ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಸ ಸಾಗಿಸೋ ವಾಹನದ ಮೇಲೆ ಹುಚ್ಚಾಟ – ಸಾಹಸ ಮಾಡಿ ಆಸ್ಪತ್ರೆ ಸೇರಿದ ಯುವಕ

Twitter
Facebook
LinkedIn
WhatsApp
ಕಸ ಸಾಗಿಸೋ ವಾಹನದ ಮೇಲೆ ಹುಚ್ಚಾಟ – ಸಾಹಸ ಮಾಡಿ ಆಸ್ಪತ್ರೆ ಸೇರಿದ ಯುವಕ

ಲಕ್ನೋ: ಇತ್ತೀಚಿನ ದಿನಗಳಲ್ಲಿ ಯುವಕರು ದಿಢೀರ್ ಫೇಮಸ್ ಆಗಬೇಕು ಅಂತಾ ಹುಚ್ಚು ಸಾಹಸಗಳಿಗೆ ಮುಂದಾಗುತ್ತಾರೆ. ಕೊನೆಗೆ ಅನಾಹುತ ಮಾಡಿಕೊಂಡು ಆಸ್ಪತ್ರೆ ಸೇರುತ್ತಾರೆ, ಇಲ್ಲವೇ ಎಲ್ಲರ ಮುಂದೆ ನಗೆಪಾಟಲಾಗುತ್ತಾರೆ. ಅಂತಹದ್ದೇ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ.

ಅತೀ ವೇಗವಾಗಿ ಚಲಿಸುತ್ತಿದ್ದ ಕಸ ಸಾಗಿಸುವ ಟ್ರಕ್ ಮೇಲೆ ಯುವಕನೊಬ್ಬ ಶಕ್ತಿಮಾನ್‌ನಂತೆ ಸಾಹಸ ಮಾಡಲು ಮುಂದಾಗಿದ್ದಾನೆ. ಟ್ರಕ್ ಮೇಲೆಯೇ ನಿಂತು ಹಲವು ಬಾರಿ ಡಿಪ್ಸ್ ಮಾಡುತ್ತಾ ಕೆಲವೇ ಸೆಕೆಂಡುಗಳಲ್ಲಿ ಕುಸಿದು ಬಿದ್ದು, ಕೆಲ ದಿನಗಳ ಮಟ್ಟಿಗೆ ಎದ್ದು ಓಡಾಡಲೂ ಆಗದ ಪರಿಸ್ಥಿತಿ ತಲುಪಿದ್ದಾನೆ. ಸದ್ಯ ಈ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. `ದಯವಿಟ್ಟು ಅಂತಹ ಮಾರಣಾಂತಿಕ ಸಾಹಸಗಳನ್ನು ಮಾಡಬೇಡಿ’ ಎಂದು ಸಲಹೆಯನ್ನೂ ನೀಡಿದ್ದಾರೆ.

ಲಕ್ನೋದ ಗೋಮ್ತಿನಗರದಲ್ಲಿ ಈ ಘಟನೆ ನಡೆದಿದೆ. ಶಕ್ತಿಮಾನ್ ಆಗಲು ಹೊರಟಿದ್ದ ಯುವಕ ಇದೀಗ ಆಸ್ಪತ್ರೆಯಲ್ಲಿದ್ದಾನೆ.ಲಕ್ನೋದ ಹೆಚ್ಚುವರಿ ಡಿಸಿಪಿ ಶ್ವೇತಾ ಶ್ರೀವಾಸ್ತವ ಅವರು, 44 ಸೆಕೆಂಡುಗಳ ವೀಡಿಯೋವನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ. ಅಲ್ಲದೆ ಈ ವೀಡಿಯೋ ನೋಡಿದರೆ ವೇಗವಾಗಿ ಚಲಿಸುವ ಟ್ರಕ್ ಮೇಲೆ ನಿಂತು ಯುವಕ ಹೇಗೆ ಡಿಪ್ಸ್ ಮಾಡುತ್ತಿದ್ದಾನೆ ಎಂಬುದು ತಿಳಿಯುತ್ತದೆ ಎಂದು ಬರೆದುಕೊಂಡಿದ್ದಾರೆ. ಶಕ್ತಿಮಾನ್ ಸಾಹಸ ತೋರಿದ ಯುವಕ ಕೆಲವೇ ಸೆಕೆಂಡುಗಳಲ್ಲಿ ಟ್ರಕ್‌ನಿಂದ ಬಿದ್ದು ಗಾಯಗೊಂಡಿದ್ದಾನೆ. ದೇಹದ ವಿವಿಧ ಭಾಗಗಳಲ್ಲಿ ದೊಡ್ಡ ಪೆಟ್ಟಾಗಿದೆ. ಬೆನ್ನು, ಸೊಂಟದ ಭಾಗಗಳಿಗೂ ತೀವ್ರ ಪೆಟ್ಟಾಗಿದೆ. ಸದ್ಯ ಹಲವು ದಿನಗಳವರೆಗೆ ಮಲಗಿದ್ದಲ್ಲೇ ಇರಬೇಕಾಗುತ್ತದೆ ಎಂದು ವರದಿಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ