ಬುಧವಾರ, ಮೇ 15, 2024
8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಂಠಪೂರ್ತಿ ಕುಡಿದು ಬಸ್‌ನಲ್ಲಿ ಯುವತಿಯ ಸೀಟ್ ಮೇಲೆ ಮೂತ್ರವಿಸರ್ಜನೆ ಮಾಡಿದ ಭೂಪ

Twitter
Facebook
LinkedIn
WhatsApp
12 3 2010 025 1

ಹುಬ್ಬಳ್ಳಿ: ಕಂಠಪೂರ್ತಿ ಮದ್ಯಪಾನ (Alcohol) ಮಾಡಿದ್ದ ವ್ಯಕ್ತಿಯೊಬ್ಬ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ (KSRTC Bus) ಯುವತಿಯೊಬ್ಬಳ ಸೀಟ್ ಮೇಲೆ ಮೂತ್ರವಿಸರ್ಜನೆ (Urination) ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ವಿಜಯಪುರದಿಂದ ಮಂಗಳೂರಿನ ಕಡೆ ಹೊರಟಿದ್ದ ಬಸ್‌ನಲ್ಲಿ 32 ವರ್ಷದ ಕುಡುಕ ಪ್ರಯಾಣಿಕನೊಬ್ಬ ಅನಾಗರಿಕ ಪ್ರದರ್ಶನ ತೋರಿದ್ದಾನೆ. ಕೆಎಸ್‌ಆರ್‌ಟಿಸಿಯ ಹವಾನಿಯಂತ್ರಿತವಲ್ಲದ ಸ್ಲೀಪರ್ ಬಸ್ ಅನ್ನು ಪ್ರಯಾಣದ ವೇಳೆ ನಡುವೆ ಹುಬ್ಬಳ್ಳಿ ಬಳಿಯ ಕಿರೆಸೂರು ಡಾಬಾ ಬಳಿ ಊಟಕ್ಕೆಂದು ನಿಲ್ಲಿಸಲಾಗಿತ್ತು. ಎಲ್ಲಾ ಪ್ರಯಾಣಿಕರು ಬಸ್‌ನಿಂದ ಇಳಿದು ಊಟಕ್ಕೆ ಹೋಗಿದ್ದರು. ಆದರೆ ಅದೇ ಬಸ್‌ನಲ್ಲಿದ್ದ ಕುಡುಕ ಪ್ರಯಾಣಿಕ ಬಸ್‌ನಿಂದ ಇಳಿಯಲಾರದೇ 3ನೇ ಸೀಟ್ ಮೇಲೆ ಕುಳಿತು ಮೂತ್ರ ವಿಸರ್ಜನೆ ಮಾಡಿದ್ದಾನೆ.

ಈ ಸೀಟ್‌ನಲ್ಲಿ 20 ವರ್ಷದ ಯುವತಿಯೊಬ್ಬಳು ಪ್ರಯಾಣ ಮಾಡುತ್ತಿದ್ದಳು. ಕುಡುಕ ಮೂತ್ರ ವಿಸರ್ಜನೆ ಮಾಡಿದ್ದ ವೇಳೆ ಆಕೆ ಊಟ ಮುಗಿಸಿಕೊಂಡು ವಾಪಾಸಾಗುತ್ತಿದ್ದಳು. ಆಗ ಕುಡುಕನ ವರ್ತನೆ ಕಂಡು ಯುವತಿ ಕೆಂಡಾಮಂಡಲವಾಗಿದ್ದಾಳೆ. ವಿಷಯವನ್ನು ಚಾಲಕ ಮತ್ತು ನಿರ್ವಾಹಕರಿಗೆ ತಿಳಿಸಿದ್ದಾಳೆ. ಬಳಿಕ ಕುಡುಕ ಪ್ರಯಾಣಿಕನಿಗೆ ಬಸ್ ಸಿಬ್ಬಂದಿ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದು, ಯುವತಿಗೆ ಸೀಟ್ ಅನ್ನು ಬದಲಿಸಿ ಕೊಟ್ಟಿದ್ದಾರೆ.

ಮಾತ್ರ ವಿಸರ್ಜನೆ ಮಾಡಿದ ವ್ಯಕ್ತಿ ನಿಲ್ಲಲು ಸಾಧ್ಯವಾಗದಷ್ಟು ಮದ್ಯಪಾನ ಮಾಡಿದ್ದು, ಆತನ ಮೈ ಮೇಲೆ ಪ್ರಜ್ಞೆ ಇಲ್ಲದ ಸ್ಥಿತಿಯಲ್ಲಿದ್ದ ಎನ್ನಲಾಗಿದೆ. ಈ ಬಗ್ಗೆ ಯುವತಿ ದೂರು ನೀಡಲು ಹಿಂದೇಟು ಹಾಕಿದ್ದಾಳೆ. ಬಸ್ ಚಾಲಕ ಸಂತೋಷ್ ಹಾಗೂ ನಿರ್ವಾಹಕ ಉಮೇಶ್ ಈ ಬಗ್ಗೆ ವಿಭಾಗೀಯ ಮುಖ್ಯಸ್ಥರಿಗೆ ದೂರು ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ