒಂದೇ ಕುಟುಂಬದ ‌7 ಜನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ: ಓರ್ವ ಮಹಿಳೆ ಸಾವು

ರಾಮನಗರ: ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ 7 ಜನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಮನಗರ ತಾಲೂಕಿನ ದೊಡ್ಡ ಮಣ್ಣಗುಡ್ಡೆ ಗ್ರಾಮದಲ್ಲಿ ನಡೆದಿದೆ. ಮಂಗಳಮ್ಮ (28) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಲಭಾದೆ ತಾಳಲಾರದೆ ನಿನ್ನೆ (ಫೆ.2) ಮಧ್ಯಾಹ್ನ ಜಮೀನಿನಲ್ಲಿ ಇಲಿ ಪಾಷಾಣ ಸೇವಿಸಿದ್ದಾರೆ. ವಿಷಯ ತಿಳಿದ ಸ್ಥಳಿಯರು ಸಂಜೆ ವೇಳೆ ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ರಾಮನಗರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಡ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮಂಗಳಮ್ಮ (28), ಮಂಗಳಮ್ಮನ ಪತಿ ರಾಜು(31), ಮಂಗಳಮ್ಮನ ತಾಯಿ ಸೊಮ್ಮಪುರದಮ್ಮ(48), ಮಕ್ಕಳಾದ ಆಕಾಶ್(9), ಕೃಷ್ಣ(13), ಮಂಗಳಮ್ಮ ತಂಗಿ ಸವಿತಾ(24) ಮತ್ತು ಸವಿತಾ ಮಗಳು ದರ್ಶಿನಿ (4) ವಿಷಸೇವಿಸಿದ್ದಾರೆ. ಮಂಗಳಮ್ಮನ ಪತಿ ರಾಜು ಸುಮಾರು 10 ಲಕ್ಷ ಸಾಲ ಮಾಡಿದ್ದನು.

ರಾಜು‌ ಮೂಲತಃ ಬೆಂಗಳೂರು ದಕ್ಷಿಣ ತಾಲೂಕಿನ ಸುಬ್ಬರಾಯನಪಾಳ್ಯ ಗ್ರಾಮದವನು. ಸಾಲಗಾರರ‌ ಕಾಟದಿಂದಾಗಿ ಪತ್ನಿ ಊರು‌ ದೊಡ್ಡಮಣ್ಣುಗುಡ್ಡೆ ಗ್ರಾಮಕ್ಕೆ ಬಂದು ನೆಲೆಸಿದ್ದನು. ಇಲ್ಲಿಯೂ ಸಾಲಗಾರರ ಕಾಟ ಮುಂದುವರಿದ ಹಿನ್ನೆಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ