ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ
ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ Twitter Facebook LinkedIn WhatsApp ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ರಾ.ಹೆ.75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಮೇ.31ರ ಶುಕ್ರವಾರ ಬೆಳಗ್ಗೆ ನಡೆದಿದೆ.
ಜಮಖಂಡಿ(ಸೆ. 28): ಬರುವ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಸಹಿತ ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗೆ .2 ಲಕ್ಷ ಕೋಟಿ ಅನುದಾನ ನೀಡಲಾಗುವುದು ಎಂದು ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು. ತಾಲೂಕಿನ ಹಿರೇಪಡಸಲಗಿಯ ಜಮಖಂಡಿ ಶುಗರ್ಸ್ ಆವರಣದಲ್ಲಿ ಕೃಷ್ಣಾತೀರರತ್ನ ಶಾಸಕ ದಿ.ಸಿದ್ದು ನ್ಯಾಮಗೌಡ ಕಂಚಿನ ಪುತ್ಥಳಿ ಅನಾವರಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಹೊಸಪೇಟೆಯಿಂದ ಕೂಡಲಸಂಗಮವರೆಗಿನ ಪಾದಯಾತ್ರೆ ಸಂದರ್ಭದಲ್ಲಿ ನಾವು ನೀಡಿದ್ದ ಭರವಸೆ ಈಡೇರಿಸಿದ್ದೇವೆ.
ಕಳೆದ ಚುನಾವಣೆಯಲ್ಲಿ ನಮ್ಮ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲ ಭರವಸೆಗಳನ್ನು ನೀಡುವ ಹೆಚ್ಚುವರಿಯಾಗಿ ಯೋಜನೆಗಳನ್ನು ಜಾರಿಗೆ ಮಾಡಿದ್ದೇವೆ. ವರ್ಷಕ್ಕೆ .10 ಸಾವಿರ ಕೋಟಿಯಂತೆ 5 ವರ್ಷದಲ್ಲಿ .58 ಸಾವಿರ ಕೋಟಿ ಹಣ ನೀರಾವರಿ ಯೋಜನೆಗಳಿಗೆ ನೀಡಿ ನುಡಿದಂತೆ ನಡೆದುಕೊಂಡಿದ್ದೇವೆ ಎಂದು ತಿಳಿಸಿದರು.
ಈ ಭಾಗದಲ್ಲಿ 1987 ರಲ್ಲಿ ಕೃಷ್ಣಾತೀರ ರೈತ ಸಂಘ ನಿರ್ಮಿಸುವ ಮೂಲಕ ರೈತರ ಶ್ರಮದಾನದಲ್ಲಿ 1989 ರಲ್ಲಿ 11 ತಿಂಗಳ ಅವಧಿಯಲ್ಲಿ .90 ಲಕ್ಷ ವೆಚ್ಚದಲ್ಲಿ ಖಾಸಗಿ ಬ್ಯಾರೇಜ್ ನಿರ್ಮಿಸಿದ್ದು, ಇತಿಹಾಸವಾಗಿದೆ. ರೈತರ ಶ್ರಮದಾನದಿಂದ ನಿರ್ಮಾಣಗೊಂಡ ಬ್ಯಾರೇಜ್ದಿಂದ ಜಮಖಂಡಿ ಮತ್ತು ಅಥಣಿ ತಾಲೂಕಿನ 35 ಗ್ರಾಮಗಳ ರೈತರು 40 ಸಾವಿರ ಎಕರೆ ನೀರಾವರಿ ವ್ಯವಸ್ಥೆ ಹೊಂದಿದ್ದಾರೆ. ಬ್ಯಾರೇಜ್ ನಿರ್ಮಾಣದಿಂದ ಪ್ರಸಕ್ತ ರೈತರು ಆರ್ಥಿಕರಾಗಿ ಸಬಲರಾಗಿದ್ದು, ನೀರಾವರಿ ಇಲ್ಲದೇ ಹೋದರೆ ಕೃಷಿ ಲಾಭ ದಾಯಕವಲ್ಲ ಎಂದರು.
ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ Twitter Facebook LinkedIn WhatsApp ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ರಾ.ಹೆ.75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಮೇ.31ರ ಶುಕ್ರವಾರ ಬೆಳಗ್ಗೆ ನಡೆದಿದೆ.
ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..! Twitter Facebook LinkedIn WhatsApp ಮಂಗಳೂರು, ಮೇ 28: ಮನೆಯೊಳಗೆ ಬಂದ 12 ಅಡಿ ಉದ್ದದ ಬೃಹತ್ ಗಾತ್ರ ಕಾಳಿಂಗ ಸರ್ಪವೊಂದನ್ನು (King
Pears: ಪಿಯರ್ಸ್ ಹಣ್ಣು ಮಾರುಕಟ್ಟೆಯಲ್ಲಿ ಎಷ್ಟು ಫೇಮಸೋ ಅಷ್ಟೇ ಆರೋಗ್ಯಕ್ಕೂ; ಇಲ್ಲಿದೆ ಮಾಹಿತಿ