ಭಾನುವಾರ, ಜೂನ್ 2, 2024
ಬೆಳ್ತಂಗಡಿ: ಬೈಕಿಗೆ ಡಿಕ್ಕಿ ಹೊಡೆದ ಲಾರಿ; ಬೈಕ್ ಸವಾರ ಸಾವು.!-ಇಂಗ್ಲೆಂಡ್ನಿಂದ 1 ಲಕ್ಷ ಕಿಲೋಗ್ರಾಂಗಳಷ್ಟು ಚಿನ್ನ ಭಾರತಕ್ಕೆ ಮರಳಿ ತಂದ ಭಾರತ; ಖಜಾನೆಗೆ ರವಾನಿಸಿದ ಆರ್ಬಿಐ.!-ರಾಹುಲ್ ಗಾಂಧಿ ಪ್ರಧಾನಿ ಹುದ್ದೆಗೆ ಸೂಕ್ತ ಅಭ್ಯರ್ಥಿ: ಮಲ್ಲಿಕಾರ್ಜುನ ಖರ್ಗೆ-ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಇಳಿಕೆ..!-ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಸಲು ಜೂನ್ 12 ರವರೆಗೆ ಅವಕಾಶ ನೀಡಿದ ಹೈಕೋರ್ಟ್-ಸುಮಲತಾ ಅಂಬರೀಶ್ ಗೆ ವಿಧಾನ ಪರಿಷತ್‌ ಟಿಕೆಟ್ ಬಹುತೇಕ ಫಿಕ್ಸ್?-Pears: ಪಿಯರ್ಸ್ ಹಣ್ಣು ಮಾರುಕಟ್ಟೆಯಲ್ಲಿ ಎಷ್ಟು ಫೇಮಸೋ ಅಷ್ಟೇ ಆರೋಗ್ಯಕ್ಕೂ; ಇಲ್ಲಿದೆ ಮಾಹಿತಿ-ಗೃಹ ಸಚಿವ ಅಮಿತ್‌ ಶಾ ಪತ್ನಿ ಸೋನಲ್‌ ಶಾ ಜೊತೆಗೆ ತಿರುಪತಿ ದೇವಸ್ಥಾನಕ್ಕೆ ಭೇಟಿ-ಗುದನಾಳದಲ್ಲಿ ಬರೋಬ್ಬರಿ 1kg ಚಿನ್ನ ಬಚ್ಚಿಟ್ಟ ಗಗನಸಖಿ!-ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕುದ್ರೋಳಿಯಲ್ಲಿ ದೀಪಾವಳಿ ಸಂಭ್ರಮ- ಎಲ್ಲರನ್ನೂ ಆಕರ್ಷಿಸಿದ ಗೂಡುದೀಪದ ಕಾರ್ಯಕ್ರಮ

Twitter
Facebook
LinkedIn
WhatsApp
ಕುದ್ರೋಳಿಯಲ್ಲಿ ದೀಪಾವಳಿ ಸಂಭ್ರಮ- ಎಲ್ಲರನ್ನೂ ಆಕರ್ಷಿಸಿದ ಗೂಡುದೀಪದ ಕಾರ್ಯಕ್ರಮ

ಮಂಗಳೂರು: ದೀಪಾವಳಿ (Deepavali) ಬಂತೆಂದರೆ ತುಳುನಾಡಿನ ಮನೆಮುಂದೆಲ್ಲಾ ಬೆಳಗುತ್ತಿದ್ದ ಗೂಡುದೀಪಗಳು(ಆಕಾಶಬುಟ್ಟಿ) ಇಂದು ಆ ದೇವಸ್ಥಾನದ ಮುಂದೆಯೂ ಸಹಸ್ರಾರು ಸಂಖ್ಯೆಯಲ್ಲಿ ಕಂಗೊಳಿಸುತ್ತಿತ್ತು. ಒಂದನ್ನೊಂದು ಮೀರಿಸುವ ಆ ಗೂಡುದೀಪಗಳು ಜನರನ್ನು ತನ್ನತ್ತ ಸೆಳೆಯುತ್ತಿತ್ತು. ಗೂಡುದೀಪಗಳ ತಯಾರಕರಂತೂ ನನ್ನ ಗೂಡುದೀಪ ಚೆನ್ನಾಗಿದೆ ಎಂದು ಮೀಸೆ ತಿರುಗಿಸುತ್ತಿದ್ದರು.

ವಾವ್.. ಒಂದಕ್ಕಿಂತ ಒಂದು ಚೆಂದ. ಈ ರೀತಿ ಸುಂದರವಾಗಿ ಕಂಗೊಳಿಸುತ್ತಿರುವ ಇಂತಹ ಗೂಡುದೀಪಗಳು ಹಿಂದಿನ ಕಾಲದಲ್ಲಿ ತುಳುನಾಡಿನ ಪ್ರತೀ ಮನೆ ಮುಂದೆಯೂ ಇತ್ತು. ಮನೆ ಮಂದಿಯೆಲ್ಲಾ ಸೇರಿ ಇಂತಹ ಸುಂದರವಾದ ಗೂಡುದೀಪಗಳನ್ನು ತಯಾರಿಸುತ್ತಿದ್ದರು. ದೀಪಗಳ ಜೊತೆಗೆ ಈ ಗೂಡುದೀಪವೂ ಮೆರುಗು ನೀಡುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಇದಕ್ಕೆಲ್ಲ ಯಾರಿಗೂ ಪುರುಸೋತ್ತಿಲ್ಲದೆ, ಕೆಲವರು ಅಂಗಡಿಗಳಲ್ಲಿ ಸಿಗುವ ರೆಡಿಮೆಡ್ ಗೂಡುದೀಪಗಳನ್ನು ತಂದರೆ, ಇನ್ನು ಕೆಲವರು ಗೂಡುದೀಪಗಳನ್ನು ಹಾಕುವ ಸಂಪ್ರದಾಯವನ್ನೇ ಮರೆತಿದ್ದಾರೆ. ಹೀಗಾಗಿ ಈ ಗೂಡುದೀಪಗಳು ಇನ್ನೂ ಉಳಿಯಬೇಕು ಜೊತೆಗೆ ಯುವಕರಲ್ಲೂ ಈ ಗೂಡುದೀಪ (Gududeepa) ಗಳ ಬಗ್ಗೆ ಆಸಕ್ತಿ ಬರಬೇಕು ಅನ್ನುವ ನಿಟ್ಟಿನಲ್ಲಿ ಮಂಗಳೂರಿನ ಸ್ಥಳೀಯ ಸುದ್ದಿವಾಹಿನಿ ಕಳೆದ 20 ವರ್ಷಗಳಿಂದ ಗೂಡುದೀಪ ಸ್ಪರ್ಧೆಯನ್ನು ನಡೆಸಿಕೊಂಡು ಬರುತ್ತಿದೆ.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವಠಾರದಲ್ಲಿ ಕ್ಷೇತ್ರದ ಸಹಯೋಗದೊಂದಿಗೆ ಈ ಗೂಡುದೀಪ ಸ್ಫರ್ಧೆಯನ್ನು ಆಯೋಜಿಸಲಾಗುತ್ತದೆ. ಈ ಸ್ಪರ್ಧೆ 3 ವಿಭಾಗಳಾದ ಸಾಂಪ್ರದಾಯಿಕ, ಆಧುನಿಕ ಹಾಗೂ ಮೋಡೆಲ್ ವಿಭಾಗದಲ್ಲಿ ನಡೆಯುತ್ತಿದ್ದು ಎಲ್ಲರಿಗೂ ಮುಕ್ತ ಅವಕಾಶ ಇದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡಿನಿಂದ ಸ್ಪರ್ಧಾಳುಗಳು ತಮ್ಮ ಗೂಡು ದೀಪಗಳೊಂದಿಗೆ ಬಂದು ಇಲ್ಲಿ ಪ್ರದರ್ಶನಕ್ಕಿಡುತ್ತಾರೆ. ಇಲ್ಲಿರುವ ಪ್ರತಿಯೊಂದು ಗೂಡುದೀಪವೂ ವಿಭಿನ್ನವಾಗಿದೆ. ದಿನ ಬಳಕೆಯ ವಸ್ತುಗಳು ಕಲಾಕಾರನ ಕೈಯಲ್ಲಿ ಜೀವ ಪಡೆದಿದೆ. ಕಾಂತಾರ ಚಿತ್ರದ ಶೈಲಿಯ ಗೂಡುದೀಪ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿತ್ತು. 

ಈ ಗೂಡದೀಪ ಸ್ಫರ್ಧೆಯನ್ನು ನೋಡಿದವರಂತು ನಾವು ಮುಂದಿನ ದಿನಗಳಲ್ಲಿ ಗೂಡುದೀಪಗಳನ್ನು ತಯಾರಿಸಬೇಕೆಂದರು. ಈ ಸ್ಫರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿದರೆ, ಮೂರು ವಿಭಾಗದಲ್ಲೂ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವಾಗಿ ಚಿನ್ನದ ಪದಕ ನೀಡಲಾಯಿತು. ಒಟ್ಟಿನಲ್ಲಿ ಅವನತಿಯತ್ತ ಸಾಗುತ್ತಿರುವ ಈ ಗೂಡುದೀಪಗಳನ್ನು ಈ ರೀತಿಯ ಸ್ಪರ್ಧೆ ಮಾಡಿಯಾದರೂ ಉಳಿಸಿಕೊಳ್ಳಬೇಕೆನ್ನುವ ಸಂಘಟಕರ ಪ್ರಯತ್ನಕ್ಕೆ ಎಲ್ಲರೂ ಸೈ ಎಂದರು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ

ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ

ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ Twitter Facebook LinkedIn WhatsApp ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ರಾ.ಹೆ.75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಮೇ.31ರ ಶುಕ್ರವಾರ ಬೆಳಗ್ಗೆ ನಡೆದಿದೆ.

ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..!

ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..!

ಬೆಳ್ತಂಗಡಿ: ಮನೆಯೊಳಗೆ ಮಂಚದಡಿಯಲ್ಲಿತ್ತು12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ..! Twitter Facebook LinkedIn WhatsApp ಮಂಗಳೂರು, ಮೇ 28: ಮನೆಯೊಳಗೆ ಬಂದ 12 ಅಡಿ ಉದ್ದದ ಬೃಹತ್ ಗಾತ್ರ ಕಾಳಿಂಗ ಸರ್ಪವೊಂದನ್ನು (King

ಚಂಡಮಾರುತದಿಂದ ಹಾನಿಗೀಡಾದ ಮನೆಗಳು- 10,000
ಹಾನಿಗೊಳಗಾದ ಕೃಷಿ ಭೂಮಿ- 6,000 ಹೆಕ್ಟೇರ್‌
ನಾಶವಾದ ಸಿಗಡಿ ಫಾರ್ಮ್- 1,000
ನಿರಾಶ್ರಿತರಾದವರು- 10 ಲಕ್ಷ
ಶಿಬಿರಗಳಲ್ಲಿ ಆಶ್ರಯ ಪಡೆದವರು- 6,925
ಸ್ಥಳಾಂತರಗೊಂಡವರ ಸಂಖ್ಯೆ- 2 ಲಕ್ಷ

ಅಂಕಣ