![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಸ್ಟಾರ್ ವಾರ್ ಎಂಬುದು ಎಲ್ಲ ಭಾಷೆಯಲ್ಲೂ ಇದೆ. ಸ್ಟಾರ್ ಕಲಾವಿದರ ನಡುವೆ ಒಂದಿಲ್ಲೊಂದು ಕಾರಣಕ್ಕೆ ಟಫ್ ಸ್ಪರ್ಧೆ ಏರ್ಪಡುವುದು, ಅದರಿಂದ ದ್ವೇಷದ ವಾತಾವರಣ ನಿರ್ಮಾಣ ಆಗುವುದು, ಅವರ ಅಭಿಮಾನಿಗಳು ಆವೇಶಕ್ಕೆ ಒಳಗಾಗುವುದು ಹೊಸದೇನೂ ಅಲ್ಲ. ಆದರೆ ಎಲ್ಲದಕ್ಕೂ ಒಂದು ಮಿತಿ ಇರಬೇಕು. ಕೆಲವೊಮ್ಮೆ ಫ್ಯಾನ್ಸ್ ವಾರ್ ಎಂಬುದು ತೀರಾ ಕೆಟ್ಟ ಮಟ್ಟಕ್ಕೆ ಇಳಿದುಬಿಡುತ್ತದೆ. ಸ್ಟಾರ್ ನಟರು ಸೌಹಾರ್ದಯುತವಾಗಿ ಇದ್ದರೂ ಕೂಡ ಅವರ ಫ್ಯಾನ್ಸ್ ಅತಿರೇಕ ಮಾಡೋದು ನಿಲ್ಲಿಸಲ್ಲ. ಈಗ ನಟ ಅಜಿತ್ ಕುಮಾರ್ (Ajith Kumar) ಅವರ ಅಭಿಮಾನಿಗಳು ಅದೇ ಹಂತವನ್ನು ತಲುಪಿದ್ದಾರೆ ಎಂಬ ಆರೋಪ ಎದುರಾಗಿದೆ. ಸೋಶಿಯಲ್ ಮೀಡಿಯಾದಲ್ಲಿ #RIPJosephVijay ಎಂಬ ಹ್ಯಾಷ್ ಟ್ಯಾಗ್ ಸಖತ್ ಟ್ರೆಂಡ್ ಆಗಿದೆ. ಹೌದು, ಈ ರೀತಿಯಾಗಿ ದಳಪತಿ ವಿಜಯ್ (Thalapathy Vijay) ಅವರಿಗೆ ಅಜಿತ್ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಅಗೌರವ ತೋರಿಸುತ್ತಿದ್ದಾರೆ. ವಿಜಯ್ ನಿಧನರಾಗಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ವಿಕೃತಿ ಮರೆಯಲಾಗುತ್ತಿದೆ. ಈ ವಿಷಯ ದೊಡ್ಡಮಟ್ಟದಲ್ಲಿ ಚರ್ಚೆ ಆಗುತ್ತಿದೆ. ವಿಜಯ್ ನಟನೆಯ ‘ಬೀಸ್ಟ್’ ಸಿನಿಮಾ (Beast Movie) ಬಿಡುಗಡೆಗೆ ಸಿದ್ಧವಾಗಿರುವ ಹೊಸ್ತಿಲಲ್ಲೇ ಇಂಥ ಕಿರಿಕ್ ಆರಂಭ ಆಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist