ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರಾವಳಿ ಹಿಂದುತ್ವದ ಪ್ರಯೋಗ ಶಾಲೆಯಾಗುತ್ತಿದೆ: ಸಿದ್ದರಾಮಯ್ಯ

Twitter
Facebook
LinkedIn
WhatsApp
siddaramaiah dh 1180732 1673612485 1182720 1674174389

ಉಡುಪಿ (ಜ.23): ಕರಾವಳಿಯನ್ನು ಬಿಜೆಪಿ ಹಿಂದುತ್ವದ ಪ್ರಯೋಗ ಶಾಲೆಯನ್ನಾಗಿ ಮಾಡಿದೆ. ಇಲ್ಲಿನ ಯುವಕರು ಬಿಜೆಪಿಯ ದುರುದ್ದೇಶಪೂರಿತ ಹಿಂದುತ್ವಕ್ಕೆ ಬಲಿಪಶುಗಳಾತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಭಾನುವಾರ ಇಲ್ಲಿನ ಕ್ರಿಶ್ಚಿಯನ್‌ ಹೈಸ್ಕೂಲ್‌ ಮೈದಾನದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು. ಭಯೋತ್ಪಾದನೆ ಆರಂಭವಾದದ್ದೇ ಗೋಡ್ಸೆಯಿಂದ, ಹಿಂದುತ್ವ ಎಂಬ ಶಬ್ದವನ್ನು ಹುಟ್ಟಹಾಕಿದ್ದೇ ಸಾವರ್ಕರ್‌. ಬಿಜೆಪಿಯವರ ಹಿಂದುತ್ವ ಎಂದರೆ ಅದು ಗೋಡ್ಸೆ, ಸಾವರ್ಕರ್‌ ಅವರ ಹಿಂದುತ್ವವೇ ಆಗಿದೆ. ಇದನ್ನು ಕರಾವಳಿಯ ಯುವಕರು ಅರ್ಥ ಮಾಡಿಕೊಂಡು ಅದರಿಂದ ದೂರವಿರಬೇಕು ಎಂದವರು ಕರೆ ನೀಡಿದರು.

ನಾವು ಹಿಂದುಗಳು, ಹಿಂದುತ್ವವಾದಿಗಳಲ್ಲ: ಒಂದ ದೇಶ, ಒಂದು ಧರ್ಮ, ಒಂದು ಭಾಷೆ ಎನ್ನುವುದು ಹಿಂದುತ್ವವಾದಿಗಳ ಅಜೆಂಡಾ ಆಗಿದೆ. ಅವರು ಸಂವಿಧಾನದ ಮೇಲೆ ಗೌರವ ಇಲ್ಲದವರು, ದೇಶ ವಿರೋಧಿಗಳು ಎಂದು ವಾಕ್‌ಪ್ರಹಾರ ಮಾಡಿದ ಸಿದ್ದರಾಮಯ್ಯ, ನಾನು, ಡಿ.ಕೆ. ಶಿವಕುಮಾರ್‌, ಬಿ.ಕೆ. ಹರಿಪ್ರಸಾದ್‌, ಸುರ್ಜೆವಾಲ ಎಲ್ಲರೂ ಅಪ್ಪಟ ಹಿಂದುಗಳು, ಹಿಂದುವಾದಿಗಳು, ಆದರೆ ಹಿಂದುತ್ವವಾದಿ, ಮನುವಾದಿಗಳಲ್ಲ ಎಂದರು. ವಿಧಾನಸೌಧದ ಗೋಡೆಗಳಿಗೆ ಕಿವಿಕೊಟ್ಟರೇ ಅವು ಲಂಚ ಲಂಚ ಎನ್ನುತ್ತವೆ ಎಂದು ಲೇವಡಿ ಮಾಡಿದ ಸಿದ್ದರಾಮಯ್ಯ, ಸ್ಯಾಂಟ್ರೋ ರವಿಯನ್ನು ಪೊಲೀಸರು ತಮ್ಮ ಕಸ್ಟಡಿಗೆ ಕೇಳಲೇ ಇಲ್ಲ, ನೇರವಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ಪೊಲೀಸರು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದರೆ ತನ್ನ ಗುಟ್ಟೆಲ್ಲಿ ಹೊರಗೆ ಬರುತ್ತದೋ ಎಂದು ಗೃಹಸಚಿವ ಉರಗ ಜ್ಞಾನೇಂದ್ರರಿಗೆ ಹೆದರಿಕೆ ಎಂದು ಆರೋಪಿಸಿದರು.

ಕಳಪೆ ಫಲಿತಾಂಶಕ್ಕೆ ಬಿಜೆಪಿಯೇ ಕಾರಣ: ಪ್ರತಿಬಾರಿ ಎಸ್ಸೆಸ್ಸೆಲ್ಸಿ – ಪಿಯು ಫಲಿತಾಂಶದಲ್ಲಿ ದ.ಕ., ಉಡುಪಿ ಮೊದಲ ಸ್ಥಾನದಲ್ಲಿರುತ್ತಿದ್ದವು, ಆದರೆ ಕಳೆದ ಬಾರಿ ನಾವೆಲ್ಲರೂ ತಲೆತಗ್ಗಿಸುವಂತೆ ಬಿಜೆಪಿ ಸರ್ಕಾರ ಮಾಡಿದೆ. ಮೊದಲ ಸ್ಥಾನದಲ್ಲಿರುತ್ತಿದ್ದ ದಕ, ಉಡುಪಿ ಜಿಲ್ಲೆಗಳು 17, 18ನೇ ಸ್ಥಾನಕ್ಕೆ ಹೋಗಿವೆ. ಚಿಕ್ಕಬಳ್ಳಾಪುರ ಜಿಲ್ಲೆ ಮೊದಲ ಸ್ಥಾನಕ್ಕೆ ಬಂದಿದೆ. ಬಿಜೆಪಿ ದ.ಕ.- ಉಡುಪಿಯ ಮಕ್ಕಳನ್ನು ದಾರಿ ತಪ್ಪಿಸುತ್ತಿದೆ ಎಂದು ಬಿ.ಕೆ. ಹರಿಪ್ರಸಾದ್‌ ಆರೋಪಿಸಿದರು.

ಸಾಧ್ವಿ ಪ್ರಜ್ಞಾಸಿಂಗ್‌ ಭಯೋತ್ಪಾದಕಿ: ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ ಒಬ್ಬ ಭಯೋತ್ಪಾದಕಿ. ಆಕೆ ಇತ್ತೀಚೆಗೆ ಶಿವಮೊಗ್ಗಕ್ಕೆ ಭೇಟಿ ಕೊಟ್ಟು ಹಿಂದೂಗಳು ತಮ್ಮ ಮನೆಗಳಲ್ಲಿ ಪೆನ್ನು ಪುಸ್ತಕಗಳನ್ನು ಇಟ್ಟುಕೊಳ್ಳಬೇಕು ಎನ್ನದೆ, ತಲ್ವಾರು ಚಾಕು ಚೂರಿ ಆಯುಧಗಳನ್ನು ಹರಿತ ಮಾಡಿಟ್ಟಕೊಳ್ಳಿ ಎಂದು ಹೇಳಿ ಮಕ್ಕಳ ದಾರಿ ತಪ್ಪಿಸಿದ್ದಾಳೆ. ನಾನು ಆಕೆಯನ್ನು ಭಯೋತ್ಪಾದಕಿ ಎಂದು ಕರೆಯುತ್ತೇನೆ ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ವಿವಾದಾತ್ಮಕ ಹೇಳಿಕೆ ನೀಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ