ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಂಬಳದ ಹುಸೇನ್ ಬೋಲ್ಟ್ ಖ್ಯಾತಿಯ ಶ್ರೀನಿವಾಸ್ ಗೌಡ ವಿರುದ್ಧ ಕ್ರಿಮಿನಲ್ ದೂರು

Twitter
Facebook
LinkedIn
WhatsApp
ಕಂಬಳದ ಹುಸೇನ್ ಬೋಲ್ಟ್ ಖ್ಯಾತಿಯ ಶ್ರೀನಿವಾಸ್ ಗೌಡ ವಿರುದ್ಧ ಕ್ರಿಮಿನಲ್ ದೂರು

ಮಂಗಳೂರಿನ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ ವಿರುದ್ಧ ದೂರು ದಾಖಲಾಗಿದೆ.
ಶ್ರೀನಿವಾಸ ಗೌಡ ಉಸೇನ್ ಬೋಲ್ಟ್ ದಾಖಲೆ ಮುರಿದ ಹೆಸರಲ್ಲಿ, ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಹಣ ಮತ್ತು ಸಾರ್ವಜನಿಕರಿಗೆ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಶ್ರೀನಿವಾಸ ಗೌಡ ವಿರುದ್ದ ಮೂಡಬಿದ್ರೆ ಪೊಲೀಸ್ ಠಾಣೆಗೆ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಸದಸ್ಯ, ಕೋಣಗಳ ಯಜಮಾನರೂ ಆಗಿರುವ ಲೋಕೇಶ್ ಶೆಟ್ಟಿ ಎಂಬುವವರು ದೂರು ನೀಡಿದ್ದಾರೆ.

ಉಸೇನ್ ಬೋಲ್ಟ್ ದಾಖಲೆ ಮುರಿದ ಹೆಸರಲ್ಲಿ, ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಹಣ ಮತ್ತು ಸಾರ್ವಜನಿಕರಿಗೆ ವಂಚನೆ ಆರೋಪ ಕೇಳಿಬಂದಿದೆ. ಕಂಬಳ ಓಟಗಾರ ಶ್ರೀನಿವಾಸ ಗೌಡ, ಕಂಬಳ ಅಕಾಡೆಮಿ ನಡೆಸುವ ಗುಣಪಾಲ ಕಡಂಬ ಮತ್ತು ಲೇಸರ್ ಬೀಮ್ ಮೂಲಕ ಕಂಬಳದ ಫಲಿತಾಂಶ ಘೋಷಿಸುವ ಸ್ಕೈ ವೀವ್ ಮಾಲೀಕ ರತ್ನಾಕರ ಎಂಬವರ ವಿರುದ್ದ ಕ್ರಿಮಿನಲ್ ದೂರು ನೀಡಲಾಗಿದೆ.

ದೂರಿನಲ್ಲಿ‌ ಏನಿದೆ?

ಮಾನ್ಯರೇ,
ವಿಷಯ:- ಸುಳ್ಳು ದಾಖಲೆ ಸೃಷ್ಟಿಸಿ ಸರಕಾರ ಮತ್ತು ಸಾರ್ವಜನಿಕರಿಗೆ ವಂಚಿಸಿವ ಮೂಲಕ ಕಂಬಳ ಕ್ಷೇತ್ರದ ಖ್ಯಾತಿಗೆ ದಕ್ಕೆ ತಂದಿರುವ ಕುರಿತು..

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ದೂರುದಾರನಾದ ನಾನು (ಲೋಕೇಶ್ ಶೆಟ್ಟಿ) ಜಿಲ್ಲಾ ಕಂಬಳ ಸಮಿತಿಯ ಆವ ಸದಸ್ಯವಾಗಿದ್ದು, ಆರೋಪಿಗಳು ಸಮಿತಿ ಸದಸ್ಯರಾಗಿರುವುದಿಲ್ಲ. ಮೊದಲನೇ ಆರೋಪಿ ಕಂಬಳ ಅಕಾಡೆಮಿಯನ್ನು ನಡೆಸಿಕೊಂಡು ಬರುತ್ತಿದ್ದು, ತನ್ನ ಸ್ವಂತ ಲಾಭಕ್ಕಾಗಿ ಜಿಲ್ಲಾ ಕಂಬಳ ಸಮಿತಿಯಲ್ಲಿ ಆಕ್ರಮ ಪ್ರವೇಶ ಮಾಡಿರುತ್ತಾರೆ. ಮಾತ್ರವಲ್ಲದೆ ಕಂಬಳ ಕೂಟದ ಸಭೆಗಳಲ್ಲಿ ಮೈಕ್ ಹಿಡಿದು ತಾನೊಬ್ಬ ಮಹಾಸಾಧಕ, ನನ್ನಿಂದಲೇ ಕಂಬಳ ಉಳಿದಿದೆ ಎಂದು ಸಾರ್ವಜನಿಕರಲ್ಲಿ ಬಿಂಬಿಸಿ ತನ್ನ ಸ್ವಾರ್ಥ ಸಾಧನೆಗೆ ಕಂಬಳವನ್ನು ದುರುಪಯೋಗಪಡಿಸಿರುತ್ತಾರೆ.ಅಷ್ಟೇ ಅಲ್ಲದೆ ಅವರ ಆಕಾಡೆಮಿಯಲ್ಲಿ ತರಬೇತಿ ಪಡೆದಿದ್ದರೆನ್ನಲಾದ ಎರಡನೇ ಆರೋಪಿ ಹೆಸರಲ್ಲಿ ಹಲವು ನಕಲಿ ದಾಖಲೆ ಸೃಷ್ಟಿಸಿದ್ದು, ಮಾಧ್ಯಮಗಳ ಮೂಲಕ ಬೊಗಳೆ ಬಿಟ್ಟು ಕಂಬಳದ ಅಭಿಮಾನಿಗಳು ಮತ್ತು ಸಾರ್ವಜನಿಕರಿಗೆ ಮಾಧ್ಯಮ ಮತ್ತು ಜನಪ್ರತಿನಿಧಿಗಳಿಗೆ ನಂಬಿಕೆ ಬರುವಂತೆ ಮೋಸದಿಂದ ಮೊದಲನೇ ಆರೋಪಿ ನಡೆದುಕೊಂಡಿದ್ದಾರೆ. ಈ ಮೂಲಕ ಮೇಲಿನ ಎಲ್ಲಾ ಆರೋಪಿಗಳು ನಕಲಿ ದಾಖಲೆ ಮತ್ತು ದಾಸ್ತಾವೇಜು ಸೃಷ್ಟಿಸುವ ಮೂಲಕ ಸರಕಾರ ಮತ್ತು ಸಾರ್ವಜನಿಕ ವಲಯದಿಂದ ಲಕ್ಷಾಂತರ ರೂಪಾಯಿ ದೇಣಿಗೆ ಪಡೆದು ಯಾವುದೇ ಲೆಕ್ಕಪತ್ರ ಮಂಡನೆ ಮಾಡದೆ ವಂಚಿಸಿರುತ್ತಾರೆ.ಮಾಧ್ಯಮ ಮತ್ತು ಜನಪ್ರತಿನಿಗಳಿಗೆ ನಂಬಿಕೆ ಬರುವಂತೆ ಮೊದಲನೇ ಆರೋಪಿ ನಡೆದುಕೊಂಡಿದ್ದಾರೆ ಈ ಮೂಲಕ ಮೇಲಿನ ಎಲ್ಲ ಆರೋಪಿಗಳು ನಕಲಿ ದಾಖಲೆ ಮತ್ತು ದಸ್ತಾವೇಜು ಸೃಷ್ಟಿಸುವ ಮೂಲಕ ಸರಕಾರ ಮತ್ತು ಸಾರ್ವಜನಿಕ ವಲಯದಿಂದ ಲಕ್ಷಾಂತರ ರೂಪಾಯಿ ದೇಣಿಗೆ ಲಾಕರು ಯಾವುದೇ ಲೆಕ್ಕಪತ್ರ ಮಂಡನೆ ಮಡದೆ ವಂಚಿಸಿರುತ್ತಾರೆ.ಮೊದಲನೆ ಮತ್ತು ಎರಡನೇ ಆರೋಪಿಗಳ ಎಲ್ಲಾ ಮೋಸದ ಕೃತ್ಯಗಳಿಗೆ ಮೂರನೇ ಆರೋಪಿ ಸಹಕರಿಸಿದ್ದು, ಯಾವುದೇ ಅಧಿಕೃತ ಮಾನ್ಯತೆ ಪಡೆಯದೆ, ನಂಬಲರ್ಹವಾಗಿರದ ತಂತ್ರಜ್ಞಾನದ ಮೂಲಕ ಮನಸಾಇಚ್ಚೆಯಂತೆ ತೀರ್ಪು ನೀಡಿ, ಸುಳ್ಳು, ಮೋಸ, ವಂಚನೆ ಉದ್ದೇಶಪೂರ್ವಕವಾಗಿ ಸಹಕರಿಸಿರುತ್ತಾರೆ. ಆರೋಪಿಗಳು ಕಂಬಳದ ಖ್ಯಾತಿ ಮತ್ತು ಘನತೆಗೆ ದಕ್ಕೆ ತಂದಿರುತ್ತಾರೆ.ಆರೋಪಿಗಳ ಮೋಸದ ವಿರುದ್ಧ ದನಿ ಎತ್ತಿದವರಿಗೆ ಆರೋಪಿಗಳು ಜೀವ ಬೆದರಿಕೆ ಒಡ್ಡಿರುವುದು ಕೆಲ ತಿಂಗಳ ಹಿಂದೆ ವೈರಲ್ ಆದ ಆಡಿಯೋ ಸಂದೇಶದಿಂದ ದೃಢಪಟ್ಟಿರುತ್ತದೆ. ಈ ಮೂವರಿಂದಾಗಿ ಯುವ ಓಟಗಾರರ ಮನೋಸ್ಥೈರ್ಯ ಕುಂದಿದಂತಾಗಿದೆ
ಮಾನ್ಯರೆ, ಇದನ್ನು ಕುಲಂಕುಶವಾಗಿ ತನಿಖೆ ನಡೆಸಬೇಕಾಗಿ ತಮ್ಮಲ್ಲಿ ವಿನಂತಿ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist