ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೊಹ್ಲಿಯ ಸಿಡಿಲಬ್ಬರದ ಶತಕ - ಹೈದರಾಬಾದ್ ವಿರುದ್ಧ ಅಮೋಘ ಜಯ ; ಟಾಪ್-4 ಕ್ಕೆ ಆರ್ ಸಿಬಿ ಎಂಟ್ರಿ

Twitter
Facebook
LinkedIn
WhatsApp
Untitled 9

ಹೈದರಾಬಾದ್: ಪ್ಲೇ ಆಫ್ ಸ್ಥಾನಕ್ಕೇರಲು ತೀವ್ರ ಹೋರಾಟ ಸಂಘಟಿಸುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಗುರುವಾರ ನಡೆದ ಪಂದ್ಯದಲ್ಲಿ ಅಮೋಘ ಜಯ ಸಾಧಿಸಿದೆ.

ಟಾಸ್ ಗೆದ್ದ ಫಾಫ್ ಡು ಪ್ಲೆಸಿಸ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಹೈದರಾಬಾದ್ ಹೆನ್ರಿಕ್ ಕ್ಲಾಸೆನ್ ಅವರ ಅತ್ಯಮೋಘ ಶತಕದ ನೆರವಿನಿಂದ 5 ವಿಕೆಟ್ ನಷ್ಟಕ್ಕೆ 186 ರನ್ ಕಲೆ ಹಾಕಿತು. ದಕ್ಷಿಣ ಆಫ್ರಿಕಾ ಮೂಲದ ಕ್ಲಾಸೆನ್ 51 ಎಸೆತಗಳಲ್ಲಿ ಸ್ಪೋಟಕ ಆಟವಾಡಿ 104 ರನ್ ಗಳಿಸಿ ಔಟಾದರು. 8ಬೌಂಡರಿ ಮತ್ತು 6 ಸಿಕ್ಸರ್ ಸಿಡಿಸಿದ್ದರು. ಅಭಿಷೇಕ್ ಶರ್ಮಾ 11, ತ್ರಿಪಾಠಿ 15, ನಾಯಕ ಮಾರ್ಕ್ರಾಮ್ 18, ಹ್ಯಾರಿ ಬ್ರೂಕ್ ಔಟಾಗದೆ 27, ಗ್ಲೆನ್ ಫಿಲಿಪ್ಸ್ 5 ರನ್ ಗಳಿಸಿ ಔಟಾದರು.

ಗುರಿ ಬೆನ್ನಟ್ಟಿದ ಆರ್ ಸಿಬಿ ಪರ ವಿರಾಟ್ ಕೊಹ್ಲಿ ಮತ್ತು ನಾಯಕ ಪ್ಲೆಸಿಸ್ ಭರ್ಜರಿ ಜತೆಯಾಟವಾಡಿದರು. 19.2 ಓವರ್ ಗಳಲ್ಲಿ 187 ರನ್ ಗಳಿಸುವ ಮೂಲಕ ಅನಿವಾರ್ಯವಾಗಿದ್ದ ಪಂದ್ಯದಲ್ಲಿ 8 ವಿಕೆಟ್ ಗಳ ಭರ್ಜರಿ ಜಯ ತನ್ನದಾಗಿಸಿಕೊಂಡಿತು. ಜವಾಬ್ದಾರಿಯುತ ಆಟವಾಡಿದ ಕೊಹ್ಲಿ 62 ಎಸೆತಗಳಿಂದ ಅಮೋಘ ಶತಕ ಸಿಡಿಸಿ ಔಟಾದರು. ನಾಲ್ಕು ವರ್ಷಗಳ ನಂತರ ಐಪಿಎಲ್‌ನಲ್ಲಿ ಶತಕ ಸಿಡಿಸಿ ಸಂಭ್ರಮಿಸಿದರು. 12 ಬೌಂಡರಿ ಮತ್ತು 4 ಸಿಕ್ಸರ್ ಅವರ ಇನ್ನಿಂಗ್ಸ್ ನಲ್ಲಿ ಒಳಗೊಂಡಿತ್ತು. ಪ್ಲೆಸಿಸ್ ನಾಯಕನ ಆಟವಾಡಿ ಕೊಹ್ಲಿಗೆ ಸಾಥ್ ನೀಡಿದರು. 47 ಎಸೆತಗಳಲ್ಲಿ 71 ರನ್ ಗಳಿಸಿ ಔಟಾದರು.13 ಪಂದ್ಯಗಳಿಂದ 14 ಅಂಕವನ್ನು ಆರ್ ಸಿಬಿ ಗಳಿಸಿದ್ದು , ಮುಂಬೈ ಕೂಡ 13 ಪಂದ್ಯಗಳಿಂದ 14 ಅಂಕ ಹೊಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist