
ಶಿವಮೊಗ್ಗ: ಗುತ್ತಿಗೆದಾರರ ಬಳಿ ಸರ್ಕಾರ ಕಮಿಷನ್ ಪಡೆಯುತ್ತಿರುವ ಕುರಿತು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಪ್ರತಿಕ್ರಿಯಿಸಿದರು. ಗುತ್ತಿಗೆದಾರರ ಬಳಿ ಹಲವರು ಪರ್ಸೆಂಟೇಟ್ ಪಡೆಯುತ್ತಿದ್ದಾರೆ. ಕಾಮಗಾರಿಗಳಿಗೆ ಮಂಜೂರಾಗುವ ಶೇ 65ರಷ್ಟು ಅನುದಾನ ಮಧ್ಯವರ್ತಿಗಳ ಪಾಲಾಗುತ್ತಿದೆ. ಇಂಥ ಸನ್ನಿವೇಶದಲ್ಲಿ ಗುತ್ತಿಗೆದಾರರು ಯಾಕೆ ಕೆಲಸ ಮಾಡಬೇಕು? ಯಾಕೆ ಅವರಿವರ ಮನೆಬಾಗಿಲಿಗೆ ಹೋಗಿ ದುಂಬಾಲು ಬೀಳಬೇಕು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೂ ಈ ವ್ಯವಹಾರ ನಡೆದಿದೆ. ಕಾಂಗ್ರೆಸ್ನವರು ಅಪ್ಪಟ ಚಿನ್ನ ಏನಲ್ಲ. ಈ ಹಿಂದೆಯೂ ನಾನು ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದೆ. ಆಗ ಸಿದ್ದರಾಮಯ್ಯ ಅವರ 80 ಶಾಸಕರು ಮನೆಯಲ್ಲಿ ಮಲಗಿದ್ದರು. ಅವರಿಗೆಲ್ಲಾ ಈಗ ಪರ್ಸೆಂಟೇಜ್ ವಿರುದ್ಧ ಹೋರಾಟ ನೆನಪಾಗಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಪಿಎಸ್ಐ ಅಕ್ರಮ ಪರೀಕ್ಷೆ ಕುರಿತು ಸಮಗ್ರ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist