ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರಾವಳಿ ಮಲೆನಾಡುಗಳಲ್ಲಿ ಹೊಸ ಮುಖದ ಪ್ರಯೋಗಕ್ಕೆ ಮುಂದಾದ ಕಾಂಗ್ರೆಸ್. ಕೊಡಗಿನಲ್ಲಿ ವಿರಾಜಪೇಟೆಗೆ ಪೊನ್ನನ್ನ, ಮಡಿಕೇರಿಗೆ ಮಂತರ್ ಗೌಡ ಬಹುತೇಕ ಫಿಕ್ಸ್.

Twitter
Facebook
LinkedIn
WhatsApp
WhatsApp Image 2023 01 25 at 2.24.36 PM

ಮಡಿಕೇರಿ: ಕೊಡಗಿನಲ್ಲಿ ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಹೊಸಮುಖ ಗಳನ್ನು ಆಯ್ಕೆ ಮಾಡಲಾಗಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ವಿರಾಜಪೇಟೆಗೆ ಪೊನ್ನನ್ನ, ಮಡಿಕೇರಿಗೆ ಡಾ. ಮಂತರ್ ಗೌಡ ಬಹುತೇಕ ಅಂತಿಮ ಎಂದು ವರದಿಯಾಗಿದೆ.

ಈಗ ಬಿಜೆಪಿಯ ಕೆಜಿ ಬೋಪ್ಪಯ್ಯ ಪ್ರತಿನಿಧಿಸುತ್ತಿರುವ ವಿರಾಜಪೇಟೆ ಕ್ಷೇತ್ರಕ್ಕೆ ಹೈಕೋರ್ಟ್ ನ ಮಾಜಿ ಅಡಿಷನಲ್ ಅಡ್ವಕೇಟ್ ಜನರಲ್ ಎ ಎಸ್ ಪೊನ್ನನ್ನ ಹಾಗೂ ಮಡಿಕೇರಿ ಕ್ಷೇತ್ರಕ್ಕೆ ಕೊಡಗಿನಲ್ಲಿ ಅಭಿವೃದ್ಧಿ ಚಿಂತನೆಯ ಮೂಲಕ ಸಂಚಲನ ಮೂಡಿಸಿದ ಡಾ. ಮಂತರ್ ಗೌಡ ಫಿಕ್ಸ್ ಆಗಿದ್ದಾರೆ ಎಂದು ಹೈಕಮಾಂಡ್ ಮೂಲಗಳಿಂದ ತಿಳಿದುಬಂದಿದೆ.

ವಿರಾಜಪೇಟೆ ಕ್ಷೇತ್ರದ ಅಭ್ಯರ್ಥಿಯಾಗಿ ಹೈಕೋರ್ಟ್ ವಕೀಲರಾದ ಎಎಸ್ ಪೊನ್ನಣ್ಣ ಈ ಮೊದಲು ಕಾಂಗ್ರೆಸ್ ವಕೀಲರ ಹಾಗೂ ಮಾನವ ಹಕ್ಕು ವಿಭಾಗದ ವಿಭಾಗದ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದರು. ಕಳೆದ ಎರಡುವರೆ ವರ್ಷಗಳಿಂದ ವಿರಾಜಪೇಟೆ ಕ್ಷೇತ್ರದಲ್ಲಿ ನಿರಂತರ ಜನ ಸಂಪರ್ಕದ ಮೂಲಕ ಕಾಂಗ್ರೆಸ್ ಬೆಳವಣಿಗೆಗೆ ಕೆಲಸ ಮಾಡಿದ್ದರು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ತನ್ನ ಟ್ರಸ್ಟ್ ಮೂಲಕ ಹಲವಾರು ಜನ ಸೇವ ಕಾರ್ಯಗಳನ್ನು ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Meghalaya: Bharatiya Janata Party will take over NPP soon, says Congress -  Meghalaya: Bharatiya Janata Party will take over NPP soon, says Congress -

ಇನ್ನು ಮಡಿಕೇರಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೊಡಗಿನಲ್ಲಿ ತನ್ನ ನೂತನ ಅಭಿವೃದ್ಧಿ ಚಿಂತನೆಗಳಿಂದ ಸಂಚಲನ ಸೃಷ್ಟಿ ಮಾಡಿದ ಅಭಿವೃದ್ಧಿ ಚಿಂತಕ ಎಂದು ಖ್ಯಾತಿಗಳಿಸಿದ ಡಾ. ಮಂತರ್ ಗೌಡ ಫಿಕ್ಸ್ ಆಗಿದ್ದಾರೆ ಎಂದು ತಿಳಿದುಬಂದಿದೆ. ಕೊಡಗಿನಲ್ಲಿ ತನ್ನ ಅಭಿವೃದ್ದಿ ಚಿಂತನೆಗಳಿಂದ ಕಳೆದ ಮೂರು ತಿಂಗಳುಗಳಲ್ಲಿ ಹೊಸ ಸಂಚಲನ ಸೃಷ್ಟಿ ಮಾಡಿದ್ದ ಡಾ. ಮಂತರ್ ಗೌಡ ಕಾಂಗ್ರೆಸ್ಸಿಗೆ ನವ ಚೈತನ್ಯ ನೀಡಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ಕೊಡಗಿನ ಕಾಂಗ್ರೆಸ್ಸಿಗೆ ಆಗಮಿಸಿ, ಇಡೀ ಕೊಡಗಿನಲ್ಲಿ ಡಾ. ಮಂತರ್ ಗೌಡ ಕೆಲವೇ ತಿಂಗಳುಗಳಲ್ಲಿ ಅಭಿವೃದ್ಧಿ ಚಿಂತನೆಗಳಿಂದ ಸಂಚಲನ ಸೃಷ್ಟಿ ಮಾಡಿದ್ದಾರೆ. ಉದ್ಯೋಗ, ಕೃಷಿ ಬೆಳವಣಿಗೆ, ಮಹಿಳಾ ಸಬಲೀಕರಣ ಈ ರೀತಿಯಾಗಿ ವಿವಿಧ ವಿಷಯಗಳ ಮೇಲಿನ ಅವರ ಚಿಂತನೆಗಳು ಜನಸಾಮಾನ್ಯರನ್ನು ಕೊಡಗಿನಲ್ಲಿ ಬಹುವಾಗಿ ಆಕರ್ಷಿಸಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಈಗ ಮಡಿಕೇರಿ ಕ್ಷೇತ್ರವನ್ನು ಬಿಜೆಪಿಯ ಅಪ್ಪಚ್ಚು ರಂಜನ್ ರವರು ಪ್ರತಿನಿಧಿಸುತ್ತಿದ್ದಾರೆ.


ವೀರಾಜಪೇಟೆ ಹಾಗೂ ಮಡಿಕೇರಿ ಕ್ಷೇತ್ರಕ್ಕೆ ಕಾಂಗ್ರೆಸ್ ನಲ್ಲಿ ಹಲವು ಅಭ್ಯರ್ಥಿಗಳಿದ್ದರು. ಆದರೆ ಗೌಪ್ಯವಾಗಿ ಹೈಕಮಾಂಡ್ ಈ ಎರಡು ಅಭ್ಯರ್ಥಿಗಳಿಗೆ ಗ್ರೀನ್ ಸಿಗ್ನಲ್ ನೀಡಿದೆ ಎಂದು ಹೈಕಮಾಂಡ್ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ. ಬಿಜೆಪಿ ಅಭ್ಯರ್ಥಿಗಳನ್ನು ಬದಲಾವಣೆ ಮಾಡುತ್ತದೆ ಅಥವಾ ಹಾಲಿ ಅಭ್ಯರ್ಥಿಗಳನ್ನು ಮುಂದುವರಿಸುತ್ತದೆ ಎಂಬುದರಲ್ಲಿ ಯಾವುದೇ ಮಾಹಿತಿ ಇದುವರೆಗೆ ಲಭ್ಯವಾಗಿಲ್ಲ. ಕೊಡಗಿನ ಎರಡು ಕ್ಷೇತ್ರಗಳು ಈಗ ಹೊಸ ಮುಖಗಳಿಂದ ರಾಜ್ಯದ ಗಮನ ಸೆಳೆಯುತ್ತಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಕಾಂಗ್ರೆಸ್ ಹೊಸ ಮುಖದ ಪ್ರಯೋಗಕ್ಕೆ ಸಿದ್ಧವಾಗಿದೆ ಎಂದು ಹೈಕಮಾಂಡ್ ಮೂಲಗಳನ್ನು ಉಲ್ಲೇಖಿಸಿ ವರದಿಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist