ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕರ್ನಾಟಕ-ಆಂಧ್ರಪ್ರದೇಶ ಗಡಿ ರೇಖೆ ವಿವಾದ ಮುನ್ನೆಲೆಗೆ

Twitter
Facebook
LinkedIn
WhatsApp
ಕರ್ನಾಟಕ-ಆಂಧ್ರಪ್ರದೇಶ ಗಡಿ ರೇಖೆ ವಿವಾದ ಮುನ್ನೆಲೆಗೆ
 

ಬಳ್ಳಾರಿ: ಅಕ್ರಮ ಗಣಿಗಾರಿಕೆ ವೇಳೆ ಗಡಿ ಗುರುತು ನಾಶದಿಂದ ಆರಂಭವಾದ ಕರ್ನಾಟಕ-ಆಂಧ್ರಪ್ರದೇಶ ಗಡಿ ರೇಖೆ ವಿವಾದ ಇದೀಗ ಪ್ರಧಾನ ಮಂತ್ರಿ ಕಚೇರಿ ಮೆಟ್ಟಿಲು ಹತ್ತುವ ಮೂಲಕ ಪುನಃ ಮುನ್ನೆಲೆಗೆ ಬಂದಿದೆ.

ಈಗಾಗಲೇ ಸರ್ವೇ ಆಫ್‌ ಇಂಡಿಯಾದವರು ನಡೆಸಿರುವ ಗಡಿ ಗುರುತು ಕಾರ್ಯವನ್ನು ಆಕ್ಷೇಪಿಸಿ ರುವ ಗಣಿ ಉದ್ಯಮಿ ಟಪಾಲ್‌ ಗಣೇಶ್‌, ಪ್ರಧಾನಿ ಕಚೇರಿಗೆ ದೂರು ಸಲ್ಲಿಸಿದ್ದಾರೆ.

ದೂರು ಆಲಿಸಿರುವ ಪಿಎಂ ಕಚೇರಿ, ದೂರು ಆಧರಿಸಿ ಕ್ರಮ ವಹಿಸುವಂತೆ ಬಳ್ಳಾರಿ ಜಿಲ್ಲಾಧಿಕಾರಿ, ಜಿಲ್ಲಾ ಅರಣ್ಯ ಉಪಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದೆ.

 
 

ಗಣಿ ಉದ್ಯಮಿ ಟಪಾಲ್‌ ಗಣೇಶ್‌ ಕರ್ನಾಟಕ-ಆಂಧ್ರ ಗಡಿ ರೇಖೆ ವಿಚಾರ ಕುರಿತು ಪದೇ ಪದೆ ತಗಾದೆ ತೆಗೆಯುತ್ತಲೇ ಬಂದಿದ್ದಾರೆ. ಕೇಂದ್ರದ ಭೂ ಸಮೀಕ್ಷೆ ಇಲಾಖೆ ಅಧಿಕಾರಿಗಳ ತಂಡ ಸಮೀಕ್ಷೆಗೆಂದು ಕರ್ನಾಟಕ-ಆಂಧ್ರ ಗಡಿ ಪ್ರದೇಶದಲ್ಲಿ ಸಮೀಕ್ಷೆ ಕೈಗೊಂಡಾಗ ಅಧಿಕಾರಿಗಳ ಕಾರ್ಯವೈಖರಿ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಗಡಿ ರೇಖೆ ಗುರುತಿಸಲು ಅನುಸರಿಸುತ್ತಿರುವ ನಕಾಶೆ ಕಾಲ್ಪನಿಕ ವಾಗಿ ಸೃಷ್ಟಿಸಿದ ಒಂದು ಚಿತ್ರವಾಗಿದೆ. ಅದರ ತಯಾರಿಯ ಚಿತ್ರಣ ವಿವರಿಸುವ ಯಾವುದೇ ಪೂರಕ ದಾಖಲೆ ಇಲ್ಲ. ಅದನ್ನು ಆಧರಿಸಿ, ಆಂಧ್ರ- ಕರ್ನಾಟಕ ಗಡಿ ರೇಖೆ ಗುರುತಿಸುವ ಪದ್ಧತಿಯೇ ತಪ್ಪು. ಸಮೀಕ್ಷೆ ವೇಳೆ ಕಾಂಟೂರ್‌ ಮೆಥಡಾಲಜಿಯನ್ನು ಅನುಸರಿಸಿಲ್ಲ ಎಂದು ಆಕ್ಷೇಪಿಸುತ್ತಲೇ ಇರುವ ಟಪಾಲ್‌ ಗಣೇಶ್‌, ಸರ್ವೇ ಅಧಿ ಕಾರಿಗಳ ಕಾರ್ಯವೈಖರಿ ವಿರುದ್ಧ ಅಪಸ್ವರ ತೆಗೆಯುತ್ತಲೇ ಬಂದಿ ದ್ದಾರೆ. ಆದರೆ ಅವರ ಮಾತುಗಳು ಅರಣ್ಯ ರೋದನ ಆಗಿದ್ದವು.

ಗಣೇಶ್‌ ಮಾಡುವ ಆರೋಪದಂತೆ ಸರ್ವೇ ಆಫ್‌ ಇಂಡಿಯಾ ತಂಡ ಮಾಜಿ ಸಚಿವ ಜನಾರ್ದನ ರೆಡ್ಡಿ ಮೇಲಿರುವ ಅಕ್ರಮ ಗಣಿಗಾರಿಕೆ ಆರೋಪಗಳನ್ನು ಮರೆಮಾಚುವ ರೀತಿಯಲ್ಲಿ ಸಮೀಕ್ಷೆ ಕಾರ್ಯ ಕೈಗೊಳ್ಳುತ್ತಿದೆ. ಇದರಿಂದ ನಮ್ಮ ರಾಜ್ಯಕ್ಕೆ ಅನ್ಯಾಯ ಆಗುವುದು ಮಾತ್ರವಲ್ಲ, ಆಗಿರುವ ಅಕ್ರಮ ಗಣಿಗಾರಿಕೆ ಸಕ್ರಮ ಆಗುವುದರಲ್ಲಿ ಅನುಮಾನವೇ ಇಲ್ಲ ಎನ್ನುತ್ತಾರೆ. ಸುಪ್ರೀಂಕೋರ್ಟ್‌ ಸೂಚನೆಯಂತೆ ಬಳ್ಳಾರಿ ಜಿಲ್ಲಾಧಿಕಾರಿ, ಆಂಧ್ರದ ಅನಂತಪುರ ಜಿಲ್ಲಾಧಿಕಾರಿಗಳೊಂದಿಗೆ ಸರ್ವೇ ಆಫ್‌ ಇಂಡಿಯಾದವರು ನಡೆಸಿರುವ ಸರ್ವೇ ಕಾರ್ಯದ ವರದಿ ಈಗಾಗಲೇ ಸುಪ್ರೀಂಕೋರ್ಟ್‌ಗೆ ಸಲ್ಲಿಕೆಯಾಗಿದೆ ಎನ್ನಲಾಗಿದೆ. ಇದರಿಂದ ನ್ಯಾಯ ಸಿಗುವುದು ಅನುಮಾನ ಎಂದರಿತ ಟಪಾಲ್‌ ಗಣೇಶ್‌, ಇದೀಗ ಪಿಎಂ ಕಚೇರಿಗೆ ದೂರು ಸಲ್ಲಿಸಿದ್ದಾರೆ.

ಪಿಎಂಒ ಕಚೇರಿಯಿಂದ ಬಂದ ಪತ್ರದ ಕುರಿತು ಮಾಹಿತಿ ನೀಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಅರಣ್ಯಾಧಿ ಕಾರಿಗೆ ಕೇಳಿದರೆ ನಾನು ಈ ಕುರಿತು ಮಾತನಾಡುವ ಸರಿಯಾದ ಅಧಿಕಾರಿ ಅಲ್ಲ. ಈ ಕುರಿತು ಮಾತನಾಡಲು ಜಿಲ್ಲಾಧಿಕಾರಿಗಳು ಮಾತ್ರ ಅಧಿಕಾರ ಹೊಂದಿದವರು ಎಂದು ಹೇಳಿದ್ದಾರೆ. ಇನ್ನು ಜಿಲ್ಲಾಧಿಕಾರಿಗಳನ್ನು ಈ ಕುರಿತು ಕೇಳಿದರೆ ನನಗೆ ಆ ತರಹದ ಯಾವುದೇ ಪತ್ರ ಬಂದಿಲ್ಲ ಎಂದು ಒಮ್ಮೆ ಹೇಳಿದರೆ, ಪತ್ರ ಬಂದಿದ್ದರೂ ನನಗೆ ಈವರೆಗೆ ಅದು ತಲುಪಿಲ್ಲ ಎಂದಷ್ಟೇ ಹೇಳಿದ್ದಾರೆ.

ಗಡಿ ರೇಖೆ ಸಮೀಕ್ಷೆ ವಿಚಾರ ಸದಾ ಚರ್ಚೆಯಲ್ಲಿದೆ. ಒಂದಿಲ್ಲೊಂದು ವಿವಾದಕ್ಕೆ ಎಡೆಮಾಡಿಕೊಡುತ್ತಲೇ ಇದೆ. ಸರ್ವೇ ಆಫ್‌ ಇಂಡಿಯಾದಿಂದ ಬಂದ ಅಧಿಕಾರಿಗಳ ತಂಡ ಎರಡೂ ರಾಜ್ಯದ ಭೂ ಸರ್ವೇಕ್ಷಣಾ ಇಲಾಖೆ ಅಧಿಕಾರಿಗಳ ಸಹಕಾರದೊಂದಿಗೆ ಸಮೀಕ್ಷೆ ಕೈಗೊಂಡು ಸುಪ್ರೀಂಕೋರ್ಟ್‌ಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಹ ಸಲ್ಲಿಸಿದ್ದಾರೆ. ಸುಪ್ರೀಂ ಕೋರ್ಟ್‌ ಈ ವಿವಾದಗಳನ್ನು ಪರಿಶೀಲಿಸಿ ಅಂತಿಮ ತೀರ್ಪು ನೀಡುತ್ತದೆಯಾ ಎಂಬುದು ಎಲ್ಲರ ಮುಂದಿರುವ ಪ್ರಶ್ನೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ