ಶುಕ್ರವಾರ, ಜೂನ್ 28, 2024
ಭೀಕರ ರಸ್ತೆ ಅಪಘಾತ; ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ,13 ಮಂದಿ ದುರ್ಮರಣ-T20 World Cup: ಆಂಗ್ಲರ ವಿರುದ್ಧ ಭಾರತಕ್ಕೆ ಭರ್ಜರಿ ಜಯ; ಫೈನಲ್​ಗೇರಿದ ಭಾರತ.-ಬೆಳ್ತಂಗಡಿ: ನೀರಿನಲ್ಲಿ ವಿದ್ಯುತ್ ಪ್ರವಹಿಸಿ ಯುವತಿ ಸಾವು; ದಕ್ಷಿಣ ಕನ್ನಡದಲ್ಲಿ 2 ದಿನದಲ್ಲಿ 7 ಮಂದಿ ದುರ್ಮರಣ.!-ಕರಾವಳಿಯಾದ್ಯಂತ ಭಾರಿ ಮಳೆ ಹಿನ್ನೆಲೆ ನಾಳೆ ಜೂನ್ 28 ಶುಕ್ರವಾರದಂದು ಶಾಲಾ ಕಾಲೇಜಿಗೆ ರಜೆ ಘೋಷಣೆ..!-ಸಿದ್ದರಾಮಯ್ಯರವರ ಎದುರೆ CM ಸ್ಥಾನವನ್ನು ಡಿಕೆಶಿ ಗೆ ಬಿಟ್ಟುಬಿಡುವಂತೆ ಸ್ವಾಮೀಜಿ ಹೇಳಿಕೆ!-ಮಡಿಕೇರಿ: ಬೆಳಗ್ಗೆ ಕರ್ತವ್ಯಕ್ಕೆ ಹೊರಡುತ್ತಿರುವಾಗ ಹೃದಯಘಾತ; ಯುವತಿ ಸಾವು..!-ಮಂಗಳೂರು: ರಿಕ್ಷಾ ತೊಳೆಯುತ್ತಿರುವ ವೇಳೆ ವಿದ್ಯುತ್ ತಂತಿ ಬಿದ್ದು ಇಬ್ಬರು ರಿಕ್ಷಾ ಚಾಲಕರು ಮೃತ್ಯು..!-Rain Alert: ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್; 3 ದಿನ ಭಾರಿ ಮಳೆಯ ಮುನ್ಸೂಚನೆ.!-T20 ವಿಶ್ವಕಪ್: ಫೈನಲ್ ಗೆ ಎಂಟ್ರಿಕೊಟ್ಟು ಇತಿಹಾಸ ಸೃಷ್ಟಿಸಿದ ದಕ್ಷಿಣ ಆಫ್ರಿಕಾ-L K Advani : ಏಮ್ಸ್ ಆಸ್ಪತ್ರೆಗೆ ದಾಖಲಾದ ಬಿಜೆಪಿ ಹಿರಿಯ ನಾಯಕ ಲಾಲ್​​ಕೃಷ್ಣ ಅಡ್ವಾಣಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊಲೆ ಪ್ರಕರಣ; ನಟ ದರ್ಶನ್ ಅರೆಸ್ಟ್.!

Twitter
Facebook
LinkedIn
WhatsApp
ಕೊಲೆ ಪ್ರಕರಣ; ನಟ ದರ್ಶನ್ ಅರೆಸ್ಟ್.!

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ. ಈ ಪ್ರಕರಣ ಸದ್ಯ ಸೆನ್ಸೇಷನ್ ಸೃಷ್ಟಿ ಮಾಡಿದೆ. ಮೈಸೂರಿನ ಫಾರ್ಮ್​​ಹೌಸ್​ನಲ್ಲಿ ನಟ ದರ್ಶನ್​ ಅರೆಸ್ಟ್ ಆಗಿದ್ದಾರೆ ಎಂದು ತಿಳಿದು ಬಂದಿದೆ.

ದರ್ಶನ್ ಜೊತೆ ಪವಿತ್ರಾ ಗೌಡ ಆಪ್ತವಾಗಿದ್ದಾರೆ. ದರ್ಶನ್ ಜೊತೆ ಇರೋ ಫೋಟೋಗಳನ್ನು ಪವಿತ್ರಾ ಗೌಡ ಹಂಚಿಕೊಂಡಿದ್ದರು. ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್ ಮಾಡಿದ್ದರು. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು. ದರ್ಶನ್ ಸೂಚನೆ ಮೇಲೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ಬಂಧಿಸಲಾಗಿದೆ.

ಈ ಘಟನೆ ನಡೆದಿದ್ದು ಜೂನ್ 9ರಂದು. ಚಿತ್ರದುರ್ಗದಿಂದ ರೇಣುಕಾ ಸ್ವಾಮಿ ಬೆಂಗಳೂರಿಕೆ ಕರೆದುಕೊಂಡು ಬರಲಾಗಿತ್ತು. ವಿನಯ್​ ಎನ್ನುವವರಿಗೆ ಸೇರಿದ ಶೆಡ್​ನಲ್ಲಿ ಅವರನ್ನು ಇರಿಸಲಾಗಿತ್ತು. ಈ ವೇಳೆ ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಲಾಗಿದೆ. 4 ಜನ ಹಲ್ಲೆ ಮಾಡಿದ ತಂಡದಲ್ಲಿ ದರ್ಶನ್​ ಇದ್ದ ಬಗ್ಗೆ ಮಾಹಿತಿ ಇದೆ. ಹತ್ಯೆ ಮಾಡಿ ಮೃತದೇವನ್ನು ಮೋರಿಯಲ್ಲಿ ಎಸೆದು ಹೋಗಲಾಗಿತ್ತು. ವಿಜಯನಗರ ACP ಚಂದನ್​ ತಂಡದಿಂದ ದರ್ಶನ್​ ವಶಕ್ಕೆ ಪಡೆಯಲಾಗಿದೆ.

 

ಪವಿತ್ರಾ ಗೌಡ ಹಾಗೂ ದರ್ಶನ್ ಮಧ್ಯೆ ಆಪ್ತತೆ ಇದೆ. ಇಬ್ಬರೂ ಹಲವು ಕಡೆಗಳಲ್ಲಿ ಸುತ್ತಾಡಿ ಬಂದಿದ್ದರು. ಇವರ ಸಂಬಂಧದ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ