ಮಂಗಳವಾರ, ಏಪ್ರಿಲ್ 30, 2024
ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕತ್ತು ಕೊಯ್ದು ವೃದ್ಧ ದಂಪತಿಯ ಬರ್ಬರ ಹತ್ಯೆ

Twitter
Facebook
LinkedIn
WhatsApp
ಕತ್ತು ಕೊಯ್ದು ವೃದ್ಧ ದಂಪತಿಯ ಬರ್ಬರ ಹತ್ಯೆ

ಚಿತ್ರದುರ್ಗ: ಮನೆಯಲ್ಲಿದ್ದ ಇಬ್ಬರು ವೃದ್ಧ ದಂಪತಿಯ (Elderly Couple) ಕತ್ತು ಕೊಯ್ದು ಹತ್ಯೆಗೈದಿರುವ (Murder) ಕೃತ್ಯ ಚಿತ್ರದುರ್ಗ (Chitradurga) ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ನಡೆದಿದೆ.

ನಗರದ ವಿನಾಯಕ ಬಡಾವಣೆಯಲ್ಲಿ ವಾಸವಾಗಿದ್ದ ವೃದ್ಧ ದಂಪತಿ ಮನೆಯಲ್ಲಿ ಇಬ್ಬರೇ ಇರುವುದನ್ನು ಖಚಿತಪಡಿಸಿಕೊಂಡ ದುಷ್ಕರ್ಮಿಗಳು ಅವರ ಕತ್ತು ಕೊಯ್ದು ಕೊಲೆ ಮಾಡಿದ್ದಾರೆ. ಮೃತರನ್ನು ಪ್ರಭಾಕರ್ ಶೆಟ್ರು (75) ವಿಜಯ ಲಕ್ಷ್ಮಿ (65) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಘಟನೆ ನಡೆದಿದ್ದು, ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ವೃದ್ಧ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಚಿಕ್ಕನಾಯಕನಹಳ್ಳಿ ಹಾಗೂ ದಾವಣಗೆರೆಗೆ ಮದುವೆ ಮಾಡಿ ಕೊಟ್ಟಿದ್ದರು. ಮನೆಯಲ್ಲಿ ವೃದ್ಧ ದಂಪತಿ ಮಾತ್ರವೇ ವಾಸವಾಗಿದ್ದರು. ಹೊಸದುರ್ಗದಲ್ಲಿ ಅಡುಗೆ ಎಣ್ಣೆ ವ್ಯಾಪಾರ ಮಾಡುತ್ತಿದ್ದ ಪ್ರಭಾಕರ್ ಶೆಟ್ರು ಮೇಲಿನ ವೈಯುಕ್ತಿಕ ದ್ವೇಷದಿಂದ ಹತ್ಯೆಗೈದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ನಿಖರ ಕಾರಣ ತಿಳಿದುಬಂದಿಲ್ಲ.

ಹೆಚ್ಚಾಗುತ್ತಿರುವ ಕಳ್ಳತನ ಪ್ರಕರಣ:
ಹೊಸದುರ್ಗ ಪಟ್ಟಣದಲ್ಲಿ ಇತ್ತೀಚೆಗೆ ಕಳ್ಳತನ ಪ್ರಕರಣಗಳು ಜಾಸ್ತಿ ಆಗುತ್ತಿವೆ. ಹಗಲು ವೇಳೆ ಮನೆಗಳನ್ನು ನೋಡಿಕೊಂಡು ಪ್ಲಾನ್ ಮಾಡುವ ಕಳ್ಳರು ರಾತ್ರಿ ಸಮಯದಲ್ಲಿ ಬೀಗ ಹಾಕಿರುವ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದಾರೆ. ಒಂದು ವೇಳೆ ಅವರ ಕೃತ್ಯಕ್ಕೆ ಯಾರಾದರೂ ಅಡ್ಡಿಪಡಿಸಿದರೆ ಅಂತಹವರ ಹತ್ಯೆಗೈಯುತ್ತಾರೆ ಎಂಬ ಆತಂಕ ಇಲ್ಲಿನ ನಿವಾಸಿಗಳಲ್ಲಿದೆ. ಹೀಗಾಗಿ ಈ ಕೃತ್ಯಗಳನ್ನು ಭೇದಿಸಿ ಆರೋಪಿಗಳನ್ನು ಬಂಧಿಸಬೇಕೆಂಬ ಮನವಿ ಸ್ಥಳೀಯರಿಂದ ಕೇಳಿಬಂದಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ