ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಒಂದೇ ಕ್ಷೇತ್ರದಲ್ಲಿ ಒಂದೇ ಗಳಿಗೆಯಲ್ಲಿ ಅಬ್ಬರಿಸಿದ ನವ ಗುಳಿಗ- ಬೆಳ್ತಂಗಡಿಯಲ್ಲಿ ಕಣ್ತುಂಬಿಕೊಂಡ ಭಕ್ತರು

Twitter
Facebook
LinkedIn
WhatsApp
ಒಂದೇ ಕ್ಷೇತ್ರದಲ್ಲಿ ಒಂದೇ ಗಳಿಗೆಯಲ್ಲಿ ಅಬ್ಬರಿಸಿದ ನವ ಗುಳಿಗ- ಬೆಳ್ತಂಗಡಿಯಲ್ಲಿ ಕಣ್ತುಂಬಿಕೊಂಡ ಭಕ್ತರು

ಮಂಗಳೂರು: ಕರಾವಳಿ ಭಾಗದ ಜನರಿಂದ ಹೆಚ್ಚಾಗಿ ಆರಾಧಿಸಲ್ಪಡುವ ಗುಳಿಗ (Guliga) ದೈವಕ್ಕೆ ಸಾಮಾನ್ಯವಾಗಿ ಏಕಕಾಲದಲ್ಲಿ ಒಂದೆರಡು ದೈವಗಳು ನರ್ತನ ಸೇವೆ ಮಾಡೋದು ಇದೆ. ಆದರೆ ಇಲ್ಲಿ 9 ಗುಳಿಗ ದೈವಗಳಿಗೆ ವಿಶೇಷವಾಗಿ ನರ್ತನ ಸೇವೆ ನೀಡಲಾಗುತ್ತಿದ್ದು, ಇದು ಕರಾವಳಿಯಲ್ಲಿ ನಡೆದಿರೋ ಏಕೈಕ ನವಗುಳಿಗ ಸೇವೆ.

ಹೌದು. ಬೆಳ್ತಂಗಡಿ (Belthangady) ತಾಲೂಕಿನ ವೇಣೂರಿನ ಬರ್ಕಾಜೆ ಎಂಬ ಪುಟ್ಟ ಗ್ರಾಮದಲ್ಲಿ ನವದುರ್ಗೆಯರ ದೇವಸ್ಥಾನದಲ್ಲಿ ಈ ನವಗುಳಿಗ ದೈವಗಳ ನರ್ತನ ಸೇವೆ ನಡೆಸಲಾಗಿತ್ತು. ದುರ್ಗಾಪರಮೇಶ್ವರಿ ಕ್ಷೇತ್ರಪಾಲಕರಾಗಿ 9 ಗುಳಿಗ ದೈವಗಳು ಇಲ್ಲಿ ನೆಲೆಯಾಗಿರೋ ಕಾರಣ ಇಲ್ಲಿ ಈ ನವ ಗುಳಿಗ ನರ್ತನ ಸೇವೆ ನಡೆಸಲಾಗಿದೆ.

ಸಾಮಾನ್ಯವಾಗಿ ದುರ್ಗಾದೇವಿ ನೆಲೆಸಿರುವ ಕ್ಷೇತ್ರಗಳಲ್ಲಿ ಕ್ಷೇತ್ರಪಾಲಕನಾಗಿ ಗುಳಿಗ ಇದ್ದೇ ಇರ್ತಾನೆ. ಇಂತಹ ಕ್ಷೇತ್ರಗಳಲ್ಲಿ ವಾರ್ಷಿಕವಾಗಿ ಗುಳಿಗನಿಗೆ ಈ ರೀತಿಯಾಗಿ ನರ್ತನ ಸೇವೆಯನ್ನು ನೀಡಲಾಗುತ್ತದೆ. ತುಳುನಾಡಿನ ಹೆಚ್ಚಿನ ಜನರ ಮನೆಯಲ್ಲೂ ಈ ಗುಳಿಗನ ಆರಾಧನೆ ನಡೆಯುತ್ತದೆ. ಆದರೆ ಕೆಲ ವರ್ಷಗಳ ಹಿಂದೆ ಬರ್ಕಾಜೆ ಎಂಬ ಗ್ರಾಮದಲ್ಲಿ ಪುನರ್ ನಿರ್ಮಾಣವಾದ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ (Sri Durgaparameshwari Temple) ದಲ್ಲಿ ನವ ಗುಳಿಗ ದೈವಗಳು ಕ್ಷೇತ್ರಪಾಲಕರಾಗಿ ನೆಲೆಸಿದ್ದಾರೆ ಅನ್ನೋ ವಿಚಾರ ಗೊತ್ತಾಗಿತ್ತು. ಹೀಗಾಗಿ ಆ 9 ದೈವಗಳಿಗೂ ಏಕಕಾಲದಲ್ಲಿ ನರ್ತನ ಸೇವೆ ಮಾಡಲಾಗುತ್ತಿದೆ.

1

ಇದು ತುಳುನಾಡ ಇತಿಹಾಸದಲ್ಲೇ ಮೊದಲಾಗಿದ್ದು, ಇದನ್ನು ವೀಕ್ಷಿಸೋದಿಕ್ಕೆ ದೂರದ ಊರುಗಳಿಂದಲೂ ಜನ ಇಲ್ಲಿಗೆ ಬಂದಿದ್ದು ವಿಶೇಷ. ಈ ಕ್ಷೇತ್ರದಲ್ಲಿ ಪ್ರಾರ್ಥಿಸಿ ಹೋದವರಿಗೆ ಎದುರಾಗುವ ಎಲ್ಲಾ ಸಂಕಷ್ಟಗಳೂ ನಿವಾರಣೆ ಆಗುತ್ತೆ ಅನ್ನೋ ನಂಬಿಕೆ ಕೂಡಾ ಇದೆ. ಹೀಗಾಗಿ ಮುಂಬೈ, ಬೆಂಗಳೂರು, ಚೆನೈ ಮೊದಲಾದೆಡೆಯಿಂದಲೂ ಜನರು ಇಲ್ಲಿಗೆ ಆಗಮಿಸಿ ಈ ನವ ಗುಳಿಗ ನರ್ತನ ಸೇವೆಯನ್ನು ಕಣ್ತುಂಬಿಕೊಂಡಿದ್ದಾರೆ.

ಕಾಂತರ ಸಿನಿಮಾ ಬಂದ ಬಳಿಕ ತುಳುನಾಡಿನ ದೈವಾರಧಾನೆ ಸಾಕಷ್ಟು ಪ್ರಚಾರ ಪಡೆದುಕೊಂಡಿದೆ. ಅದರಲ್ಲೂ ವಿಶೇಷವಾಗಿ ಕಾಂತರದ ಕ್ಷೇತ್ರಪಾಲ ಗುಳಿಗ ಹಾಗೂ ಪಂಜುರ್ಲಿ ದೈವಗಳ ನರ್ತನ ನೋಡಲು ಹೊರ ರಾಜ್ಯದಿಂದಲೂ ಜನರು ಬರಲು ಆರಂಭಿಸಿದ್ದಾರೆ. ಹೀಗಿರುವಾಗ ಈ ನವ ಗುಳಿಗಳ ನರ್ತನ ಸೇವೆ ತುಳನಾಡಿನ ಜನರಿಗೆ ಅಚ್ಚರಿ ಮೂಡಿಸಿರುವುದಂತು ಸುಳ್ಳಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist