ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೊಲೆಗೂ ಮುನ್ನ ಸೋನಾಲಿ ಅತ್ಯಾಚಾರ: ಸಹೋದರ ರಿಂಕು ಆರೋಪ!

Twitter
Facebook
LinkedIn
WhatsApp
ಕೊಲೆಗೂ ಮುನ್ನ ಸೋನಾಲಿ ಅತ್ಯಾಚಾರ: ಸಹೋದರ ರಿಂಕು ಆರೋಪ!

ನವದೆಹಲಿ (ಆ.24): ಬಿಜೆಪಿ ನಾಯಕಿ ಹಾಗೂ ಬಿಗ್‌ ಬಾಸ್‌ ಸ್ಪರ್ಧಿ ಸೋನಾಲಿ ಪೋಗಟ್‌ ಸಾವಿನ ಪ್ರಕರಣ ಇನ್ನಷ್ಟು ತಿರುವು ಪಡೆದುಕೊಂಡಿದೆ. ಸಾವಿಗೂ ಮುನ್ನ ಆಕೆಯನ್ನು ರೇಪ್‌ ಹಾಗೂ ಬ್ಲ್ಯಾಕ್‌ಮೇಲ್‌ ಮಾಡಲಾಗಿದೆ ಎಂದು ಅವರ ಕಿರಿಯ ಸಹೋದರ ರಿಂಕು ಢಾಕಾ ಆರೋಪ ಮಾಡಿದ್ದಾರೆ.  ಫತೇಹಾಬಾದ್‌ನ ಭೂತಂಕಲನ್ ಗ್ರಾಮದ ನಿವಾಸಿಯಾಗಿರುವ ರಿಂಕು, ಸೋನಾಲಿ ಪೋಗಟ್‌ ಅವರ ಆಪ್ತ ಸಹಾಯಕ ಸುಧೀರ್‌ ಸಂಗ್ವಾನ್‌ ಹಾಗೂ ಆತನ ಸ್ನೇಹಿತ ಸುಖ್ವಿಂದರ್‌, ಸೋನಾಲಿ ಅವರು ಸೇವನೆ ಮಾಡಿದ ಆಹಾರದಲ್ಲಿ ಅಮಲು ಪದಾರ್ಥ ಬೆರೆಸಿ ನೀಡಿದ್ದಾರೆ. ಬಳಿಕ ಆಕೆಯನ್ನು ರೇಪ್‌ ಮಾಡಿದ್ದಲ್ಲದೆ, ಅದನ್ನು ವಿಡಿಯೋ ಮಾಡಿ, ಬ್ಲ್ಯಾಕ್‌ಮೇಲ್‌ ಕೂಡ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಇದರೊಂದಿಗೆ ರಾಜಕೀಯ ಷಡ್ಯಂತ್ರ ರೂಪಿಸುವ ಭರದಲ್ಲಿ ಸೋನಾಲಿಯ ಆಸ್ತಿ ಕಬಳಿಸಿ ಹತ್ಯೆ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ. ಈ ಬಗ್ಗೆ ರಿಂಕು ಗೋವಾ ಪೊಲೀಸರಿಗೆ ಲಿಖಿತ ದೂರು ನೀಡಿದ್ದು, ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ರಿಂಕು ಢಾಕಾ ಅವರು ತಮ್ಮ ಸಹೋದರಿ ಸೋನಾಲಿ ಫೋಗಟ್, ಹಿಸಾರ್‌ನಲ್ಲಿ ಮದುವೆಯಾಗಿದ್ದರು. ಆದರೆ, ಕೆಲವು ವರ್ಷಗಳ ಹಿಂದೆ ಸೋದರ ಮಾವ ಸಂಜಯ್‌ ಪೋಗಟ್‌ ನಿಧನರಾದರು. ಇದಾದ ನಂತರ ಸೋನಾಲಿ ಬಿಜೆಪಿ ಸೇರಿದ್ದಲ್ಲದೆ, ರಾಜಕೀಯದಲ್ಲಿ ತಮ್ಮ ವೃತ್ತಿಜೀವನವನ್ನು ಕಂಡುಕೊಂಡಿದ್ದರು. 2019 ರ ಚುನಾವಣೆಯ ಸಮಯದಲ್ಲಿ, ರೋಹ್ಟಕ್ ನಿವಾಸಿ ಸುಧೀರ್ ಸಾಂಗ್ವಾನ್ ಮತ್ತು ಭಿವಾನಿ ನಿವಾಸಿ ಸುಖ್ವಿಂದರ್, ಸೋನಾಲಿ ಅವರ ಬಳಿ ಕೆಲಸಗಾರರಾಗಿ ಸೇರಿಕೊಂಡಿದ್ದರು.

ಸುಧೀರ್‌ ಹಾಗೂ ಸುಖ್ವಿಂದರ್‌ ಇಬ್ಬರೂ ಕೂಡ ಸೋನಾಲಿಯ ವಿಶ್ವಾಸವನ್ನು ಗಳಿಸಿಕೊಂಡಿದ್ದರು. ಇದರಲ್ಲಿ ಸುಧೀರ್‌, ಸೋನಾಲಿ ಅವರ ಪಿಎ ಆಗಿ ಕೆಲಸ ಮಾಡುತ್ತಿದ್ದರು. ರಿಂಕು ಅವರು ನೀಡಿದ ದೂರಿನ ಅಧಾರದಲ್ಲಿ ಹೇಳುವುದಾದರೆ, 2021ರಲ್ಲಿ ಕೂಡ ಸೋನಾಲಿ ಅವರ ಮನೆಯಲ್ಲಿ ಕಳ್ಳತನವಾಗಿತ್ತು. ಸುಧೀರ್‌ ಅವರ ಮುಂದಾಳತ್ವದಲ್ಲಿಯೇ ಈ ಕಳ್ಳತನ ನಡೆದಿತ್ತು. ಆದರೆ, ಅದಾದ ಬಳಿಕ, ಮನೆ ಕೆಲಸದವರು ಹಾಗೂ ಇತರ ಸಿಬ್ಬಂದಿಯನ್ನ ತೆಗೆದುಹಾಕಲಾಗಿತ್ತು. ಅಂದಿನಿಂದ ಸೋನಾಲಿ ಅವರ ಆಹಾರದ ಬಗ್ಗೆ ಸುಧೀರ್‌ ಗಮನ ನೀಡುತ್ತಿದ್ದ. ಕೆಲವೊಮ್ಮೆ ಸೋನಾಲಿ ಅವರೇ, ಸುಧೀರ್‌ ಅವರು ನನಗೆ ಖೀರ್‌ ತಿನಿಸಿದ ಬಳಿಕ ನನ್ನ ಕೈ ಕಾಲುಗಳು ಮರಗಟ್ಟಿ ಹೋದಂತಾಗುತ್ತಿದೆ ಎಂದು ಅವರು ಹಿಂದೊಮ್ಮೆ ಹೇಳಿದ್ದರು ಎಂದು ದೂರಿದ್ದಾರೆ.

ಸುಧೀರ್ ಎಲ್ಲಾ ವಹಿವಾಟು ಮತ್ತು ಕಾಗದ ಪತ್ರಗಳ ಕೆಲಸ ಮಾಡುತ್ತಿದ್ದ ಎಂದು ರಿಂಕು ಹೇಳಿದ್ದಾರೆ. ಆಗಸ್ಟ್ 22 ರಂದು, ಸೋನಾಲಿ ತನ್ನ ಕಿರಿಯ ಅಳಿಯ ಅಮನ್‌ಗೆ ಕರೆ ಮಾಡಿ, ಸುಧೀರ್ ತನಗೆ ಆಹಾರದಲ್ಲಿ ಏನೋ ಹಾಕಿದ್ದಾನೆ. ಇದರಿಂದ ನಾನು ವಿಚಲಿತಳಾಗಿದ್ದೇನೆ ಹೇಳಿದ್ದಳು. ಮೂರು ವರ್ಷಗಳ ಹಿಂದೆ ಹಿಸಾರ್‌ನಲ್ಲಿನ ಮನೆಯಲ್ಲಿ ಅಮಲು ಪದಾರ್ಥ ಬೆರೆಸಿದ ಆಹಾರವನ್ನು ಸೋನಾಲಿಗೆ ನೀಡಿದ್ದ. ಆಕೆಗೆ ಪ್ರಜ್ಞೆ ತಪ್ಪಿದಾಗ ಅವಳ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಕೂಡ ಮಾಡಿದ್ದ. ಈ ವಿಡಿಯೋವನ್ನು ತೋರಿಸಿ ಆಕೆಗೆ ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದ ಆತ, ಆ ಬಳಿಕವೂ ಹಲವು ಬಾರಿ ಅತ್ಯಾಚಾರ ಮಾಡಿದ್ದ ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಬಂಟ್ವಾಳ:ನೇತ್ರಾವತಿ ನದಿಗೆ ಕಾಲು ಜಾರಿ ಬಿದ್ದ ಪಿಯುಸಿ ವಿದ್ಯಾರ್ಥಿ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist